4:34 AM Friday16 - January 2026
ಬ್ರೇಕಿಂಗ್ ನ್ಯೂಸ್
ಮಂಗಳೂರಿನಲ್ಲಿ ಸ್ಕೂಲ್ ಆಫ್ ಇಂಜಿನಿಯರಿಂಗ್ ಮತ್ತು ಕಾನೂನು ಶಾಲೆಗೆ ರಾಜ್ಯಪಾಲ ಗೆಹ್ಲೋಟ್ ಚಾಲನೆ ಉಡುಪಿ ಪರ್ಯಾಯ ಮಹೋತ್ಸವಕ್ಕೆ ಸರ್ವ ಸಜ್ಜು: ಜ.18ರಂದು ಶೋಭಾ ಯಾತ್ರೆ; ಶೀರೂರು ಶ್ರೀಗಳಿಂದ… ಕೊಡಗಿನ ಮಹಿಳೆಯರ ಬಗ್ಗೆ ಅವಹೇಳನಕಾರಿ ಹೇಳಿಕೆ: ಸೈಬರ್ ಕ್ರೈಂ ಠಾಣೆಯಲ್ಲಿ ಪ್ರಕರಣ ದಾಖಲು ಮನರೇಗಾ ಬಚಾವ್ ಸಂಗ್ರಾಮ: ಸ್ಥಳೀಯ ಸಂಸ್ಥೆಗಳ ಚುನಾವಣೆ ಪೂರ್ವಸಿದ್ದತಾ ಸಭೆ ಜಿ ರಾಮ್ ಜಿ ಬಗ್ಗೆ ಕಾಂಗ್ರೆಸ್ ಸುಳ್ಳು ಸಂಕಥನ: ಕೇಂದ್ರ ಸಚಿವ ಎಚ್.ಡಿ.… ಕಾರ್ಯಾಂಗ, ಶಾಸಕಾಂಗ, ನ್ಯಾಯಾಂಗ ಸಮನ್ವಯತೆಯಿಂದ ಕೆಲಸ ಮಾಡಿದಾಗ ಮಾತ್ರ ಸುಖಿ ರಾಜ್ಯ ಸ್ಥಾಪನೆ… ಕಿಂಗ್ ಸಿಗರೇಟ್: ಎಂಆರ್‌ಪಿ ₹170 ಇದ್ದರೂ ₹250ಕ್ಕೆ ಮಾರಾಟ; ನಿಯಂತ್ರಣವಿಲ್ಲದ ದರ; ಗ್ರಾಹಕರ… ಒಣಗಿದ್ದ ಸಿಪ್ಪೆ ಸಾಗಿಸುತ್ತಿದ್ದ ಲಾರಿ ಬೆಂಕಿಗಾಹುತಿ: ಮೈಸೂರಿನಿಂದ ಮಂಗಳೂರಿಗೆ ಹೋಗುತ್ತಿದ್ದ ವಾಹನ ಕೇರಳ ಸರ್ಕಾರದಿಂದ ಭಾಷಾ ಸ್ವಾತಂತ್ರ್ಯದ ಉಲ್ಲಂಘನೆ: ಸಚಿವ ಶಿವರಾಜ್ ‌ತಂಗಡಗಿ ಪ್ರಹ್ಲಾದ್ ಜೋಶಿ ಅವರಿಗೆ ನ್ಯಾಷನಲ್ ಹೆರಾಲ್ಡ್ ಪತ್ರಿಕೆ ಇತಿಹಾಸ ಗೊತ್ತಿಲ್ಲ: ಡಿಸಿಎಂ ಡಿ.ಕೆ.…

ಇತ್ತೀಚಿನ ಸುದ್ದಿ

ಚಿತ್ರದುರ್ಗ: 3 ದಿನಗಳ ಯುವ ರೆಡ್ ಕ್ರಾಸ್ ಬೆಂಗಳೂರು ವಿಭಾಗೀಯ ಮಟ್ಟದ ಶಿಬಿರ

23/11/2025, 20:17

ಮುರುಡೇಗೌಡ ಚಳ್ಳಕೆರೆ ಚಿತ್ರದುರ್ಗ

info.reporterkarnataka@gmail.com

ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಕರ್ನಾಟಕ ರಾಜ್ಯ ಶಾಖೆ ಹಾಗೂ ಚಿತ್ರದುರ್ಗ ಜಿಲ್ಲಾ ಶಾಖೆಯ ಸಂಯುಕ್ತ ಆಶ್ರಯದಲ್ಲಿ ಚಿತ್ರದುರ್ಗದಲ್ಲಿ ಮೂರು ದಿನಗಳ ಯುವ ರೆಡ್ ಕ್ರಾಸ್ ಬೆಂಗಳೂರು ವಿಭಾಗೀಯ ಮಟ್ಟದ ಶಿಬಿರ ಉದ್ಘಾಟನೆಗೊಂಡಿತು.
ಈ ಶಿಬಿರದಲ್ಲಿ ಬೆಂಗಳೂರು ವಿಭಾಗದ 150 ವಿದ್ಯಾರ್ಥಿಗಳು/ ವಿವಿಧ ಕಾಲೇಜುಗಳ ಯುವ ರೆಡ್ ಕ್ರಾಸ್ ಸ್ವಯಂಸೇವಕರು ಭಾಗವಹಿಸುತ್ತಿದ್ದಾರೆ.

ಶಿಬಿರದ ಉದ್ಘಾಟನೆಯನ್ನು ಪ್ರೊ. ವೆಂಕಟೇಶ್ ಕೆ , ಮುಖ್ಯ ಅತಿಥಿಯಾಗಿ ಮೀರಾ ಶಿವಲಿಂಗಯ್ಯ, ಡಾ. ಪ್ರಿಯಾ ಪುರಾಣಿಕ, ಎಂ.ಕೆ. ಅನಂತ ರೆಡ್ಡಿ, ಆಗಮಿಸಿ ನೆರವೇರಿಸಿದರು. ಅವರು ಯುವ ರೆಡ್ ಕ್ರಾಸ್ ಸ್ವಯಂಸೇವಕರಿಗೆ ಸಮಾಜಸೇವೆ, ಮಾನವೀಯತೆ ಮತ್ತು ಜವಾಬ್ದಾರಿಯುತ ನಾಗರಿಕತೆಯನ್ನು ಬೆಳೆಸಿಕೊಳ್ಳುವ ಬಗ್ಗೆ ಪ್ರೇರಣಾದಾಯಕ ಸಂದೇಶ ನೀಡಿದರು.
ಕಾರ್ಯಕ್ರಮದಲ್ಲಿ ಬಸ್ರೂರು ರಾಜೀವ್ ಶೆಟ್ಟಿ (ಸಭಾಪತಿಗಳು ಭಾರತೀಯ ರೆಡ್‌ ಕ್ರಾಸ್ ಸಂಸ್ಥೆ ಕರ್ನಾಟಕ ರಾಜ್ಯ ಶಾಖೆ) ಅಧ್ಯಕ್ಷತೆ ವಹಿಸಿದ್ದರು. ಇತರೆ ರೆಡ್ ಕ್ರಾಸ್‌ನ ಗಣ್ಯರು ಉಪಸ್ಥಿತರಿದ್ದರು.
ಶಿಬಿರದಲ್ಲಿ ಪ್ರಥಮ ಚಿಕಿತ್ಸೆ, ದಾನಧರ್ಮ, ವಿಪತ್ತು ನಿರ್ವಹಣೆ, ಆರೋಗ್ಯ ಜಾಗೃತಿ, ರಸ್ತೆ ಸುರಕ್ಷತೆ, ರಕ್ತದಾನದ ಮಹತ್ವ, artificial intelligence and advance technology, career guidance ನಾಯಕತ್ವಾಭಿವೃದ್ಧಿ ಹಾಗೂ ಮಾನವೀಯ ಮೌಲ್ಯಗಳ ಕುರಿತು ವಿವಿಧ ತರಗತಿಗಳು, practically ಯೋಗಾಭ್ಯಾಸ ಮತ್ತು ಸಂವಹನಾತ್ಮಕ ಅಧಿವೇಶನಗಳು ನಡೆಯಲಿವೆ.
ಡಾ. ಗಣನಾಥ ಶೆಟ್ಟಿ ಎಕ್ಕಾರ್ ಸಂಪನ್ಮೂಲ ವ್ಯಕ್ತಿಗಳಾಗಿ ಭಾಗವಹಿಸಿದ್ದರು.
ಕಾರ್ಯಕ್ರಮವನ್ನು ಚಿತ್ರದುರ್ಗ ಜಿಲ್ಲೆಯ ರೆಡ್ ಕ್ರಾಸ್ ತಂಡ, ಅಧಿಕಾರಿಗಳು, ಹಾಗೂ ಯುವ ಸ್ವಯಂಸೇವಕರು ಶಿಬಿರವನ್ನು ಯಶಸ್ವಿಯಾಗಿ ಆಯೋಜಿಸಲು ತಮ್ಮ ಸಂಪೂರ್ಣ ಸಹಕಾರವನ್ನು ನೀಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು