9:48 PM Friday30 - January 2026
ಬ್ರೇಕಿಂಗ್ ನ್ಯೂಸ್
ಕಾನ್ಫಿಡೆಂಟ್‌ ಗ್ರೂಪ್‌ ಚೇರ್‌ಮೆನ್ ಸಿ.ಜೆ. ರಾಯ್‌ ಗುಂಡಿಕ್ಕಿಕೊಂಡು ಆತ್ಮಹತ್ಯೆ: ಐಟಿ ದಾಳಿಗೆ ಹೆದರಿದರೇ… ಕಾಡಾನೆ ದಾಳಿಯಿಂದ ಅದೃಷ್ಟವಶಾತ್ ತಂದೆ- ಮಗಳು ಜಸ್ಟ್ ಮಿಸ್: ಕೊಡಗಿನಲ್ಲಿ ತಪ್ಪಿದ ಭಾರಿ… ಗ್ರಾಮೀಣ ಪ್ರದೇಶಗಳ ಸಮಗ್ರ ಅಭಿವೃದ್ಧಿಗಾಗಿ ಕೇಂದ್ರ ಸರ್ಕಾರ ವಿ ಬಿ ಜಿ ರಾಮ್… 17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನ ಚಿತ್ರೋತ್ಸವ ಉದ್ಘಾಟನೆ ಕೊಡಗು: ಮುಂದುವರಿದ ಆನೆ- ಮಾನವ ಸಂಘರ್ಷ; ಕಾಡಾನೆ ದಾಳಿಗೆ ಕಾರ್ಮಿಕ ಬಲಿ ಆರ್ಥಿಕ ಬೆಳವಣಿಗೆಗೆ ಕೇಂದ್ರದ ಆರ್ಥಿಕ ನೀತಿಗಳೇ ಕಾರಣ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ… ನಮ್ಮ ಸರ್ಕಾರ ಯಾರ ಪೋನ್ ಟ್ಯಾಪ್ ಮಾಡುವುದಿಲ್ಲ: ಸಿಎಂ ಸಿದ್ದರಾಮಯ್ಯ ಕನ್ನಡ ಭಾಷೆ ಎಂದರೆ ಹಲವು ಆಯಾಮಗಳ ಸಾಧ್ಯತೆ: ಪುರುಷೋತ್ತಮ ಬಿಳಿಮಲೆ 600ಕ್ಕೂ ಹೆಚ್ಚು ಜಿಟಿಸಿಸಿ ವಿದ್ಯಾರ್ಥಿಗಳಿಗೆ ಉದ್ಯೋಗ ನೀಡಲಿರುವ ರ‍್ಯಾಂಗ್‌ಸನ್ಸ್‌ ಏರೋಸ್ಪೇಸ್, ​​ಎಕ್ಸೈಡ್ ಎನರ್ಜಿ ಸುನಿಲ್ ಕುಮಾರ್ ಪರಶುರಾಮನ ಮೂರ್ತಿಯ ಫೈಬರ್ ನಲ್ಲಿ ಮಾಡಿಸಿ ಕಂಚಿನದ್ದು ಎಂದು ನಂಬಿಸಿದ್ದರು:…

