12:48 PM Sunday16 - November 2025
ಬ್ರೇಕಿಂಗ್ ನ್ಯೂಸ್
ಬೆಂಗಳೂರು: ಮತ ಕಳ್ಳತನ ವಿರುದ್ಧ ಯುವ ಕಾಂಗ್ರೆಸ್ ಬೃಹತ್ ಪ್ರತಿಭಟನೆ ಬೆಳಗಾವಿ ಮೃಗಾಲಯದಲ್ಲಿ 19 ಜಿಂಕೆಗಳ ಸಾವು: ತನಿಖೆಗೆ ಅರಣ್ಯ ಸಚಿವ ಈಶ್ವರ ಖಂಡ್ರೆ… ಮೂಡಿಗೆರೆಯಲ್ಲಿ 80 ಮೂಟೆ ಕಾಳುಮೆಣಸು ಕಳ್ಳತನ ಪ್ರಕರಣ: ಮಹಿಳಾ ಆರೋಪಿ ಬಂಧನ, ಮೂವರು… ಸಿಎಂ ಕಾನೂನು ಸಲಹೆಗಾರ ಪೊನ್ನಣ್ಣ ವಿರುದ್ಧ ಅವಾಚ್ಯ ಪದ ಬಳಕೆ: ಆರೋಪಿ ವಿರುದ್ಧ… Kodagu | ಮಡಿಕೇರಿ ಸಮೀಪದ ಚೆಂಬು ಗ್ರಾಮದಲ್ಲಿ ಮನೆಗಳ್ಳತನ ಪ್ರಕರಣ: ಇಬ್ಬರ ಬಂಧನ ವೈಚಾರಿಕ-ವೈಜ್ಞಾನಿಕ ಮನೋಭಾವದ ಮಕ್ಕಳ ಮೇಲೆ ದೇಶದ ಭವಿಷ್ಯ ನಿಂತಿದೆ: ಸಿಎಂ ಸಿದ್ದರಾಮಯ್ಯ ಬಿಹಾರ ಚುನಾವಣೆ ಫಲಿತಾಂಶದಿಂದ ಪ್ರಧಾನಿ ಮೋದಿಯವರ ಜನಪ್ರೀಯತೆ ಮತ್ತೆ ದೃಢಪಟ್ಟಿದೆ: ಮಾಜಿ ಸಿಎಂ… ಚಾಕುವಿನಿಂದ ಇರಿದು ಕಾರ್ಮಿಕನ ಕೊಲೆ: ಅಸ್ಸಾಂ ಮೂಲದ ಆರೋಪಿ ಅಂದರ್; ತಪ್ಪುಮಾಹಿತಿ ನೀಡಿದಾತ… ಮೇಕೆದಾಟು ವಿರುದ್ಧದ ತಮಿಳುನಾಡು ಅರ್ಜಿ ಸುಪ್ರೀಂ ಕೋರ್ಟ್ ನಿಂದ ವಜಾ: ರಾಜ್ಯಕ್ಕೆ ಮಹಾಜಯ Shivamogga | ತೀರ್ಥಹಳ್ಳಿ ಸಮೀಪದ ತಳುವೆ ಬಳಿ ಅಪಘಾತ: ವ್ಯಕ್ತಿಯೋರ್ವನ ಕಾಲು ಕಟ್

ಇತ್ತೀಚಿನ ಸುದ್ದಿ

ಚಿಕ್ಕಮಗಳೂರು: ಕಾಡಾನೆ ದಾಳಿಗೆ ಯುವಕ ಬಲಿ; 2 ತಿಂಗಳ ಅವಧಿಯಲ್ಲಿ 3ನೇ ಸಾವು; ಅರಣ್ಯ ಇಲಾಖೆ ವಿರುದ್ಧ ಹೆಚ್ಚಿದ ಆಕ್ರೋಶ

22/11/2023, 20:05

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಕಾಫಿನಾಡು ಚಿಕ್ಕಮಗಳೂರಿನಲ್ಲಿ ಕಾಡಾನೆ ದಾಳಿಗೆ ಮತ್ತೊಂದು ಬಲಿಯಾಗಿದೆ. ಮೂಡಿಗೆರೆ ತಾಲೂಕಿನ ಬೈರಾಪುರ ಗ್ರಾಮದಲ್ಲಿ ಘಟನೆ ನಡೆದಿದೆ.
ಎರಡು ತಿಂಗಳ ಅವಧಿಯಲ್ಲಿ ಇದು ಮೂರನೇ ಸಾವಾಗಿದೆ.
ಇಬ್ಬರು ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ.
ಕಾರ್ತಿಕ್ ಗೌಡ (26) ಮೃತ ದುರ್ದೈವಿಯಾಗಿದ್ದಾರೆ. ವಿಶೇಷವೆಂದರೆ ಆನೆ ನಿಗ್ರಹ ಪಡೆಯ ಸದಸ್ಯನೇ ಆಗಿರುವ ಕಾರ್ತಿಕ್ ಗೌಡ ಆನೆ ದಾಳಿಗೆ ಬಲಿಯಾಗಿದ್ದಾರೆ.
20 ದಿನಗಳ ಅಂತರದಲ್ಲಿ ಕಾಡಾನೆ ದಾಳಿಗೆ ಇಬ್ಬರು ಸಾವನ್ನಪ್ಪಿದ್ದಾರೆ.
ಮೃತ ಕಾರ್ತಿಕ್ ಮೂಡಿಗೆರೆ ತಾಲೂಕಿನ ಗೌಡಹಳ್ಳಿ ನಿವಾಸಿಯಾಗಿದ್ದು, ಸರ್ಕಾರ ರಚಿಸಿ್ ಆನೆ ನಿಗ್ರಹ ಪಡೆಯಲ್ಲಿ ಕೆಲಸ ಮಾಡುತ್ತಿದ್ದರು. ಬೈರಾಪುರದಲ್ಲಿ ಆನೆ ಓಡಿಸುವಾಗ ಆನೆ ದಾಳಿಗೆ ಸಾವನ್ನಪ್ಪಿದ್ದಾರೆ. ಅರಣ್ಯ ಇಲಾಖೆ ವಿರುದ್ಧ ಸ್ಥಳಿಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
20 ದಿನದ ಹಿಂದೆ ಆಲ್ದೂರಿನಲ್ಲಿ ವೀಣಾ ಎಂಬವರು ಸಾವನ್ನಪ್ಪಿದ್ದಾರೆ. ಒಂದೂವರೆ ತಿಂಗಳ ಹಿಂದೆ ಆಲ್ದೂರು ಸಮೀಪ ಚಿನ್ನಿ ಎಂಬುವರು ಸಾವನ್ನಪ್ಪಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು