10:38 PM Monday30 - March 2026
ಬ್ರೇಕಿಂಗ್ ನ್ಯೂಸ್
ಕೌಟುಂಬಿಕ ಕಲಹ: ಭದ್ರಾ ಬಲದಂಡೆ ನಾಲೆ ಬ್ರಿಡ್ಜ್ ನಿಂದ ಹಾರಿ ಸೂಪರ್ ವೈಸರ್… ಗ್ಯಾಸ್ ಸಿಲಿಂಡರ್ ಗೆ ರೆಗ್ಯುಲೇಟರಿ ಅಳವಡಿಸುವಾಗ ಏಕಾಏಕಿ ಸ್ಫೋಟ: ಮನೆ ಛಿದ್ರಛಿದ್ರ; 4… ಭಕ್ತ ಸಾಗರದ ಹರ್ಷೋದ್ಗಾರದೊಂದಿಗೆ ನಡೆದ ನಂಜನಗೂಡಿನ ದೊಡ್ಡ ಜಾತ್ರೆ: ಶ್ರೀ ಗೌತಮ ಪಂಚ… ನಿಯಂತ್ರಣ ತಪ್ಪಿದ ಸರಕಾರಿ ಬಸ್: ಮಡಿಕೇರಿ ಬಸ್ ನಿಲ್ದಾಣದಲ್ಲಿ ತಪ್ಪಿದ ಭಾರಿ ದುರಂತ Madikeri | ಕೊಡಗು ಜಿಲ್ಲೆಗೆ ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಡಾ. ಎಂ.… Kodagu | ಶನಿವಾರಸಂತೆ: ಟ್ರ್ಯಾಕ್ಟರ್ -ಕಾರು ಅಪಘಾತ; ಟ್ರ್ಯಾಕ್ಟರ್ ಚಾಲಕ ಸಾವು ರಾಜ್ಯದಲ್ಲಿ ಆಟೋ ಎಲ್‌ಪಿಜಿ ಕೊರತೆ ಇಲ್ಲ: ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ… ಮಡಿಕೇರಿ: ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಸರಕಾರಿ ಶುಶ್ರೂಷಾ ಕಾಲೇಜು 2ನೇ ಘಟಿಕೋತ್ಸವ ಕೇಂದ್ರ ಸರಕಾರವನ್ನು ಟೀಕೆ ಮಾಡುವುದರಲ್ಲೇ 3 ವರ್ಷಗಳ ಕಾಲಹರಣ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ… ಕೈ ನಾಯಕರ ಸಂಧಾನ ಯಶಸ್ವಿ: ದಾವಣಗೆರೆ ದಕ್ಷಿಣ ಬಂಡಾಯ ಅಭ್ಯರ್ಥಿ ಪೈಲ್ವಾನ್ ಸ್ಪರ್ಧೆಯಿಂದ…

ಇತ್ತೀಚಿನ ಸುದ್ದಿ

ಚಿಕ್ಕಮಗಳೂರು: ನರಹಂತಕ ಸಲಗ ವಿರುದ್ಧ ಕಾರ್ಯಾಚರಣೆ; ಮತ್ತೊಂದು ಪುಂಡಾನೆ ಸೆರೆ

03/12/2022, 19:50

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಕಾಫಿನಾಡು ಚಿಕ್ಕಮಗಳೂರಿನಲ್ಲಿ ವಿವಿಧ ಕಡೆ ಜನರ ಜೀವ ಬಲಿ ಹಾಗೂ ತೊಂದರೆ ನೀಡುತ್ತಿದ್ದ ಮತ್ತೊಂದು ಪುಂಡಾನೆ ಸೆರೆ ಹಿಡಿಯಲಾಗಿದೆ.
ಮೂಡಿಗೆರೆ ತಾಲೂಕಿನ ತಳವಾರ ಗ್ರಾಮದಲ್ಲಿ ಕಾಡಾನೆ ಸೆರೆ ಹಿಡಿಯಲಾಗಿದೆ. ಕಳೆದ ಮೂರು ತಿಂಗಳಲ್ಲಿ ಮೂವರನ್ನು ಬಲಿ ತೆಗೆದುಕೊಂಡಿದ್ದ ಕಾಡಾನೆಗಳು ಬಹಳಷ್ಟು ಭೀತಿಯನ್ನು ಜನರಲ್ಲಿ ಉಂಟು ಮಾಡಿತ್ತು. ಈ ಹಿನ್ನೆಲೆಯಲ್ಲಿ ಉಪಟಳ ನೀಡುತ್ತಿದ್ದ ಮೂರು ಕಾಡಾನೆಗಳನ್ನು ಸೆರೆಹಿಡಿಯಲು ರಾಜ್ಯ ಸರ್ಕಾರ ಅನುಮತಿ ನೀಡಿತ್ತು.

ಐದು ದಿನಗಳ ಹಿಂದೆ ಮೊದಲ ಯಶ ಕಂಡಿದ್ದ ಅರಣ್ಯ ಇಲಾಖೆ ಅಧಿಕಾರಿಗಳು ಕುಂಡ್ರ ಗ್ರಾಮದಲ್ಲಿ ಪುಂಡಾನೆ ಸೆರೆ ಹಿಡಿದಿದ್ದರು. ಇದೀಗ 2ನೇ ಕಾರ್ಯಾಚರಣೆಯಲ್ಲಿ ಮತ್ತೊಂದು ಪುಂಡಾನೆ ಬಲೆಗೆ ಬಿದ್ದಿದೆ. 5 ಸಾಕಾನೆಗಳಿಂದ ಸತತ ಕಾರ್ಯಾಚರಣೆಯನ್ನು ಅರಣ್ಯ ಇಲಾಖೆ ನಡೆಸುತ್ತಿದೆ.ಮತ್ತೊಂದು ಪುಂಡಾನೆಗಾಗಿ ಕಾರ್ಯಾಚರಣೆ ಮುಂದುವರಿದಿದೆ.


ಸದ್ಯ ಎರಡು ಪುಂಡಾನೆ ಸೆರೆಯಿಂದ ಕಾಫಿನಾಡಿಗರು ಸ್ವಲ್ಪ ಮಟ್ಟಿಗೆ ನಿಟ್ಟಿಸಿರು ಬಿಟ್ಟಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು