4:23 PM Tuesday10 - March 2026
ಬ್ರೇಕಿಂಗ್ ನ್ಯೂಸ್
ಚಿಕ್ಕಮಗಳೂರು: ಹಸುವನ್ನು ತುಳಿದು ಕೊಂದ ಕಾಡಾನೆ; ಮಾಣಿಮಕ್ಕಿ ಗ್ರಾಮಸ್ಥರಲ್ಲಿ ಆತಂಕ ತೀರ್ಥಹಳ್ಳಿ: ಕುವೆಂಪು ಜೈವಿಕ ಅರಣ್ಯದಲ್ಲಿ ಹತ್ತಿಕೊಂಡ ಬೆಂಕಿ; ಅರಣ್ಯಾಧಿಕಾರಿಗಳ ದೌಡು ಝೂ ಅಭಿ ಇನ್ನಿಲ್ಲ: ಕಾಲು ನೋವಿನಿಂದ ಬಳಲುತ್ತಿದ್ದ ಮತ್ತಿಗೋಡು ಶಿಬಿರದ ಸಾಕಾನೆ ವಿವಿಧ ಬೇಡಿಕೆ ಆಗ್ರಹಿಸಿ ವಿದ್ಯುತ್ ಗುತ್ತಿಗೆದಾರರ ಸಂಘದಿಂದ ಮಾ.11ರಂದು ಪ್ರತಿಭಟನೆ ಮೋದಿ ದೇಶದ ಮಾರ್ಯಾದೆ ಹಾಳು‌‌ ಮಾಡುತ್ತಿದ್ದಾರೆ: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕಟು‌… ಕಂಬಳಕ್ಕೆ ರಾಜ್ಯ ಸರಕಾರದಿಂದ ಹಣಕಾಸಿನ ನೆರವು: ಬಂಟ್ವಾಳದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ಹೈಕಮಾಂಡ್ ಸೂಚಿಸಿದರೆ ಕ್ಷಣಾರ್ಧದಲ್ಲಿ ಕುರ್ಚಿ ಬಿಡಲು ಸಿದ್ಧ: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ಜನಾಶೀರ್ವಾದವಿದ್ದರೆ ಮಾತ್ರ ಮುಖ್ಯಮಂತ್ರಿಯಾಗಲು ಸಾಧ್ಯ: ಮೈಸೂರಿನಲ್ಲಿ‌ ಸಿಎಂ ಸಿದ್ದರಾಮಯ್ಯ Kodagu | ಮಹಿಳೆಯ ಗರ್ಭಾಶಯದಲ್ಲಿ 7 ಕೆಜಿ ಗೆಡ್ಡೆ: ಶಸ್ತ್ರಚಿಕಿತ್ಸೆ ಮೂಲಕ ಹೊರಕ್ಕೆ Kodagu | ದೊಡ್ಡಕೊಡ್ಲಿ ಗ್ರಾಮದಲ್ಲಿ ಕೋವಿಯಿಂದ ಗುಂಡು ಸಿಡಿದು ಯುವಕ ಸಾವು

ಇತ್ತೀಚಿನ ಸುದ್ದಿ

ಚಿಕ್ಕಮಗಳೂರು: ಮಲೆನಾಡಿನ ರಸ್ತೆ ದುಸ್ಥಿತಿ; ಪಂಚರ್ ಆದ ಆ್ಯಂಬ್ಯುಲೆನ್ಸ್ ನಲ್ಲಿ ನರಳಾಡಿದ ತುಂಬು ಗರ್ಭಿಣಿ

13/02/2023, 18:27

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಮಲೆನಾಡ ರಸ್ತೆ ದುಸ್ಥಿತಿಗೆ ಗರ್ಭಿಣಿ ಮಹಿಳೆಯೊಬ್ಬರು ಹೆರಿಗೆ ನೋವಿನಿಂದ ನಡು ರಸ್ತೆಯಲ್ಲೇ ನರಳಾಡಿದ ದಾರುಣ ಘಟನೆ ಕಳಸ ತಾಲ್ಲೂಕಿನ ಹಳುವಳ್ಳಿ ಗ್ರಾಮದಲ್ಲಿ ನಡೆದಿದೆ.

ಗರ್ಭಿಣಿ ಮಹಿಳೆಯನ್ನು ಕೊಂಡೊಯ್ಯುತ್ತಿದ್ದ ಆ್ಯಂಬ್ಯುಲೆನ್ಸ್ ರಸ್ತೆ ಗುಂಡಿಗೆ ಪಂಚರ್ ಆಗಿ ನಡು ರಸ್ತೆಯಲ್ಲೇ ಕೆಟ್ಟು ನಿಂತಿತು. ಅಂಬ್ಯುಲೆನ್ಸ್ ನಲ್ಲಿ ಇದ್ದ ಗರ್ಭಿಣಿ ಮಹಿಳೆ ಹೆರಿಗೆ ನೋವಿನಿಂದ ನರಳಾಡಲಾರಂಭಿಸಿದರು. ಮಲೆನಾಡ ರಸ್ತೆ ದುಸ್ಥಿತಿಗೆ ಪ್ರಾಣಾಪಾಯದ ಸ್ಥಿತಿಗೆ ಮಹಿಳೆ ತಲುಪಿದ್ದರು. ನಡು ರಸ್ತೆಯಲ್ಲಿ ಪಂಚರ್ ಜೊತೆಗೆ ಇಂಜಿನ್ ನ ದೋಷದಿಂದ ಕೆಟ್ಟು ಆಂಬುಲೆನ್ಸ್ ನಿಂತಿತು. ನಂತರ ಬೇರೊಂದು ವಾಹನದಲ್ಲಿ ಗರ್ಭಿಣಿಯನ್ನ ಕೊಪ್ಪಕ್ಕೆ ಕಳುಹಿಸಲಾಗಿದೆ ಮಾಗುಂಡಿ ಮೂಲದ ಶರಣ್ಯ ಎನ್ನುವ ಮಹಿಳೆಯನ್ನು ಕೊಪ್ಪ ಆಸ್ಪತ್ರೆಗೆ ಕರೆದೊಯ್ಯಲಾಗುತ್ತಿತ್ತು. ಕಳಸ ಟು ಬಾಳೆಹೊನ್ನೂರು ಮಾರ್ಗದ ಹಳುವಳ್ಳಿಯಲ್ಲಿ ಆಂಬುಲೆನ್ಸ್ ನಿಂತಿತು. ಕೊಪ್ಪ ಆಸ್ಪತ್ರೆಯಲ್ಲಿ ಗಂಡು ಮಗುವಿಗೆ ಮಹಿಳೆ ಶರಣ್ಯಜನ್ಮ ನೀಡಿದ್ದಾರೆ.
ಮೂಡಿಗೆರೆ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ
ರಸ್ತೆಗಳು ಗುಂಡಿಮಯವಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು