8:53 PM Saturday27 - June 2026
ಬ್ರೇಕಿಂಗ್ ನ್ಯೂಸ್
ವಿರಾಜಪೇಟೆ: ಕಾಡಾನೆ ದಾಳಿಯಿಂದ ಕೂದಲೆಳೆ ಅಂತರದಲ್ಲಿ ಮಹಿಳೆ ಪಾರು ಮಂಗಳೂರಿನಲ್ಲೇ ಇದ್ದಿದ್ದರೆ ಶಿಕ್ಷಕನಾಗಿರುತ್ತಿದ್ದೆ: ಬಾಲಿವುಡ್ ಬಾದ್ ಶಾ ಶಾರುಖ್‌ ಖಾನ್ ಎಐ ತಂತ್ರಜ್ಞಾನದಲ್ಲಿ ಗೃಹಿಣಿಯ ಫೋಟೋ ಎಡಿಟ್; 30 ಲಕ್ಷಕ್ಕೆ ಬೇಡಿಕೆ; ಮಹಿಳೆ ಆತ್ಮಹತ್ಯೆಗೆ… ಟ್ರಾಫಿಕ್ ಸಮಸ್ಯೆಯಾಗಿದ್ದು ನಿಜ, ನೀಟ್ ವಿದ್ಯಾರ್ಥಿಗಳಿಗೆ ತೊಂದರೆಯಾಗಿದ್ದರೆ ಸಹಾಯ ಮಾಡ್ತೀವಿ: ಕೆಪಿಸಿಸಿ ಅಧ್ಯಕ್ಷ… ಚನ್ನಪಟ್ಟಣ | ಎಕ್ಸ್​ಪ್ರೆಸ್​ ರಸ್ತೆಯಲ್ಲಿ ಭೀಕರ ಅಪಘಾತ: ಕಾರಿನ ಚಕ್ರ ಸ್ಫೋಟಗೊಂಡು ಚಾಲಕ… ಹಸೆಮಣೆ ಏರಬೇಕಿದ್ದಾಕೆಗೆ ಪಾಪಿ ಯುವಕನಿಂದ ಬೆದರಿಕೆ: ಮಾನಕ್ಕೆ ಅಂಜಿ ಒಂದೇ ಕುಟುಂಬದ ಮೂವರು… ಚುನಾವಣೆಗಷ್ಟೇ ಅಲ್ಲ, ಸಿದ್ಧಾಂತದ ಬಲವರ್ಧನೆಗೆ ಕೆಪಿಸಿಸಿ ಅಧ್ಯಕ್ಷರಾಗಿ ಹರಿಪ್ರಸಾದ್ ಆಯ್ಕೆ: ಮಾಜಿ ಸಿಎಂ… ತೀರ್ಥಹಳ್ಳಿ | ಶಿವರಾಜಪುರ ಬಳಿ ಎರಡು ಕಾರುಗಳ ನಡುವೆ ಭೀಕರ ಅಪಘಾತ: ಸಂಪೂರ್ಣ… Bangalore | ಬಿಡದಿ ಟೌನ್‌ಶಿಪ್ ವಿರುದ್ಧ ನಿಖಿಲ್ ಕುಮಾರಸ್ವಾಮಿ ಪಾದಯಾತ್ರೆಗೆ ಗ್ರಾಮಸ್ಥರ ತಡೆ:… ಬೆಂಗಳೂರು ಅರಮನೆ ಮೈದಾನದಲ್ಲಿ ಬೃಹತ್ ಸಮಾರಂಭ: ಕೆಪಿಸಿಸಿ ಅಧ್ಯಕ್ಷ ಗದ್ದುಗೆ ಏರಿದ ಖಡಕ್…

ಇತ್ತೀಚಿನ ಸುದ್ದಿ

ಚಿತ್ರದುರ್ಗ ಜಿಲ್ಲಾ ನ್ಯಾಯಾಲಯದ ಆವರಣದಲ್ಲಿ ಸೊಳ್ಳೆಗಳ ಹಾವಳಿ: ಸ್ವಚ್ಛತೆಗೆ ಮನವಿ

21/09/2024, 21:09

ಮುರುಡೇಗೌಡ ಚಳ್ಳಕೆರೆ ಚಿತ್ರದುರ್ಗ

info.reporterkarnataka@gmail.com

ಚಿತ್ರದುರ್ಗ ಜಿಲ್ಲಾ ನ್ಯಾಯಾಲಯದ ಆವರಣದಲ್ಲಿ ಸ್ವಚ್ಛತೆಯ ಕೊರತೆಯಿಂದ ಸೊಳ್ಳೆಗಳು ವಿಪರೀತವಾಗಿದ್ದು ಸಾಂಕ್ರಾಮಿಕ ರೋಗ ತಡೆಯುವ ಹಿನ್ನೆಲೆಯಲ್ಲಿ ಪರಿಸರ ಸ್ವಚ್ಛತೆ ಮಾಡಿ, ಔಷಧಿ ಸಿಂಪಡಿಸುವ ಮೂಲಕ ಆರೋಗ್ಯ ಕಾಪಾಡಬೇಕೆಂದು ಪರಿಸರ ಮತ್ತು ವನ್ಯಜೀವಿ ಸಂರಕ್ಷಣಾ ವೇದಿಕೆ ಪದಾಧಿಕಾರಿಗಳು ನಗರಸಭೆ ಆಯುಕ್ತರಿಗೆ ಮನವಿ ಮಾಡಿದ್ದಾರೆ.
ಚಿತ್ರದುರ್ಗ ಜಿಲ್ಲಾ ನ್ಯಾಯಾಲಯಕ್ಕೆ ವಕೀಲರು ಮತ್ತು ಒಂದೂವರೆ ಸಾವಿರಕ್ಕೂ ಅಧಿಕ ಸಾರ್ವಜನಿಕರು ಎಂದರೆ ವಯೋವೃದ್ಧರು, ಮಹಿಳೆಯರು, ಯುವಕರು ಪೋಷಕರೊಂದಿಗೆ ಪುಟಾಣಿ ಮಕ್ಕಳು ನ್ಯಾಯಾಲಯಕ್ಕೆ ಆಗಮಿಸುತ್ತಾರೆ. ಇತ್ತಿಚೆಗೆ ನ್ಯಾಯಾಲಯದ ಆವರಣದಲ್ಲಿ ಸ್ವಚ್ಚತೆ ಸಂಪೂರ್ಣ ಮರೀಚಿಕೆಯಾಗಿದ್ದು, ಸೊಳ್ಳೆಗಳ ಕಾಟ ವಿಪರೀತ ಹೆಚ್ಚಾಗಿದೆ.
ಸೊಳ್ಳೆಗಳು ಕೇವಲ ಆವರಣದಲ್ಲಷ್ಟೇ ಅಲ್ಲದೆ ನ್ಯಾಯಾಲಯ ಒಳಗಡೆಯೂ ಕಾಟಕೊಡುತ್ತಿದ್ದು ಹಿರಿಯ ವಕೀಲರು ಸೇರಿಂದತೆ ಎಲ್ಲರೂ ರೋಸಿ ಹೋಗಿದ್ದಾರೆ. ಈ ಬಗ್ಗೆ ಚಿತ್ರದುರ್ಗ ಜಿಲ್ಲಾ ವಕೀಲರ ಸಂಘವು ತಮಗೆ ಅನೇಕ ಬಾರಿ ಮನವಿ ಮಾಡಿದ್ದು, ಇದೀಗ ಪರಿಸರ ಮತ್ತು ವನ್ಯಜೀವಿ ಸಂರಕ್ಷಣಾ ವೇದಿಕೆ ಮನವಿ ಮಾಡುವುದೇನೆಂದರೆ, ಚಿತ್ರದುರ್ಗ ನಗರದ ಪೌರಸಿಬ್ಬಂದಿಗಳು ನಿತ್ಯ ನಗರದ ವಿವಿಧ ರಸ್ತೆ ಮತ್ತು ಚರಂಡಿ ಸ್ವಚ್ಛತೆ ಮಾಡುವಂತೆ ವಾರಕ್ಕೆ ಎರಡುದಿನ ಸೊಳ್ಳೆಗಳ ನಾಶಮಾಡಲು ಮತ್ತು ಸಾಂಕ್ರಾಮಿಕ ರೋಗ ತಡೆಯಲು ನ್ಯಾಯಾಲಯದ ಆವರಣದ ಪರಿಸರ ಸ್ವಚ್ಛತೆ ಮಾಡುವುದು ಅಗತ್ಯವಾಗಿದೆ.
ನ್ಯಾಯಾಲಯಕ್ಕೆ ಬರುವ ನಾಗರೀಕರ ಹಿತದೃಷ್ಟಿಯಿಂದ ಆವರಣದೊಳಗಿನ ಸುತ್ತಮುತ್ತಲಿನ ಪರಿಸರ ಸ್ವಚ್ಛತೆ ಮಾಡಿಸಬೇಕೆಂದು ಮತ್ತು ಔಷಧಿ ಸಿಂಪಡಿಸಿ ಸೊಳ್ಳೆಗಳ ನಾಶಪಡಿಸಬೇಕು. ಪ್ರಮುಖವಾಗಿ ಸ್ವಚ್ಛತೆಗಾಗಿ ಇಬ್ಬರು ಪೌರಕಾರ್ಮಿಕರನ್ನು ನಿಯೋಜಿಸುವ ಮೂಲಕ ವಕೀಲರ ಆರೋಗ್ಯ ಮತ್ತು ನಾಗರೀಕರ ಹಿತರಕ್ಷಣೆಯಲ್ಲಿ ಮುನ್ನೆಚ್ಚರಿಕೆ ವಹಿಸಬೇಕೆಂದು ಪರಿಸರ ಮತ್ತು ವನ್ಯಜೀವಿ ಸಂರಕ್ಷಣಾ ವೇದಿಕೆ ರಾಜ್ಯ ಉಪಾಧ್ಯಕ್ಷರಾದ ಡಾ.ಎಂ.ಸಿ.ನರಹರಿ ಹಾಗೂ ಪ್ರಧಾನ ಕಾರ್ಯದರ್ಶಿ ಮಾಲತೇಶ್ ಅರಸ್ ಮನವಿ ಮಾಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು