ಇತ್ತೀಚಿನ ಸುದ್ದಿ
ಚಿಕ್ಕಮಗಳೂರು: ನರಹಂತಕ ಸಲಗ ವಿರುದ್ಧ ಕಾರ್ಯಾಚರಣೆ; ಮತ್ತೊಂದು ಪುಂಡಾನೆ ಸೆರೆ
03/12/2022, 19:50

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು
info.reporterkarnataka@gmail.com
ಕಾಫಿನಾಡು ಚಿಕ್ಕಮಗಳೂರಿನಲ್ಲಿ ವಿವಿಧ ಕಡೆ ಜನರ ಜೀವ ಬಲಿ ಹಾಗೂ ತೊಂದರೆ ನೀಡುತ್ತಿದ್ದ ಮತ್ತೊಂದು ಪುಂಡಾನೆ ಸೆರೆ ಹಿಡಿಯಲಾಗಿದೆ.
ಮೂಡಿಗೆರೆ ತಾಲೂಕಿನ ತಳವಾರ ಗ್ರಾಮದಲ್ಲಿ ಕಾಡಾನೆ ಸೆರೆ ಹಿಡಿಯಲಾಗಿದೆ. ಕಳೆದ ಮೂರು ತಿಂಗಳಲ್ಲಿ ಮೂವರನ್ನು ಬಲಿ ತೆಗೆದುಕೊಂಡಿದ್ದ ಕಾಡಾನೆಗಳು ಬಹಳಷ್ಟು ಭೀತಿಯನ್ನು ಜನರಲ್ಲಿ ಉಂಟು ಮಾಡಿತ್ತು. ಈ ಹಿನ್ನೆಲೆಯಲ್ಲಿ ಉಪಟಳ ನೀಡುತ್ತಿದ್ದ ಮೂರು ಕಾಡಾನೆಗಳನ್ನು ಸೆರೆಹಿಡಿಯಲು ರಾಜ್ಯ ಸರ್ಕಾರ ಅನುಮತಿ ನೀಡಿತ್ತು.
ಐದು ದಿನಗಳ ಹಿಂದೆ ಮೊದಲ ಯಶ ಕಂಡಿದ್ದ ಅರಣ್ಯ ಇಲಾಖೆ ಅಧಿಕಾರಿಗಳು ಕುಂಡ್ರ ಗ್ರಾಮದಲ್ಲಿ ಪುಂಡಾನೆ ಸೆರೆ ಹಿಡಿದಿದ್ದರು. ಇದೀಗ 2ನೇ ಕಾರ್ಯಾಚರಣೆಯಲ್ಲಿ ಮತ್ತೊಂದು ಪುಂಡಾನೆ ಬಲೆಗೆ ಬಿದ್ದಿದೆ. 5 ಸಾಕಾನೆಗಳಿಂದ ಸತತ ಕಾರ್ಯಾಚರಣೆಯನ್ನು ಅರಣ್ಯ ಇಲಾಖೆ ನಡೆಸುತ್ತಿದೆ.ಮತ್ತೊಂದು ಪುಂಡಾನೆಗಾಗಿ ಕಾರ್ಯಾಚರಣೆ ಮುಂದುವರಿದಿದೆ.
ಸದ್ಯ ಎರಡು ಪುಂಡಾನೆ ಸೆರೆಯಿಂದ ಕಾಫಿನಾಡಿಗರು ಸ್ವಲ್ಪ ಮಟ್ಟಿಗೆ ನಿಟ್ಟಿಸಿರು ಬಿಟ್ಟಿದ್ದಾರೆ.