ಇತ್ತೀಚಿನ ಸುದ್ದಿ
ಚಿತ್ರದುರ್ಗ | ಚೌಳೂರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ 2001-02ನೇ ಸಾಲಿನ ವಿದ್ಯಾರ್ಥಿಗಳಿಂದ ಗುರುವಂದನಾ ಕಾರ್ಯಕ್ರಮ
09/08/2026, 18:47
ಮುರುಡೇಗೌಡ ಚಳ್ಳಕೆರೆ ಚಿತ್ರದುರ್ಗ
info.reporterkarnataka@gmail.com
ಚೌಳೂರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ 2001-02ನೇ ಸಾಲಿನ ವಿದ್ಯಾರ್ಥಿಗಳು ಚೌಳೂರಿನ ಶ್ರೀ ವೀರಭದ್ರೇಶ್ವರ ಸ್ವಾಮಿ ದೇವಸ್ಥಾನದಲ್ಲಿ ತಮ್ಮ ನೆಚ್ಚಿನ ಶಿಕ್ಷಕರಿಗೆ ಗುರುವಂದನಾ ಕಾರ್ಯಕ್ರಮ ಹಮ್ಮಿಕೊಂಡಿದ್ದು, ಅದನ್ನು ಸಾಂಗವಾಗಿ ನೆರವೇರಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಶಿಕ್ಷಕರಾದ ಡಿ. ಟಿ. ಹನುಮಂತರಾಯ ಅವರು ನಾವು ನೀಡಿದ ವಿದ್ಯೆಯಿಂದ ಎಷ್ಟೋ ವಿದ್ಯಾರ್ಥಿಗಳು ತಮ್ಮ ತಮ್ಮ ಕ್ಷೇತ್ರದಲ್ಲಿ ಉನ್ನತವಾದ ಜೀವನ ರೂಪಿಸಿಕೊಂಡಿದ್ದರೆಂದು ಸಂತೋಷ ವ್ಯಕ್ತಪಡಿಸಿದರು. ಹಾಗೆ ಮುಂದುವರೆಸುತ್ತ ಇಷ್ಟು ವರ್ಷಗಲ್ಲಿ 2001-02ನೇ ಸಾಲಿನ ವಿದ್ಯಾರ್ಥಿಗಳು ಮಾಡಿದ ಸನ್ಮಾನ ನೆನೆದು ಧನ್ಯವಾದಗಳನ್ನು ಅರ್ಪಿಸಿದರು. ಇದೇ ಸಂದರ್ಭದಲ್ಲಿ 2001-02ನೇ ಸಾಲಿನ 7ನೇ ತರಗತಿಯ ಎಲ್ಲಾ ವಿದ್ಯಾರ್ಥಿಗಳು ಗುರುವಂದನಾ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.












