11:23 AM Monday9 - February 2026
ಬ್ರೇಕಿಂಗ್ ನ್ಯೂಸ್
ಎಚ್ ಡಿ ಕೋಟೆ | ಕಂಚಮಳ್ಳಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಮೇಲೆ ಭಾರೀ… Kodagu | ಕುಶಾಲನಗರ: ರಸ್ತೆಯಲ್ಲೇ ಧಗಧಗನೆ ಹೊತ್ತಿ ಉರಿದ ಕ್ರೇಟಾ ಕಾರು; ಅದೃಷ್ಟವಶಾತ್… ಇ-ಸ್ವತ್ತು ತಂತ್ರಾಂಶದಲ್ಲಿ ಬದಲಾವಣೆ ಮೂಲಕ ಸಾರ್ವಜನಿಕರಿಗೆ ತ್ವರಿತ ಸೇವೆಗೆ ಕ್ರಮ: ಗ್ರಾಮೀಣಾಭಿವೃದ್ಧಿ ಸಚಿವ… ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಕೃಷ್ಣಾ ನದಿ ನೀರು; ಶೀಘ್ರವೇ ಆಂಧ್ರ ಸಿಎಂ ಜತೆ… ರಾಜ್ಯ ಸರ್ಕಾರ ಎಲ್ಲ ರೈತರ ಸಾಲದ ಮೇಲಿನ ಬಡ್ಡಿ ಮನ್ನಾ ಮಾಡಲಿ: ಮಾಜಿ… NDPS ಕಾಯ್ದೆ: ಅಬಕಾರಿ ಅಧಿಕಾರಿಗಳು ವಶಪಡಿಸಿಕೊಂಡಿದ್ದ 5.71 ಕೋಟಿ ಮೌಲ್ಯದ ಮಾದಕ ವಸ್ತುಗಳು… Mangaluru | ಮೆಟ್ರೋ ದರ ಏರಿಕೆ ಬಗ್ಗೆ ಕೇಂದ್ರ ನಮ್ಮ ಅಭಿಪ್ರಾಯ ಕೇಳಿಲ್ಲ:… ಕಾಂಗ್ರೆಸ್‌ನ ಲೂಟಿ ನೋಡಿ ಗಾಂಧೀಜಿಯ ಕೈಗೆ ಕೋಲು ಬಂದಿದೆ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ರಾಜ್ಯ ಆಹಾರ ಆಯೋಗದ ಅಧ್ಯಕ್ಷರ ತಂಡದಿಂದ ವಿವಿಧೆಡೆ ದಿಢೀರ್ ಭೇಟಿ: ಪರಿಶೀಲನೆ *ಕರಾವಳಿವರೆಗೆ ವಂದೇ ಭಾರತ್ ವಿಸ್ತರಿಸುವಂತೆ ರೈಲ್ವೆ ಸಚಿವರಿಗೆ ಸಂಸದ ಶ್ರೀನಿವಾಸ ಪೂಜಾರಿ ಮನವಿ*

ಇತ್ತೀಚಿನ ಸುದ್ದಿ

ಚಿಕ್ಕಮಗಳೂರು: ಮತ್ತೆ ಮುಂದುವರಿದ ಕಾಡಾನೆ ಹಾವಳಿ; ಹೆದ್ದಾರಿ ಬದಿಯ ಗ್ರಾಮಕ್ಕೆ ಲಗ್ಗೆ; ಲಕ್ಷಾಂತರ ಮೌಲ್ಯದ ಬೆಳೆ ನಾಶ

21/03/2024, 12:49

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಕಾಫಿನಾಡು ಚಿಕ್ಕಮಗಳೂರಲ್ಲಿ ಕಾಡಾನೆಗಳ ಹಾವಳಿ ಮತ್ತೆ ಮುಂದುವರಿದಿದೆ. ರಾಷ್ಟ್ರೀಯ ಹೆದ್ದಾರಿ ಪಕ್ಕದ ಗ್ರಾಮಕ್ಕೆ ಬಂದ ಕಾಡಾನೆ ತೋಟಗಳಿಗೆ ನುಗ್ಗಿ ಅಡಿಕೆ, ಬಾಳೆ, ಕಾಫಿ, ಮೆಣಸು ಬೆಳೆ ನಾಶಪಡಿಸಿದೆ.


ಆನೆ ದಾಳಿಗೆ ಲಕ್ಷಾಂತರ ರೂಪಾಯಿ ಮೌಲ್ಯದ ಬೆಳೆ ನಾಶವಾಗಿದೆ. ಮೂಡಿಗೆರೆ ತಾಲೂಕಿನ ತರುವೆ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಚಾರ್ಮಾಡಿ ಘಾಟ್ ರಸ್ತೆಯ ಪಕ್ಕದಲ್ಲೇ ತರುವೆ ಗ್ರಾಮ ಇದೆ.
ರೈತ ನವೀನ್ ಎಂಬುವವರ ತೋಟಕ್ಕೆ ನುಗ್ಗಿದ ಕಾಡಾನೆ ಬೆಳೆ ನಾಶಪಡಿಸಿವೆ. ಕೊಟ್ಟಿಗೆಹಾರ ಸುತ್ತಮುತ್ತ ಗ್ರಾಮಗಳಲ್ಲಿ ಆನೆ ದಾಳಿ ಆತಂಕ ಎದುರಾಗಿದೆ.
ಕಾಫಿ ತೋಟದ ಕೂಲಿಗೆ ಬರಲು ಕಾರ್ಮಿಕರು ಹಿಂದೇಟು ಹಾಕುತ್ತಿದ್ದಾರೆ. ಬೆಳೆ ನಷ್ಟ, ಕೂಲಿ ಕಾರ್ಮಿಕರ ಕೊರತೆಯಿಂದಾಗಿ ಬೆಳೆಗಾರರು ಕಂಗಾಲಾಗಿದ್ದಾರೆ. 3-4 ತಿಂಗಳಿಂದ ಮೂಡಿಗೆರೆಯಲ್ಲಿ ನಿರಂತರ ಕಾಡಾನೆ ದಾಳಿ ಮುಂದುವರಿದಿದೆ.ರಾಜ್ಯ ಸರ್ಕಾರ ಹಾಗೂ ಅರಣ್ಯ ಇಲಾಖೆ ವಿರುದ್ಧ ಮೂಡಿಗೆರೆ ಜನರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು