12:25 PM Monday10 - August 2026
ಬ್ರೇಕಿಂಗ್ ನ್ಯೂಸ್
ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:…

ಇತ್ತೀಚಿನ ಸುದ್ದಿ

ಚಿತ್ರದುರ್ಗ ಮುರುಘಾ ಮಠದಲ್ಲಿ ಹೆಣ್ಣು ಮಗು ಪತ್ತೆ: ಮತ್ತೊಂದು ಸಂಕಷ್ಟದಲ್ಲಿ ಶರಣರು

15/10/2022, 21:10

ಚಿತ್ರದುರ್ಗ(reporterkarnataka.com): ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನಕ್ಕೀಡಾಗಿರುವ ಮುರುಘಾ ಶ್ರೀಗಳ ಮುರುಘಾ ಮಠದಲ್ಲಿ ಹೆಣ್ಣು ಮಗುವೊಂದು ಪತ್ತೆಯಾಗುವ ಮೂಲಕ ಮತ್ತೊಂದು ಪ್ರಕರಣ ತಲೆ ಎತ್ತಿದೆ.

ಮಠದ ಅವರಣದಲ್ಲಿ ಹೆಣ್ಣು ಮಗು ಪತ್ತೆಯಾಗಿದೆ. ಮಠದ ವಸತಿ ಶಾಲೆಯಲ್ಲಿ ಹೆಣ್ಣು ಮಗು ಪತ್ತೆಯಾಗಿದೆ. ಈ ವಸತಿ ಶಾಲೆಯು ಚಿತ್ರದುರ್ಗದ ಮುರುಘಾ ಮಠದ ಆವರಣದಲ್ಲಿದೆ ಎನ್ನುವುದು ಕುತೂಹಲಕಾರಿ ಅಂಶವಾಗಿದೆ.

ಮಠದ ವಸತಿ ಶಾಲೆಯ ಅಪ್ರಾಪ್ತ ವಯಸ್ಸಿನ ಹೆಣ್ಣು ಮಕ್ಕಳ ಮೇಲೆ ಅತ್ಯಾಚಾರ ನಡೆಸಿದ ಆರೋಪದ ಮೇಲೆ ಆಗಸ್ಟ್‌ 26ರಂದು ಮುರುಘಾಶ್ರೀಗಳ ವಿರುದ್ಧ ಫೋಕ್ಸೋ ಪ್ರಕರಣ ದಾಖಲಾಗಿತ್ತು. ಪ್ರಕರಣ ದಾಖಲಾದ ಬಳಿಕ ವಸತಿ ಶಾಲೆಯಲ್ಲಿದ್ದ ಮಕ್ಕಳು ಶಿಫ್ಟ್‌ ಮಾಡಲಾಗಿತ್ತು.

ಮಕ್ಕಳನ್ನು ಸರ್ಕಾರಿ ವಸತಿ ಶಾಲೆ, ಬಾಲ ಮಂದಿರಕ್ಕೆ ಶಿಫ್ಟ್‌ ಮಾಡಲಾಗಿತ್ತು. ಅದೇ ಸಂದರ್ಭದಲ್ಲಿ ನಾಲ್ಕೂವರೆ ವರ್ಷದ ಹೆಣ್ಣು ಮಗು ಪತ್ತೆ. ಹೆಣ್ಣು ಮಗುವಿನ ಪೋಷಕರ ಬಗ್ಗೆ ವಿವರ ಲಭ್ಯವಿಲ್ಲ. ಪೋಷಕರ ಪತ್ತೆಗಾಗಿ ಮಕ್ಕಳ ರಕ್ಷಣಾ ಘಟಕ ಜಾಹೀರಾತುವನ್ನೂ ನೀಡಿದೆ. ಚಿಗುರು ಹೆಸರಿನ ನಾಲ್ಕೂವರೆ ವರ್ಷದ ಹೆಣ್ಣು ಮಗು ಇದಾಗಿದ್ದು. ಮಠದ ಹಾಸ್ಟೆಲ್ ನಲ್ಲಿ ಅನಧಿಕೃತವಾಗಿ ಮಗು ಇರಿಸಿಕೊಂಡ ಆರೋಪ ಹೊರಿಸಲಾಗಿದೆ. ಅದಲ್ಲದೆ, ಮಡಿಲು ಯೋಜನೆಗೆ ಮಗುವನ್ನು ಸೇರಿಸದ ಆರೋಪವನ್ನೂ ಮಾಡಲಾಗಿದೆ. ಮಕ್ಕಳ ಕಲ್ಯಾಣ ಸಮಿತಿ, ಜಿಲಾಡಳಿತಕ್ಕೆ ದೂರು ನೀಡಿ ತನಿಖೆಗೆ ಆಗ್ರಹಿದ್ದು, ದೂರು ನೀಡಿದ ಬಳಿಕ ಅಧಿಕಾರಿಗಳು ಕೂಡ ಅಲರ್ಟ್‌ ಆಗಿದ್ದಾರೆ.

ಮಠದಲ್ಲಿ ಪುಟ್ಟ ಮಕ್ಕಳನ್ನು ಅನಧಿಕೃತವಾಗಿ ಇರಿಸಲಾಗಿತ್ತೆಂಬ ಆರೋಪವನ್ನು ಮುರುಘಾ ಶ್ರೀಗಳ ಮೇಲೆ ಹೊರಿಸಲಾಗಿದೆ. ಒಟ್ಟಾರೆ ಶರಣರು ಮತ್ತೊಂದು ಸಂಕಷ್ಟ ಎದುರಿಸುವಂತಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು