2:52 AM Friday19 - December 2025
ಬ್ರೇಕಿಂಗ್ ನ್ಯೂಸ್
ಪೌರ ಕಾರ್ಮಿಕರು ಸೇರಿ ಎಲ್ಲ ಕಾರ್ಮಿಕರಿಗೆ ಪಾಲಿಕೆಯಿಂದಲೇ ನೇರ ವೇತನ ಪಾವತಿಗೆ ಕ್ರಮ:… ಕ್ರೆಡಲ್‌ನಿಂದ ರಾಷ್ಟ್ರೀಯ ಇಂಧನ ಸಂರಕ್ಷಣಾ ದಿನಾಚರಣೆ: ಚಿತ್ರ ಬಿಡಿಸಿದ ಪ್ರೌಢಶಾಲೆ ಮಕ್ಕಳು ಮಡಿಕೇರಿ ಹನಿಟ್ರ್ಯಾಪ್ ಪ್ರಕರಣ: ನಾಪತ್ತೆಯಾಗಿದ್ದ ಮತ್ತಿಬ್ಬರು ಆರೋಪಗಳ ಬಂಧನ Belagavi | ಆರೋಗ್ಯ ಸೇತು-ಸಂಚಾರಿ ಆರೋಗ್ಯ ಘಟಕಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ ವಲಸಿಗರಿಂದ ಅಕ್ರಮ ಚಟುವಟಿಕೆ: ಗಡಿಪಾರಿಗೆ ಸದನದಲ್ಲಿ ಶಾಸಕ ಡಾ. ಮಂತರ್ ಗೌಡ ಆಗ್ರಹ ಉರುಳಿಗೆ ಸಿಲುಕಿ ಹುಲಿ ಸಾವಿನ ಪ್ರಕರಣ: ಆರೋಪಿಗಳ ಪತ್ತೆಗೆ ಅರಣ್ಯ ಇಲಾಖೆ ಕಾರ್ಯಾಚರಣೆ ನಕಲಿ‌ ದಾಖಲೆ ಸೃಷ್ಟಿಸಿ 512 ಎಕರೆ ಅರಣ್ಯ-ಕಂದಾಯ ಭೂಮಿ ಕಬಳಿಕೆ ಯತ್ನ: ಆರೋಪಿ… ಇಂಜಿನಿಯರಿಂಗ್ ಸೀಟುಗಳನ್ನು ನುಂಗುತ್ತಿರುವ ಖಾಸಗಿ ವಿಶ್ವವಿದ್ಯಾಲಯಗಳು: ಸದನದ ಗಮನ ಸೆಳೆದ ಶಾಸಕ ಡಾ.… Kodagu | ಭಾಗಮಂಡಲ ಮೀಸಲು ಅರಣ್ಯದಲ್ಲಿ ಅಕ್ರಮ ಜಿಂಕೆ ಬೇಟೆ: ಆರೋಪಿಗಳು ಅರಣ್ಯ… 1600 ಪಿ.ಎಸ್.ಐ ಹುದ್ದೆಗಳ ನೇಮಕಾತಿಗೆ ಆರ್ಥಿಕ ಇಲಾಖೆಗೆ ಪ್ರಸ್ತಾವನೆ: ಗೃಹ ಸಚಿವ ಡಾ.ಜಿ.ಪರಮೇಶ್ವರ

ಇತ್ತೀಚಿನ ಸುದ್ದಿ

ಚಿಕ್ಕಮಗಳೂರು: ಮಹಾ ಮಳೆಗೆ ಹಳಿಗೆ ಹಾನಿ; ರೈಲ್ವೆ ಸಿಬ್ಬಂದಿಗಳ ಸಮಯ ಪ್ರಜ್ಞೆಯಿಂದ ತಪ್ಪಿದ ಭಾರೀ ದುರಂತ

23/10/2025, 13:48

info.reporterkarnataka@gmail.com

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಕಾಫಿನಾಡು ಚಿಕ್ಕಮಗಳೂರಿನಲ್ಲಿ ಮುಂದುವರಿದ ಭಾರೀ ಮಹಾಮಳೆಗೆ ರೈಲ್ವೆ ಹಳಿ ಕೊಚ್ಚಿ ಹೋಗಿದ್ದು, ಭಾರೀ ದುರಂತ ತಪ್ಪಿದೆ.
ರಾತ್ರಿ ಸುರಿದ ಧಾರಾಕಾರ ಮಳೆಗೆ ಚಿಕ್ಕಮಗಳೂರು ತಾಲೂಕಿನ ಕಣಿವೆ ಗ್ರಾಮದ ಬಳಿ ರೈಲ್ವೆ ಹಳಿ ಕೊಚ್ಚಿ ಹೋಗಿದೆ. ರೈಲ್ವೆ ಹಳಿಯ ಜಲ್ಲಿ ಕಲ್ಲುಗಳು ಕೊಚ್ಚಿ ಹೋಗಿ, ಹಳಿಗಳ ಬುಡದ ಅಡಿಪಾಯ ತಪ್ಪಿದೆ. ರೈಲ್ವೆ ಸಿಬ್ಬಂದಿಗಳ ಸಮಯ ಪ್ರಜ್ಞೆಯಿಂದ ಭಾರೀ ಅನಾಹುತ ತಪ್ಪಿದೆ.

ಚಿಕ್ಕಮಗಳೂರಿನಿಂದ ಶಿವಮೊಗ್ಗಕ್ಕೆ ಪ್ಯಾಸೆಂಜರ್ ರೈಲು ಹೊರಟಿತ್ತು. ಕಣಿವೆ ರೈಲ್ವೆ ಸ್ಟೇಷನ್ ಸಿಬ್ಬಂದಿಗಳಿಂದ ರೈಲು ಚಾಲಕನಿಗೆ ಮಾಹಿತಿ ನೀಡಲಾಯಿತು.
ಚಲಿಸುತ್ತಿದ್ದ ರೈಲನ್ನ ತಕ್ಷಣವೇ ಚಾಲಕ ನಿಲ್ಲಿಸಿದ್ದರು. ನಂತರ ಸಿಬ್ಬಂದಿಗಳು ಹಳಿ ದುರಸ್ತಿಪಡಿಸಿದರು. 30 ನಿಮಿಷ ರೈಲು ನಿಂತಿತ್ತು.
ಬೆಳಗ್ಗೆ 7.10ಕ್ಕೆ ಚಿಕ್ಕಮಗಳೂರು ನಗರದಿಂದ ರೈಲು ಹೊರಟಿತ್ತು. ರಾತ್ರಿ ಸುರಿದ ಭಾರಿ ಮಳೆಗೆ ರೈಲ್ವೆ ಹಳಿ ಕೊಚ್ಚಿ ಹೊಗಿತ್ತು.

ಇತ್ತೀಚಿನ ಸುದ್ದಿ

ಜಾಹೀರಾತು