2:51 PM Thursday13 - February 2025
ಬ್ರೇಕಿಂಗ್ ನ್ಯೂಸ್
ಮೈಸೂರಿನಲ್ಲಿ ಗಲಭೆಕೋರರಿಗೆ ಇಡೀ ಸರಕಾರ ಬೆಂಬಲ ನೀಡಿದೆ: ಪ್ರತಿಪಕ್ಷದ ನಾಯಕ ಆರ್. ಆಶೋಕ್ ಕ್ವಿನ್ ಸಿಟಿ ಆಗಲಿದೆ ಹೆಲ್ತ್ ಸಿಟಿ: ಜಾಗತಿಕ ಹೂಡಿಕೆದಾರರ ಚರ್ಚಾಗೋಷ್ಠಿಯಲ್ಲಿ ಸಚಿವ ಶರಣ್… Chitradurga | ಚಳ್ಳಕೆರೆ: ನಿಧಿಯಾಸೆಗೆ ನರಬಲಿ; ಡ್ರಾಪ್ ಕೊಡುವ ನೆಪದಲ್ಲಿ ಕೊಲೆ; ಜ್ಯೋತಿಷಿ… ಕಾಂಗ್ರೆಸ್‌ ಸರಕಾರ ಪ್ರಕರಣ ವಾಪಸ್‌ ಪಡೆಯುವುದರಿಂದ ಮತಾಂಧರಿಗೆ ಹಲ್ಲೆ ಮಾಡುವ ಧೈರ್ಯ ಬಂದಿದೆ:… ಬೀರೂರು: ರಥ ಟರ್ನ್ ಆಗಲು ಜಾಗದ ವಿವಾದ ತಣ್ಣಗಾಗುತ್ತಿದ್ದಂತೆ ಹೊತ್ತಿ ಉರಿದ ಟ್ರ್ಯಾಕ್ಟರ್,… ಸಾಮಾಜಿಕ ಜಾಲತಾಣಗಳಲ್ಲಿ ಫೋಟೋ ಅಪ್ಲೋಡ್ ಮಾಡುವ ಮುನ್ನ ಎಚ್ಚರ ಇರಲಿ: ಹೆಣ್ಮಕ್ಕಳಿಗೆ ಎಸಿಪಿ… ಪರಶುರಾಂಪುರ ತಾಲೂಕು ಮಾಡುವುದು ನನ್ನ ಸಂಕಲ್ಪ: ಚಳ್ಳಕೆರೆ ಶಾಸಕ ಟಿ.ರಘುