11:04 PM Sunday9 - August 2026
ಬ್ರೇಕಿಂಗ್ ನ್ಯೂಸ್
ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:…

ಇತ್ತೀಚಿನ ಸುದ್ದಿ

ಚಿಕ್ಕಮಗಳೂರು: ಮತ್ತೆ ಮುಂದುವರಿದ ಕಾಡಾನೆ ಹಾವಳಿ; ಹೆದ್ದಾರಿ ಬದಿಯ ಗ್ರಾಮಕ್ಕೆ ಲಗ್ಗೆ; ಲಕ್ಷಾಂತರ ಮೌಲ್ಯದ ಬೆಳೆ ನಾಶ

21/03/2024, 12:49

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಕಾಫಿನಾಡು ಚಿಕ್ಕಮಗಳೂರಲ್ಲಿ ಕಾಡಾನೆಗಳ ಹಾವಳಿ ಮತ್ತೆ ಮುಂದುವರಿದಿದೆ. ರಾಷ್ಟ್ರೀಯ ಹೆದ್ದಾರಿ ಪಕ್ಕದ ಗ್ರಾಮಕ್ಕೆ ಬಂದ ಕಾಡಾನೆ ತೋಟಗಳಿಗೆ ನುಗ್ಗಿ ಅಡಿಕೆ, ಬಾಳೆ, ಕಾಫಿ, ಮೆಣಸು ಬೆಳೆ ನಾಶಪಡಿಸಿದೆ.


ಆನೆ ದಾಳಿಗೆ ಲಕ್ಷಾಂತರ ರೂಪಾಯಿ ಮೌಲ್ಯದ ಬೆಳೆ ನಾಶವಾಗಿದೆ. ಮೂಡಿಗೆರೆ ತಾಲೂಕಿನ ತರುವೆ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಚಾರ್ಮಾಡಿ ಘಾಟ್ ರಸ್ತೆಯ ಪಕ್ಕದಲ್ಲೇ ತರುವೆ ಗ್ರಾಮ ಇದೆ.
ರೈತ ನವೀನ್ ಎಂಬುವವರ ತೋಟಕ್ಕೆ ನುಗ್ಗಿದ ಕಾಡಾನೆ ಬೆಳೆ ನಾಶಪಡಿಸಿವೆ. ಕೊಟ್ಟಿಗೆಹಾರ ಸುತ್ತಮುತ್ತ ಗ್ರಾಮಗಳಲ್ಲಿ ಆನೆ ದಾಳಿ ಆತಂಕ ಎದುರಾಗಿದೆ.
ಕಾಫಿ ತೋಟದ ಕೂಲಿಗೆ ಬರಲು ಕಾರ್ಮಿಕರು ಹಿಂದೇಟು ಹಾಕುತ್ತಿದ್ದಾರೆ. ಬೆಳೆ ನಷ್ಟ, ಕೂಲಿ ಕಾರ್ಮಿಕರ ಕೊರತೆಯಿಂದಾಗಿ ಬೆಳೆಗಾರರು ಕಂಗಾಲಾಗಿದ್ದಾರೆ. 3-4 ತಿಂಗಳಿಂದ ಮೂಡಿಗೆರೆಯಲ್ಲಿ ನಿರಂತರ ಕಾಡಾನೆ ದಾಳಿ ಮುಂದುವರಿದಿದೆ.ರಾಜ್ಯ ಸರ್ಕಾರ ಹಾಗೂ ಅರಣ್ಯ ಇಲಾಖೆ ವಿರುದ್ಧ ಮೂಡಿಗೆರೆ ಜನರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು