3:30 PM Wednesday10 - June 2026
ಬ್ರೇಕಿಂಗ್ ನ್ಯೂಸ್
ಸಿಎಂ ಕಾನೂನು ಸಲಹೆಗಾರ ಸ್ಥಾನಕ್ಕೆ ಎ. ಎಸ್. ಪೊನ್ನಣ್ಣ ರಾಜೀನಾಮೆ: ಸಚಿವ ಸ್ಥಾನ… Kodagu | ನಾಪೋಕ್ಲು: ಕಾರು – ಬೈಕ್ ಅಪಘಾತ- ಸವಾರ ಸ್ಥಳದಲ್ಲೇ ಸಾವು Bangalore | ನೌಕರಿ ಕೊಡಿಸುವುದಾಗಿ 40 ಮಂದಿಗೆ 5.3 ಕೋಟಿ ವಂಚನೆ: ಅಪ್ಪ… ಶಕ್ತಿ ಯೋಜನೆಯಿಂದ ವ್ಯಾಪಾರ ನಷ್ಟ, ಸಾಲಗಾರರ ಕಾಟ: ಮಂಡ್ಯದಲ್ಲಿ ಪತ್ನಿ, ಮಗನನ್ನು ಕೊಂದು… ರಾಜ್ಯಸಭೆ ಚುನಾವಣೆ: ರಾಜ್ಯದಿಂದ ಕಾಂಗ್ರೆಸ್ಸಿನ ಮೂವರು, ಓರ್ವ ಬಿಜೆಪಿ ಅಭ್ಯರ್ಥಿ ಅವಿರೋಧ ಆಯ್ಕೆ ಬಿಪಿಎಲ್ ಮಾತ್ರವಲ್ಲ, ಎಪಿಎಲ್ ಕುಟುಂಬಗಳಿಗೂ ಗುಡ್‌ನ್ಯೂಸ್: ಆರೋಗ್ಯ ಸಚಿವ ಖಾದರ್ ಜಲಸಂಪನ್ಮೂಲ ಖಾತೆಯಲ್ಲೇ ಮುಂದುವರಿಯುವೆ; ನಂಗೆ ಬೆಂಗಳೂರು ಉಸ್ತುವಾರಿಯೂ ಬೇಡ, ಏನೂ ಬೇಡ: ರಾಮಲಿಂಗಾ… ಇಂಡಿಯಾ ಮೈತ್ರಿಕೂಟದ ಸಭೆ: ಎಸ್ ಐಆರ್ ವಿರುದ್ಧ ಸುಪ್ರೀಂಕೋರ್ಟ್ ಸಿಜೆಗೆ ದೂರು ಸೇರಿದಂತೆ… ಮಳೆಗಾಲ ಎಫೆಕ್ಟ್: ಜೂನ್ 10ರಿಂದ ಕೊಡಗು ಜಿಲ್ಲೆಯಲ್ಲಿ ಬುಲೆಟ್ ಟ್ಯಾಂಕರ್ ಸಹಿತ ಭಾರೀ… ಸೈಟ್ ಇಲ್ಲದವರಿಗೆ ಉಚಿತ ಸೈಟ್ ಭಾಗ್ಯ: ಮುಖ್ಯಮಂತ್ರಿ ಡಿಕೆಶಿ ಮಹತ್ವದ ಘೋಷಣೆ

ಇತ್ತೀಚಿನ ಸುದ್ದಿ

ಚಿಕ್ಕಮಗಳೂರು: ಕಾಡಾನೆ ದಾಳಿಗೆ ಯುವಕ ಬಲಿ; 2 ತಿಂಗಳ ಅವಧಿಯಲ್ಲಿ 3ನೇ ಸಾವು; ಅರಣ್ಯ ಇಲಾಖೆ ವಿರುದ್ಧ ಹೆಚ್ಚಿದ ಆಕ್ರೋಶ

22/11/2023, 20:05

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಕಾಫಿನಾಡು ಚಿಕ್ಕಮಗಳೂರಿನಲ್ಲಿ ಕಾಡಾನೆ ದಾಳಿಗೆ ಮತ್ತೊಂದು ಬಲಿಯಾಗಿದೆ. ಮೂಡಿಗೆರೆ ತಾಲೂಕಿನ ಬೈರಾಪುರ ಗ್ರಾಮದಲ್ಲಿ ಘಟನೆ ನಡೆದಿದೆ.
ಎರಡು ತಿಂಗಳ ಅವಧಿಯಲ್ಲಿ ಇದು ಮೂರನೇ ಸಾವಾಗಿದೆ.
ಇಬ್ಬರು ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ.
ಕಾರ್ತಿಕ್ ಗೌಡ (26) ಮೃತ ದುರ್ದೈವಿಯಾಗಿದ್ದಾರೆ. ವಿಶೇಷವೆಂದರೆ ಆನೆ ನಿಗ್ರಹ ಪಡೆಯ ಸದಸ್ಯನೇ ಆಗಿರುವ ಕಾರ್ತಿಕ್ ಗೌಡ ಆನೆ ದಾಳಿಗೆ ಬಲಿಯಾಗಿದ್ದಾರೆ.
20 ದಿನಗಳ ಅಂತರದಲ್ಲಿ ಕಾಡಾನೆ ದಾಳಿಗೆ ಇಬ್ಬರು ಸಾವನ್ನಪ್ಪಿದ್ದಾರೆ.
ಮೃತ ಕಾರ್ತಿಕ್ ಮೂಡಿಗೆರೆ ತಾಲೂಕಿನ ಗೌಡಹಳ್ಳಿ ನಿವಾಸಿಯಾಗಿದ್ದು, ಸರ್ಕಾರ ರಚಿಸಿ್ ಆನೆ ನಿಗ್ರಹ ಪಡೆಯಲ್ಲಿ ಕೆಲಸ ಮಾಡುತ್ತಿದ್ದರು. ಬೈರಾಪುರದಲ್ಲಿ ಆನೆ ಓಡಿಸುವಾಗ ಆನೆ ದಾಳಿಗೆ ಸಾವನ್ನಪ್ಪಿದ್ದಾರೆ. ಅರಣ್ಯ ಇಲಾಖೆ ವಿರುದ್ಧ ಸ್ಥಳಿಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
20 ದಿನದ ಹಿಂದೆ ಆಲ್ದೂರಿನಲ್ಲಿ ವೀಣಾ ಎಂಬವರು ಸಾವನ್ನಪ್ಪಿದ್ದಾರೆ. ಒಂದೂವರೆ ತಿಂಗಳ ಹಿಂದೆ ಆಲ್ದೂರು ಸಮೀಪ ಚಿನ್ನಿ ಎಂಬುವರು ಸಾವನ್ನಪ್ಪಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು