ಇತ್ತೀಚಿನ ಸುದ್ದಿ
ಚಿಕ್ಕಮಗಳೂರು: ವಿದ್ಯುತ್ ಕಂಬಕ್ಕೆ ಡಿಕ್ಕಿಯಾಗಿ ಸರಕಾರಿ ಬಸ್ ಪಲ್ಟಿ: 40ಕ್ಕೂ ಅಧಿಕ ಪ್ರಯಾಣಿಕರು ಪವಾಡಸದೃಶ ಪಾರು
21/03/2026, 12:29
ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು
info.reporterkarnataka@gmail.com
ಚಿಕ್ಕಮಗಳೂರು ತಾಲೂಕಿನ ಕೊಡಾಳ್ ಬಳಿ ಸರ್ಕಾರಿ ಬಸ್ ಪಲ್ಟಿಯಾಗಿ 8 ಮಂದಿ ಗಾಯಗೊಂಡಿದ್ದಾರೆ.
ವಿದ್ಯುತ್ ಕಂಬಕ್ಕೆ ಡಿಕ್ಕಿಯಾಗಿ ಸರಕಾರಿ ಬಸ್ ಪಲ್ಟಿಯಾಗಿದೆ.
40ಕ್ಕೂ ಹೆಚ್ಚು ಪ್ರಯಾಣಿಕರು ಬಸ್ಸಿನಲ್ಲಿ ಪ್ರಯಾಣಿಸುತ್ತದೆ.


ಕುಕ್ಕನೂರಿನಿಂದ-ಧರ್ಮಸ್ಥಳಕ್ಕೆ ತೆರಳುತ್ತಿದ್ದ ಕಲ್ಯಾಣ ಕರ್ನಾಟಕ ಸಾರಿಗೆಗೆ ಸೇರಿದ ಬಸ್ ಇದಾಗಿದೆ. ಗಾಯಗೊಂಡ ಪ್ರಯಾಣಿಕರನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.
ಅಪಘಾತಕ್ಕೆ ಕಾರಣ ಏನೆಂದು ತಿಳುದು ಬಂದಿಲ್ಲ. ತಾಂತ್ರಿಕ ಅಥವಾ ನಿರ್ವಹಣೆ ಕಾರಣಕ್ಕೆ ಅಪಘಾತವಾಯ್ತೋ ಎನ್ನುವುದು ತಿಳಿದುಬಂದಿಲ್ಲ.
ಬಸ್ ಚಾಲಕನ ನಿಯಂತ್ರಣ ತಪ್ತೋ ಅಥವ ಅತಿಯಾದ ವೇಗವೋ ಸ್ಪಷ್ಟವಾಗಿಲ್ಲ.
ಚಿಕ್ಕಮಗಳೂರು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.












