1:29 PM Sunday16 - August 2026
ಬ್ರೇಕಿಂಗ್ ನ್ಯೂಸ್
ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್… ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ

ಇತ್ತೀಚಿನ ಸುದ್ದಿ

ಚಿಕ್ಕೋಡಿಯಲ್ಲಿ ಪ್ರವಾಹ ಮುನ್ನೆಚ್ಚರಿಕೆ: ನದಿ ತೀರಕ್ಕೆ ಎನ್ ಡಿಆರ್ ಎಫ್‌ ತಂಡ ನಿಯೋಜನೆ

10/06/2021, 08:03

ಬೆಳಗಾವಿ(reporterkarnataka news): ಮಹಾರಾಷ್ಟ್ರದ ಕೊಂಕಣ ಪ್ರದೇಶದಲ್ಲಿ ಮಳೆ ಆರಂಭವಾಗಿರುವ ಹಿನ್ನೆಲೆಯಲ್ಲಿ ಚಿಕ್ಕೋಡಿ ತಾಲೂಕಿನ ನದಿಗಳಿಗೆ ಪ್ರವಾಹ ಭೀತಿ ಎದುರಾಗಿದ್ದು, ನದಿ ತೀರದಲ್ಲಿ ಮುಂಜಾಗ್ರತಾ ಕ್ರಮವಾಗಿ ಎನ್ ಡಿಆರ್ ಎಫ್‌ ತಂಡ ನಿಯೋಜಿಸಲಾಗಿದೆ.

ಚಿಕ್ಕೋಡಿ ತಾಲೂಕಿನ ಯಡೂರ ಗ್ರಾಮದ ಕೃಷ್ಣಾ ನದಿ ತೀರದಲ್ಲಿ 21 ಜನರ ರಾಷ್ಟ್ರೀಯ ವಿಪತ್ತು ನಿರ್ವಹಣಾ ತಂಡವನ್ನು ನಿಯೋಜಿಸಲಾಗಿದೆ.

ಯಡೂರ ಗ್ರಾಮಕ್ಕೆ ಈ ಎನ್ ಡಿ ಆರ್‌ಎಫ್‌ತಂಡ ಆಗಮಿಸಿದೆ. ಇಲ್ಲಿಯ ಸಿದ್ಧ ತೀರ್ಥಯಾತ್ರಿ  ನಿವಾಸದಲ್ಲಿ ಬೀಡುಬಿಟ್ಟಿದ್ದಾರೆ. 

ಕೊಂಕಣ ಪ್ರದೇಶಗಳಲ್ಲಿ ಮಳೆ ಪ್ರಾರಂಭವಾಗಿದೆ. ಹೀಗಾಗಿ ಚಿಕ್ಕೋಡಿ ತಾಲೂಕಿನ ಕೃಷ್ಣಾ, ವೇದಗಂಗಾ, ದೂಧಗಂಗಾ ನದಿಗಳಿಗೆ ಸಣ್ಣ ಪ್ರಮಾಣದಲ್ಲಿ ನೀರು ಏರಿಕೆಯಾಗುತ್ತಿದೆ. ಇದು ಪ್ರವಾಹದ ಮುನ್ಸೂಚನೆಯನ್ನು ನೀಡುತ್ತಿದ್ದು, ಈ ಕಾರಣಕ್ಕಾಗಿ ಯಾವುದೇ ಪ್ರಾಣ ಹಾನಿ ಆಗದಂತೆ ಜಿಲ್ಲಾಡಳಿತ ಹಾಗೂ ತಾಲೂಕಾಡಳಿತ ಮುಂಜಾಗ್ರತಾ ಕ್ರಮವಾಗಿ ಈ ರಾಷ್ಟ್ರೀಯ ವಿಪತ್ತು ನಿರ್ವಹಣಾ ತಂಡವನ್ನು ನಿಯೋಜಿಸಿದೆ.

ಇತ್ತೀಚಿನ ಸುದ್ದಿ

ಜಾಹೀರಾತು