ಇತ್ತೀಚಿನ ಸುದ್ದಿ

ಚಿಂತೆಯ ಬದಲು ಚಿಂತನೆ ಮಾಡೋಣ: ಮೇಲ್ಕಾರಿನಲ್ಪಿ ಕೊಂಡೆವೂರು ಶ್ರೀಗಳು

12/02/2024, 13:49

ಬಂಟ್ವಾಳ(reporterkarnataka.com): ಹಿರಿಯರ ಅನುಭವವು ನಂಬಿಕೆಯ ಜೊತೆಗೆ ಮಿಳಿತವಾದಾಗ ಜೀವನವು ಅರ್ಥಪೂರ್ಣವಾಗುತ್ತದೆ. ಚಿಂತೆಯ ಬದಲು ಎಲ್ಲರೂ ಚಿಂತನೆಯನ್ನು ಮಾಡಬೇಕು. ಹಿರಿಯರ ಸೇವಾ ಪ್ರತಿಷ್ಠಾನ ನಡೆಸುವ ಕಾರ್ಯಗಳು ಸಮಾಜದ ಒಳಿತಿಗೆ ದೊಡ್ಡ ಕೊಡುಗೆಯಾಗಿದೆ. ಸಂಸ್ಕೃತಿಯ ರಕ್ಷಣೆಗೆ ಹಿರಿಯರ ಮಾರ್ಗದರ್ಶನವು ಅಗತ್ಯವಾಗಿದೆ ಎಂದು ಕೊಂಡೆವೂರು ನಿತ್ಯಾನಂದ ಯೋಗಾಶ್ರಮದ ಪರಮಪೂಜ್ಯ ಶ್ರೀ ಯೋಗಾನಂದ ಸರಸ್ವತಿ ಸ್ವಾಮೀಜಿ ಹೇಳಿದರು.
ಅಖಿಲ ಕರ್ನಾಟಕ ಹಿರಿಯರ ಸೇವಾ ಪ್ರತಿಷ್ಠಾನ ( ರಿ) ಮೆಲ್ಕಾರ್ ಬಂಟ್ವಾಳ ಇದರ ಕೇಂದ್ರ ಸಮಿತಿಯ ಸಭೆಯನ್ನು ಆಶ್ರಮದಲ್ಲಿ ದೀಪ ಪ್ರಜ್ವಲಿಸಿ ಉದ್ಘಾಟಿಸಿ ಆಶೀರ್ವಚನ ನೀಡಿದರು.
ಆಶ್ರಮದ ಮೂಲಕ ಪರಿಸರದಲ್ಲಿ ಅನ್ನ ,ಅಕ್ಷರ, ಆಧಾರ ,ಆಶ್ರಯ ಮತ್ತು ಆರೋಗ್ಯ ಯೋಜನೆಯ ಸೇವಾ ಕಾರ್ಯಗಳು ನಿರಂತರವಾಗಿ ನಡೆಯುತ್ತಿದ್ದು ಈ ಪರಿಸರದಲ್ಲಿ ಹಿರಿಯರ ಸೇವಾ ಪ್ರತಿಷ್ಠಾದ ಘಟಕವನ್ನು ಆರಂಭಿಸಲು ಪೂರ್ಣ ಸಹಕಾರ ನೀಡುವುದಾಗಿ ತಿಳಿಸಿದರು.

ಅಧ್ಯಕ್ಷತೆ ವಹಿಸಿದ್ದ ಪ್ರತಿಷ್ಠಾನದ ಅಧ್ಯಕ್ಷ ಕಯ್ಯೂರು ನಾರಾಯಣ ಭಟ್ ಮಾತನಾಡಿ ತಾಲೂಕು ಘಟಕಗಳನ್ನು ಸಕ್ರಿಯಗೊಳಿಸುವುದರೊಂದಿಗೆ ಸಹಕಾರಿ ಸಂಘದ ಸ್ಥಾಪನೆಯ ಬಗ್ಗೆ ಮಾಹಿತಿ ನೀಡಿ ಪ್ರತಿಷ್ಠಾನದ ಸದಸ್ಯರು ಪ್ರವರ್ತಕರಾಗಿ ಸಹಕರಿಸಬೇಕೆಂದು ತಿಳಿಸಿದರು.
ಡಾ.ಬಿ ಎನ್. ಮಹಾಲಿಂಗ ಭಟ್ ಕುಮಾರವ್ಯಾಸ ನಮನ ಕಾರ್ಯಕ್ರಮವನ್ನು ನಡೆಸಿಕೊಟ್ಟರು. ಪ್ರಧಾನ ಕಾರ್ಯದರ್ಶಿ ದಿವಾಕರ ಆಚಾರ್ಯ ಗೇರುಕಟ್ಟೆ ರಾಮಾಯಣದಲ್ಲಿ ಶ್ರೀರಾಮನ ಆದರ್ಶ ಗುಣಗಳ ಬಗ್ಗೆ ಮಾತನಾಡಿದರು.
ಪ್ರೊ. ವೇದವ್ಯಾಸ ರಾಮಕುಂಜ ಮಿರಾಕಲ್ ಹಣ್ಣಿನ ಮಹತ್ವದ ಬಗ್ಗೆ ತಿಳಿಸಿ ಪ್ರಾತ್ಯಕ್ಷಿಕೆ ನೀಡಿದರು.
ಬಂಟ್ವಾಳ ಘಟಕದ ಅಧ್ಯಕ್ಷ ಸೀತಾರಾಮ ಶೆಟ್ಟಿ ಕಾಂತಾಡಿ , ಸಮಿತಿಯ ಸದಸ್ಯರಾದ ಭವಾನಿ ಶಂಕರ ಶೆಟ್ಟಿ ಪುತ್ತೂರು, ಉದಯಶಂಕರ ಪುಣಚ ಮತ್ತು ಸ್ಥಳೀಯ ಹಿರಿಯರು ಭಾಗವಹಿಸಿದ್ದರು.
ಸಮಿತಿಯ ಸದಸ್ಯ ಅನಾರು ಕೃಷ್ಣಶರ್ಮ ಸ್ವಾಗತಿಸಿ ಕಾರ್ಯಕ್ರಮ ನಿರೂಪಿಸಿದರು. ಚಂದ್ರಶೇಖರ್ ಆಳ್ವ ಪಡುಮಲೆ ವಂದಿಸಿದರು.
ಬಳಿಕ ಆಶ್ರಮದ ಗೋಶಾಲೆ ಮತ್ತು ನಕ್ಷತ್ರವನವನ್ನು ಹಿರಿಯರು ವೀಕ್ಷಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು