3:13 PM Tuesday23 - June 2026
ಬ್ರೇಕಿಂಗ್ ನ್ಯೂಸ್
ಟ್ರಾಫಿಕ್ ಸಮಸ್ಯೆಯಾಗಿದ್ದು ನಿಜ, ನೀಟ್ ವಿದ್ಯಾರ್ಥಿಗಳಿಗೆ ತೊಂದರೆಯಾಗಿದ್ದರೆ ಸಹಾಯ ಮಾಡ್ತೀವಿ: ಕೆಪಿಸಿಸಿ ಅಧ್ಯಕ್ಷ… ಚನ್ನಪಟ್ಟಣ | ಎಕ್ಸ್​ಪ್ರೆಸ್​ ರಸ್ತೆಯಲ್ಲಿ ಭೀಕರ ಅಪಘಾತ: ಕಾರಿನ ಚಕ್ರ ಸ್ಫೋಟಗೊಂಡು ಚಾಲಕ… ಹಸೆಮಣೆ ಏರಬೇಕಿದ್ದಾಕೆಗೆ ಪಾಪಿ ಯುವಕನಿಂದ ಬೆದರಿಕೆ: ಮಾನಕ್ಕೆ ಅಂಜಿ ಒಂದೇ ಕುಟುಂಬದ ಮೂವರು… ಚುನಾವಣೆಗಷ್ಟೇ ಅಲ್ಲ, ಸಿದ್ಧಾಂತದ ಬಲವರ್ಧನೆಗೆ ಕೆಪಿಸಿಸಿ ಅಧ್ಯಕ್ಷರಾಗಿ ಹರಿಪ್ರಸಾದ್ ಆಯ್ಕೆ: ಮಾಜಿ ಸಿಎಂ… ತೀರ್ಥಹಳ್ಳಿ | ಶಿವರಾಜಪುರ ಬಳಿ ಎರಡು ಕಾರುಗಳ ನಡುವೆ ಭೀಕರ ಅಪಘಾತ: ಸಂಪೂರ್ಣ… Bangalore | ಬಿಡದಿ ಟೌನ್‌ಶಿಪ್ ವಿರುದ್ಧ ನಿಖಿಲ್ ಕುಮಾರಸ್ವಾಮಿ ಪಾದಯಾತ್ರೆಗೆ ಗ್ರಾಮಸ್ಥರ ತಡೆ:… ಬೆಂಗಳೂರು ಅರಮನೆ ಮೈದಾನದಲ್ಲಿ ಬೃಹತ್ ಸಮಾರಂಭ: ಕೆಪಿಸಿಸಿ ಅಧ್ಯಕ್ಷ ಗದ್ದುಗೆ ಏರಿದ ಖಡಕ್… Bangalore | ನಾಗಸಂದ್ರ ಮೆಟ್ರೋ ನಿಲ್ದಾಣದ ತುರ್ತು ನಿರ್ಗಮನ ದ್ವಾರದಲ್ಲಿ ಶಾರ್ಟ್ ಸಕ್ಯೂಟ್;… ಮಸ್ಕಿ: ರಾಯಚೂರಿಗೆ AIIMS ಮಂಜೂರಾತಿಗಾಗಿ 1500 ದಿನಗಳ ಧರಣಿ ಸತ್ಯಾಗ್ರಹ: ಕಲ್ಯಾಣ ಕರ್ನಾಟಕದಾದ್ಯಂತ… Chitradurga | ಪರಶುರಾಂಪುರ: ಕಂದಾಯ ಇಲಾಖೆ ರಾಜಸ್ವ ನಿರೀಕ್ಷಕ ಎಸ್. ಆರ್. ರಾಜೇಶ್…

ಇತ್ತೀಚಿನ ಸುದ್ದಿ

ಚಿಕ್ಕಮಗಳೂರು: ಮಲೆನಾಡಿನ ರಸ್ತೆ ದುಸ್ಥಿತಿ; ಪಂಚರ್ ಆದ ಆ್ಯಂಬ್ಯುಲೆನ್ಸ್ ನಲ್ಲಿ ನರಳಾಡಿದ ತುಂಬು ಗರ್ಭಿಣಿ

13/02/2023, 18:27

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಮಲೆನಾಡ ರಸ್ತೆ ದುಸ್ಥಿತಿಗೆ ಗರ್ಭಿಣಿ ಮಹಿಳೆಯೊಬ್ಬರು ಹೆರಿಗೆ ನೋವಿನಿಂದ ನಡು ರಸ್ತೆಯಲ್ಲೇ ನರಳಾಡಿದ ದಾರುಣ ಘಟನೆ ಕಳಸ ತಾಲ್ಲೂಕಿನ ಹಳುವಳ್ಳಿ ಗ್ರಾಮದಲ್ಲಿ ನಡೆದಿದೆ.

ಗರ್ಭಿಣಿ ಮಹಿಳೆಯನ್ನು ಕೊಂಡೊಯ್ಯುತ್ತಿದ್ದ ಆ್ಯಂಬ್ಯುಲೆನ್ಸ್ ರಸ್ತೆ ಗುಂಡಿಗೆ ಪಂಚರ್ ಆಗಿ ನಡು ರಸ್ತೆಯಲ್ಲೇ ಕೆಟ್ಟು ನಿಂತಿತು. ಅಂಬ್ಯುಲೆನ್ಸ್ ನಲ್ಲಿ ಇದ್ದ ಗರ್ಭಿಣಿ ಮಹಿಳೆ ಹೆರಿಗೆ ನೋವಿನಿಂದ ನರಳಾಡಲಾರಂಭಿಸಿದರು. ಮಲೆನಾಡ ರಸ್ತೆ ದುಸ್ಥಿತಿಗೆ ಪ್ರಾಣಾಪಾಯದ ಸ್ಥಿತಿಗೆ ಮಹಿಳೆ ತಲುಪಿದ್ದರು. ನಡು ರಸ್ತೆಯಲ್ಲಿ ಪಂಚರ್ ಜೊತೆಗೆ ಇಂಜಿನ್ ನ ದೋಷದಿಂದ ಕೆಟ್ಟು ಆಂಬುಲೆನ್ಸ್ ನಿಂತಿತು. ನಂತರ ಬೇರೊಂದು ವಾಹನದಲ್ಲಿ ಗರ್ಭಿಣಿಯನ್ನ ಕೊಪ್ಪಕ್ಕೆ ಕಳುಹಿಸಲಾಗಿದೆ ಮಾಗುಂಡಿ ಮೂಲದ ಶರಣ್ಯ ಎನ್ನುವ ಮಹಿಳೆಯನ್ನು ಕೊಪ್ಪ ಆಸ್ಪತ್ರೆಗೆ ಕರೆದೊಯ್ಯಲಾಗುತ್ತಿತ್ತು. ಕಳಸ ಟು ಬಾಳೆಹೊನ್ನೂರು ಮಾರ್ಗದ ಹಳುವಳ್ಳಿಯಲ್ಲಿ ಆಂಬುಲೆನ್ಸ್ ನಿಂತಿತು. ಕೊಪ್ಪ ಆಸ್ಪತ್ರೆಯಲ್ಲಿ ಗಂಡು ಮಗುವಿಗೆ ಮಹಿಳೆ ಶರಣ್ಯಜನ್ಮ ನೀಡಿದ್ದಾರೆ.
ಮೂಡಿಗೆರೆ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ
ರಸ್ತೆಗಳು ಗುಂಡಿಮಯವಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು