5:09 AM Tuesday31 - March 2026
ಬ್ರೇಕಿಂಗ್ ನ್ಯೂಸ್
ತಮಿಳುನಾಡಿನಿಂದ ರೈಲಿನಲ್ಲಿ ಬಂದು ಕೆಂಜಾರು ದೇಗುಲದ ಹುಂಡಿ ಕಳ್ಳತನ: ಅಂತಾರಾಜ್ಯ ಕಳ್ಳನ ಬಂಧನ ಯಡಿಯೂರಪ್ಪ, ಬೊಮ್ಮಾಯಿ ಸರ್ಕಾರ ಬರೀ ಲೂಟಿ ಮಾಡಿದ್ದು ಬಿಟ್ಟರೆ ಅಭಿವೃದ್ಧಿ ಮಾಡಲಿಲ್ಲ: ಸಿಎಂ… ಸಿದ್ದರಾಮಯ್ಯ ಕಳ್ಳಮತಗಳಿಂದ ನನ್ನ ವಿರುದ್ಧ ಬಾದಾಮಿಯಲ್ಲಿ ಗೆದ್ದರು: ಶ್ರೀರಾಮುಲು ಆರೋಪ ಯತ್ನಾಳ್‌ ಬಂದರೆ ಸ್ವಾಗತ: ರಾಜ್ಯ ಬಿಜೆಪಿಯಲ್ಲಿ ಕುತೂಹಲ ಮೂಡಿಸಿದ ಮಾಜಿ ಸಿಎಂ ಯಡಿಯೂರಪ್ಪ… ಉಪ ಚುನಾವಣೆ | ಸಿಎಂ ಸಭೆಯಲ್ಲಿ ಭಾಗಿಯಾಗಿದ್ದ ಸರಕಾರಿ ಶಿಕ್ಷಕ ಕಬ್ಬಿನ ಗದ್ದೆಯೊಳಗೆ… ಬಾಗಲಕೋಟೆ ಉಪ ಚುನಾವಣೆ: ಆಲಮಟ್ಟಿ ಬಳಿ ರಾತೋರಾತ್ರಿ ಸಿಎಂ ಭೇಟಿಯಾದ ಮುಸ್ಲಿಂ​ ಮುಖಂಡರು;… ಉಪ ಚುನಾವಣೆ | ಸಿಎಂ ಸಭೆಯಲ್ಲಿ ಭಾಗಿಯಾಗಿದ್ದ ಸರಕಾರಿ ಶಿಕ್ಷಕ ಕಬ್ಬಿನ ಗದ್ದೆಯೊಳಗೆ… ರಂಗೇರಿದ ಉಪ ಚುನಾವಣಾ ಕಣ: ಅಖಾಡಕ್ಕಿಳಿದ ಸಿಎಂ ಸಿದ್ದರಾಮಯ್ಯ, ವಿಜಯೇಂದ್ರ; ಕೈ, ಕಮಲ… ಕೌಟುಂಬಿಕ ಕಲಹ: ಭದ್ರಾ ಬಲದಂಡೆ ನಾಲೆ ಬ್ರಿಡ್ಜ್ ನಿಂದ ಹಾರಿ ಸೂಪರ್ ವೈಸರ್… ಗ್ಯಾಸ್ ಸಿಲಿಂಡರ್ ಗೆ ರೆಗ್ಯುಲೇಟರಿ ಅಳವಡಿಸುವಾಗ ಏಕಾಏಕಿ ಸ್ಫೋಟ: ಮನೆ ಛಿದ್ರಛಿದ್ರ; 4…

ಇತ್ತೀಚಿನ ಸುದ್ದಿ

ಚಿಂತೆ ಬಿಟ್ಟು ಮನೆ ಕಟ್ಟಿ; ದ.ಕ.ಜಿಲ್ಲೆಯಲ್ಲಿ ಭರಪೂರ ಮರಳು ಲಭ್ಯವಂತೆ: ಹೀಗೆಂತ ಸ್ವತಃ ಜಿಲ್ಲಾಧಿಕಾರಿಗಳೇ ಹೇಳುತ್ತಾರೆ

26/05/2022, 14:40

ಮಂಗಳೂರು(reporterkarnataka.com): ಸಿ.ಆರ್.ಝಡ್ ವ್ಯಾಪ್ತಿಯಲ್ಲಿ ಮರಳುಗಾರಿಕೆ ನಿಷೇಧ ಹಿನ್ನೆಲೆಯಲ್ಲಿ ಮರಳಿನ ದರದಲ್ಲಿ ಏರಿಕೆಯಾಗಿದೆ ಎಂಬ ಮಾತುಗಳು ಕೇಳಿಬರುತ್ತಿದ್ದು, ಅದು ಸತ್ಯಕ್ಕೆ ದೂರವಾಗಿದೆ. ಜಿಲ್ಲೆಯಲ್ಲಿ ಭರಪೂರ ಮರಳು ಸಂಗ್ರಹವಿದೆ ಎಂದು ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಅವರು ಸ್ಪಷ್ಟಪಡಿಸಿದರು. 

ನಗರದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಶಂಭೂರು ಹಾಗೂ ಮರವೂರಿನ ಡ್ಯಾಂನಲ್ಲಿ ಹೂಳೆತ್ತುವಿಕೆಯ ಮೂಲಕ ತೆರವುಗೊಳಿಸಲಾದ ಮರಳನ್ನು ಸಂಗ್ರಹಿಸಲಾಗುತ್ತದೆ. ಸಿಹಿನೀರಿನ ಮರಳು ಇದಾಗಿರುವ ಕಾರಣ ಉತ್ತಮ ಗುಣಮಟ್ಟದ್ದಾಗಿದೆ. ಮರಳು ಮಿತ್ರ ಆ್ಯಪ್‍ನಲ್ಲಿ ಅರ್ಜಿ ಸಲ್ಲಿಸಿ 7,000 ರೂ.ಗಳಿಗೆ 10 ಮೆಟ್ರಿಕ್ ಟನ್ ಮರಳು ಪಡೆಯಬಹುದು. ಜಿಎಸ್‍ಟಿ ಮತ್ತು ಸಾಗಾಟ ವೆಚ್ಚದೊಂದಿಗೆ ನಿರ್ಮಾಣ ಕಾಮಗಾರಿಗೆ ಅಗತ್ಯ ಮರಳನ್ನು ಖರೀದಿಸಬಹುದು ಎಂದು ತಿಳಿಸಿದರು.


ಅದ್ಯಪಾಡಿ ಮತ್ತು ಶಂಭೂರು ಮರಳು ಸ್ಟಾಕ್ ಯಾರ್ಡ್ ನಲ್ಲಿ ಕ್ರಮವಾಗಿ 9,000 ಮತ್ತು 12,000 ಮೆಟ್ರಿಕ್ ಟನ್ ಲಭ್ಯವಿದೆ. ಸಂಗ್ರಹಿಸಿಡಲು ಜಾಗದ ಕೊರತೆ ಇದೆ. ಬೇಡಿಕೆಗೆ ತಕ್ಕಂತೆ ಮರಳು ಜಿಲ್ಲೆಯ ನಿರ್ಮಾಣ ಕಾಮಗಾರಿಗೆ ಲಭ್ಯವಾಗಲಿದೆ. ಹೊರ ಜಿಲ್ಲೆಯಿಂದಲೂ ಮರಳಿಗೆ ಬೇಡಿಕೆ ಇದ್ದರೂ ಅನುಮತಿ ನೀಡಲಾಗಿಲ್ಲ. ಸದ್ಯ ಜಿಲ್ಲೆಯ ಬೇಡಿಕೆಗೆ ಅನುಗುಣವಾಗಿ ಮರಳು ಪೂರೈಕೆಗೆ ಕ್ರಮ ವಹಿಸಲಾಗುವುದು. ಹಾಗಾಗಿ ಯಾರೂ ಅಕ್ರಮ ಮರಳುಗಾರಿಕೆಗೆ ಅವಕಾಶ ನೀಡಬಾರದು ಎಂದು ಜಿಲ್ಲಾಧಿಕಾರಿಯವರು ತಿಳಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು