6:07 AM Tuesday23 - September 2025
ಬ್ರೇಕಿಂಗ್ ನ್ಯೂಸ್
ಮುಂದಿನ ಒಲಂಪಿಕ್ಸ್ ಪದಕ ವಿಜೇತರಿಗೆ ಸರ್ಕಾರದಿಂದ 6 ಕೋಟಿ ನಗದು ಬಹುಮಾನ: ಮುಖ್ಯಮಂತ್ರಿ… ಜಿಎಸ್ ಟಿ ಜಾರಿ ಮಾಡಿದ್ದೂ ಮೋದಿ, ಜಿಎಸ್ ಟಿ ಹೆಚ್ಚೆಚ್ಚು ವಿಧಿಸಿದ್ದೂ ಮೋದಿಯವರೇ,… ಅಂತಾರಾಷ್ಟ್ರೀಯ ಬಾಲ್ಯ ಕ್ಯಾನ್ಸರ್ ಜಾಗೃತಿ: ಬೆಂಗಳೂರು ಇಸ್ಕಾನ್ ದೇವಾಲಯಕ್ಕೆ ಚಿನ್ನದ ಬಣ್ಣದ ಬೆಳಕು ನವೆಂಬರ್ ನಿಂದ ಮಾಹಿತಿ ಹಕ್ಕು ಅದಾಲತ್: ಮಾಹಿತಿ ಹಕ್ಕು ಅರ್ಜಿಗಳನ್ನು ಶೂನ್ಯಕ್ಕಿಳಿಸಲು ಗುರಿ ಪಿಡಿಒ ಜೇಷ್ಠಾತಾ ಪಟ್ಟಿ ನ್ಯಾಯಸಮ್ಮತವಾಗಿ ಅಂತಿಮಗೊಳಿಸಲು ಸೂಕ್ತ ಕ್ರಮ: ಸಚಿವ ಪ್ರಿಯಾಂಕ್‌ ಖರ್ಗೆ ಮಂಗಳೂರಿನಲ್ಲಿ ಧರ್ಮದ ಹೆಸರಲ್ಲಿ ಜೈಲಿಗೆ ಹೋದವರು, ಕೊಲೆ ಆದವರೆಲ್ಲಾ ಹಿಂದುಳಿದವರೇ ಆಗಿದ್ದಾರೆ: ಸಿಎಂ… ವಿರಾಜಪೇಟೆ ಆರೆಂಜ್ ಸ್ಪಾ -ಬ್ಯೂಟಿ ಪಾರ್ಲರ್ ದಾಳಿ ಪ್ರಕರಣ: ನಾಲ್ವರು ಪ್ರಮುಖ ಆರೋಪಿಗಳ… Kodagu | ಕುಶಾಲನಗರ: ಕಾವೇರಿ ನದಿಯಲ್ಲಿ ಮುಳುಗಿ ಕಾಡಾನೆ ದಾರುಣ ಸಾವು ಮಡಿಕೇರಿ ನಗರಸಭೆಯ ಮೇಲೆ ಲೋಕಾಯುಕ್ತ ದಿಢೀರ್ ದಾಳಿ: ಸಾರ್ವಜನಿಕರ ದೂರಿಗೆ ಸ್ಪಂದನೆ ಮೈಸೂರು ದಸರಾ ಉದ್ಘಾಟನೆಗೆ ಬಾನು ಮುಸ್ತಾಕ್: ತಡೆ ಕೋರಿ ಸಲ್ಲಿಸಿದ ಅರ್ಜಿ ಸುಪ್ರೀಂಕೋರ್ಟ್…

ಇತ್ತೀಚಿನ ಸುದ್ದಿ

ಚಿಕ್ಕಮಗಳೂರು: ವಕೀಲರ ಮೇಲೆ ಹಲ್ಲೆ; ಸಬ್ ಇನ್ಸ್‌ಪೆಕ್ಟರ್ ಸಹಿತ 6 ಮಂದಿ ಪೊಲೀಸರ ಅಮಾನತು

01/12/2023, 20:33

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಹೆಲ್ಮೆಟ್ ಹಾಕಿಲ್ಲ ಎಂದು ಚಿಕ್ಕಮಗಳೂರು ನಗರ ಪೊಲೀಸರು ವಕೀಲರ ಮೇಲೆ ಮನಸ್ಸೋ ಇಚ್ಛೆ ಹಲ್ಲೆ ನಡೆಸಿದ್ದ ಆರೋಪದಡಿ ಚಿಕ್ಕಮಗಳೂರು ಎಸ್ಪಿ ವಿಕ್ರಂ ಅಮಟೆ ಅವರು ನಗರ ಠಾಣೆಯ 6 ಮಂದಿ ಪೊಲೀಸರನ್ನು ಅಮಾನತು ಮಾಡಿದ್ದಾರೆ.
ಓರ್ವ ಪಿಎಸ್‍ಐ, ಓರ್ವ ಎ.ಎಸ್.ಐ. ಓರ್ವ ಹೆಡ್ ಕಾನ್ಸಟೇಬಲ್ ಸೇರಿದಂತೆ ಮೂವರು ಪೇದೆಗಳನ್ನ ಅಮಾನತು ಮಾಡಿದ್ದಾರೆ. ಗುರುವಾರ ರಾತ್ರಿ 8 ಗಂಟೆ ವೇಳೆಗೆ ನಗರದ ಮಾರ್ಕೆಟ್ ರಸ್ತೆಯಲ್ಲಿ ನಗರ ಠಾಣೆ ಮುಂಭಾಗ ಯುವ ವಕೀಲ ಪ್ರೀತಂ ಹೆಲ್ಮೆಟ್ ಹಾಕದೆ ಬೈಕಿನಲ್ಲಿ ಹೋಗುತ್ತಿದ್ದರು. ವಕೀಲನನ್ನ ಪ್ರಶ್ನಿಸಿದ ಪೊಲೀಸರು ಹಾಗೂ ವಕೀಲನ ಮಧ್ಯೆ ಮಾತಿನ ಚಕಮಕಿ ನಡೆದಿದೆ. ಬೈಕಿನ ಕೀ ಏಕೆ ತೆಗೆಯುತ್ತೀರಾ ಎಂದು ಪ್ರಶ್ನಿಸಿದ ವಕೀಲ ದಂಡ ಕಟ್ಟುತ್ತೇನೆ ಎಂದು ಪೊಲೀಸರ ಜೊತೆ ಮಾತಿನ ಚಕಮಕಿ ನಡೆಸಿದ್ದಾರೆ. ಠಾಣೆ ಎದುರೇ ಘಟನೆ ನಡೆದಿದ್ದರಿಂದ ಪೊಲೀಸರು ಆತನನ್ನ ಠಾಣೆಗೆ ಕರೆದೊಯ್ದು ಮನಸ್ಸೋ ಇಚ್ಛೆ ಹಲ್ಲೆ ಮಾಡಿದ್ದಾರೆಂದು ವಕೀಲರ ಸಂಘ ಆರೋಪಿಸಿದೆ. ವಕೀಲ ಪ್ರೀತಂ ಎದೆ ಹಾಗೂ ಬೆನ್ನಿಗೆ ಗಂಭೀರ ಗಾಯವಾಗಿದ್ದು ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ವಿಷಯ ತಿಳಿದು ಆಸ್ಪತ್ರೆಗೆ ಹೋಗಿ ಆತನನ್ನ ನೋಡಿಕೊಂಡು ಠಾಣೆಗೆ ಬಂದ ವಕೀಲರ ಸಂಘ ಇಡೀ ರಾತ್ರಿ ಪೊಲೀಸ್ ಠಾಣೆ ಮುಂದೆ ಬೀಡುಬಿಟ್ಟಿತ್ತು. ಅವರನ್ನ ಅರೆಸ್ಟ್ ಮಾಡಿ ಎಂದು ಆಗ್ರಹಿಸಿತ್ತು. ಆದರೆ, ಪೊಲೀಸರು ವಿಚಾರಣೆಗೊಳಪಡಿಸುತ್ತೇವೆ ಎಂದಾಗ ವಕೀಲರು ವಿಚಾರಣೆ ಬೇಡ ಕೇಸ್ ದಾಖಲಿಸಿ ಎಂದು ಬಂಧಿಸಿ ಎಂದು ಆಗ್ರಹಿಸಿದ್ದರು. ಪ್ರೀತಂ ಮೇಲೆ ಹಲ್ಲೆ ಮಾಡಿದ ಪೇದೆಯನ್ನ ಆಸ್ಪತ್ರೆಯಲ್ಲಿ ರಿಪೋರ್ಟ್ ತೆಗೆದುಕೊಳ್ಳು ಕಳಿಸಿದ್ದಾರೆ. ಇದು ವಕೀಲರ ಆಕ್ರೋಶಕ್ಕೆ ಕಾರಣವಾಗಿತ್ತು. 307 ಕೇಸ್ ದಾಖಲಾಗಿದೆ. ಆರೋಪಿಗಳು ಠಾಣೆಯ ಒಳಗೆ ಇದ್ದಾರೆ, ಬಂಧಿಸಿ ಎಂದು ಪಟ್ಟು ಹಿಡಿದಿದ್ದರು. ಸುಮಾರು ಆರು ಗಂಟೆಗಳ ವಕೀಲರ ಹೋರಾಟದ ಫಲವಾಗಿ ಎಸ್ಪಿ 6 ಮಂದಿ ಪೊಲೀಸರನ್ನ ಅಮಾನತು ಮಾಡಿ ವಿಚಾರಣೆಗೆ ಡಿ.ವೈ.ಎಸ್.ಪಿ. ನೇತೃತ್ವದ ತಂಡ ರಚಿಸಿದ್ದಾರೆ. ಆದರೆ, ವಕೀಲರ ಸಂಘ ಆರು ಜನರನ್ನ ಅಮಾನತು ಮಾಡಿ ಆದೇಶಿಸಿದ್ದಾರೆ. ಆರು ಜನ ಅರೆಸ್ಟ್ ಆಗುವವರೆಗೂ ಹೋರಾಟ ನಿಲ್ಲಿಸುವುದಿಲ್ಲ ಎಂದು ಎಚ್ಚರಿಕೆ ನೀಡಿರೋ ವಕೀಲರ ಸಂಘ ಹೋರಾಟವನ್ನ ಮುಂದುವರೆಸಲು ಮುಂದಾಗಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು