8:35 PM Thursday23 - April 2026
ಬ್ರೇಕಿಂಗ್ ನ್ಯೂಸ್
ತೀರ್ಥಹಳ್ಳಿ | ಆಗುಂಬೆಯ ಲಕ್ಕುಂದದಲ್ಲಿ ವೃದ್ದೆಯ ಕಟ್ಟಿ ಹಾಕಿ ಲಕ್ಷಾಂತರ ರೂ. ಮೌಲ್ಯದ… ಪಕ್ಷ ಕಟ್ಟಲು ಕಾರ್ಯಕರ್ತರು ಇದ್ದಾರೆ, ಜಮೀರ್ ಜೆಡಿಎಸ್‌ಗೆ ಬರೋ ಅವಶ್ಯಕತೆ ಇಲ್ಲ: ನಿಖಿಲ್… ವಿದೇಶಿ ಮಹಿಳೆಯ ಅತ್ಯಾಚಾರ ದೌರ್ಜನ್ಯ ಪ್ರಕರಣ: ‘ದೇವಿ ವಿಲ್ಲಾ’ ಹೋಂಸ್ಟೇ ಪರವಾನಗಿ ರದ್ದು ಬಸವಕಲ್ಯಾಣ ಬಸವೇಶ್ವರ ರಥೋತ್ಸವದಲ್ಲಿ ಭೀಕರ ದುರಂತ: ರಥದ ಚಕ್ರಕ್ಕೆ ಸಿಲುಕಿ ಭಕ್ತನ ಎರಡು… ತಮಿಳುನಾಡಿನಲ್ಲಿ ಮತದಾನ: ಸಿಎಂ ಸ್ಟಾಲಿನ್, ಸೂಪರ್ ಸ್ಟಾರ್ ರಜನೀಕಾಂತ್, ಪ್ರಸಿದ್ಧ ನಟ ವಿಜಯ್… ಪ್ರಧಾನಿ ಮೋದಿಗೆ ಭಯೋತ್ಪಾದಕ ಎಂದು ನಿಂದನೆ: ಎಐಸಿಸಿ ಅಧ್ಯಕ್ಷ ಖರ್ಗೆಗೆ ಚುನಾವಣಾ ಆಯೋಗ… ಚಾಮರಾಜನಗರ | ಮಲೆ ಮಹದೇಶ್ವರ ವನ್ಯಜೀವಿ ಧಾಮದ ದಟ್ಟ ಕಾಡಿನಲ್ಲಿ ಮಾನವನ ಅಸ್ಥಿಪಂಜರ… ಅಮಾನತು ಅಂತ್ಯವಲ್ಲ, ಅಬ್ದುಲ್ ಜಬ್ಬಾರ್‌ಗೆ ಇನ್ನೂ ಅವಕಾಶ ಇದೆ: ಸಚಿವ ದಿನೇಶ್ ಗುಂಡೂರಾವ್ ವರ್ಗಾವಣೆ ಆದೇಶವಿದ್ದರೂ ಪೊಲೀಸ್ ಕಮಿಷನರ್ ಕರ್ತವ್ಯದಿಂದ ಬಿಡುಗಡೆಗೊಳಿಸಿಲ್ಲ: ಮಂಗಳೂರಿನಲ್ಲಿ ಪೊಲೀಸ್ ಮಹಾ ನಿರ್ದೇಶಕ… ಕೊಡಗಿನ ಹೋಂಸ್ಟೇಯಲ್ಲಿ ವಿದೇಶಿ ಮಹಿಳೆಗೆ ಲೈಂಗಿಕ ಕಿರುಕುಳ ಆರೋಪ: ಮಾಲೀಕ ಸೇರಿ ಇಬ್ಬರ…

ಇತ್ತೀಚಿನ ಸುದ್ದಿ

ಚಿತ್ರದುರ್ಗ ಜಿಲ್ಲಾ ನ್ಯಾಯಾಲಯದ ಆವರಣದಲ್ಲಿ ಸೊಳ್ಳೆಗಳ ಹಾವಳಿ: ಸ್ವಚ್ಛತೆಗೆ ಮನವಿ

21/09/2024, 21:09

ಮುರುಡೇಗೌಡ ಚಳ್ಳಕೆರೆ ಚಿತ್ರದುರ್ಗ

info.reporterkarnataka@gmail.com

ಚಿತ್ರದುರ್ಗ ಜಿಲ್ಲಾ ನ್ಯಾಯಾಲಯದ ಆವರಣದಲ್ಲಿ ಸ್ವಚ್ಛತೆಯ ಕೊರತೆಯಿಂದ ಸೊಳ್ಳೆಗಳು ವಿಪರೀತವಾಗಿದ್ದು ಸಾಂಕ್ರಾಮಿಕ ರೋಗ ತಡೆಯುವ ಹಿನ್ನೆಲೆಯಲ್ಲಿ ಪರಿಸರ ಸ್ವಚ್ಛತೆ ಮಾಡಿ, ಔಷಧಿ ಸಿಂಪಡಿಸುವ ಮೂಲಕ ಆರೋಗ್ಯ ಕಾಪಾಡಬೇಕೆಂದು ಪರಿಸರ ಮತ್ತು ವನ್ಯಜೀವಿ ಸಂರಕ್ಷಣಾ ವೇದಿಕೆ ಪದಾಧಿಕಾರಿಗಳು ನಗರಸಭೆ ಆಯುಕ್ತರಿಗೆ ಮನವಿ ಮಾಡಿದ್ದಾರೆ.
ಚಿತ್ರದುರ್ಗ ಜಿಲ್ಲಾ ನ್ಯಾಯಾಲಯಕ್ಕೆ ವಕೀಲರು ಮತ್ತು ಒಂದೂವರೆ ಸಾವಿರಕ್ಕೂ ಅಧಿಕ ಸಾರ್ವಜನಿಕರು ಎಂದರೆ ವಯೋವೃದ್ಧರು, ಮಹಿಳೆಯರು, ಯುವಕರು ಪೋಷಕರೊಂದಿಗೆ ಪುಟಾಣಿ ಮಕ್ಕಳು ನ್ಯಾಯಾಲಯಕ್ಕೆ ಆಗಮಿಸುತ್ತಾರೆ. ಇತ್ತಿಚೆಗೆ ನ್ಯಾಯಾಲಯದ ಆವರಣದಲ್ಲಿ ಸ್ವಚ್ಚತೆ ಸಂಪೂರ್ಣ ಮರೀಚಿಕೆಯಾಗಿದ್ದು, ಸೊಳ್ಳೆಗಳ ಕಾಟ ವಿಪರೀತ ಹೆಚ್ಚಾಗಿದೆ.
ಸೊಳ್ಳೆಗಳು ಕೇವಲ ಆವರಣದಲ್ಲಷ್ಟೇ ಅಲ್ಲದೆ ನ್ಯಾಯಾಲಯ ಒಳಗಡೆಯೂ ಕಾಟಕೊಡುತ್ತಿದ್ದು ಹಿರಿಯ ವಕೀಲರು ಸೇರಿಂದತೆ ಎಲ್ಲರೂ ರೋಸಿ ಹೋಗಿದ್ದಾರೆ. ಈ ಬಗ್ಗೆ ಚಿತ್ರದುರ್ಗ ಜಿಲ್ಲಾ ವಕೀಲರ ಸಂಘವು ತಮಗೆ ಅನೇಕ ಬಾರಿ ಮನವಿ ಮಾಡಿದ್ದು, ಇದೀಗ ಪರಿಸರ ಮತ್ತು ವನ್ಯಜೀವಿ ಸಂರಕ್ಷಣಾ ವೇದಿಕೆ ಮನವಿ ಮಾಡುವುದೇನೆಂದರೆ, ಚಿತ್ರದುರ್ಗ ನಗರದ ಪೌರಸಿಬ್ಬಂದಿಗಳು ನಿತ್ಯ ನಗರದ ವಿವಿಧ ರಸ್ತೆ ಮತ್ತು ಚರಂಡಿ ಸ್ವಚ್ಛತೆ ಮಾಡುವಂತೆ ವಾರಕ್ಕೆ ಎರಡುದಿನ ಸೊಳ್ಳೆಗಳ ನಾಶಮಾಡಲು ಮತ್ತು ಸಾಂಕ್ರಾಮಿಕ ರೋಗ ತಡೆಯಲು ನ್ಯಾಯಾಲಯದ ಆವರಣದ ಪರಿಸರ ಸ್ವಚ್ಛತೆ ಮಾಡುವುದು ಅಗತ್ಯವಾಗಿದೆ.
ನ್ಯಾಯಾಲಯಕ್ಕೆ ಬರುವ ನಾಗರೀಕರ ಹಿತದೃಷ್ಟಿಯಿಂದ ಆವರಣದೊಳಗಿನ ಸುತ್ತಮುತ್ತಲಿನ ಪರಿಸರ ಸ್ವಚ್ಛತೆ ಮಾಡಿಸಬೇಕೆಂದು ಮತ್ತು ಔಷಧಿ ಸಿಂಪಡಿಸಿ ಸೊಳ್ಳೆಗಳ ನಾಶಪಡಿಸಬೇಕು. ಪ್ರಮುಖವಾಗಿ ಸ್ವಚ್ಛತೆಗಾಗಿ ಇಬ್ಬರು ಪೌರಕಾರ್ಮಿಕರನ್ನು ನಿಯೋಜಿಸುವ ಮೂಲಕ ವಕೀಲರ ಆರೋಗ್ಯ ಮತ್ತು ನಾಗರೀಕರ ಹಿತರಕ್ಷಣೆಯಲ್ಲಿ ಮುನ್ನೆಚ್ಚರಿಕೆ ವಹಿಸಬೇಕೆಂದು ಪರಿಸರ ಮತ್ತು ವನ್ಯಜೀವಿ ಸಂರಕ್ಷಣಾ ವೇದಿಕೆ ರಾಜ್ಯ ಉಪಾಧ್ಯಕ್ಷರಾದ ಡಾ.ಎಂ.ಸಿ.ನರಹರಿ ಹಾಗೂ ಪ್ರಧಾನ ಕಾರ್ಯದರ್ಶಿ ಮಾಲತೇಶ್ ಅರಸ್ ಮನವಿ ಮಾಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು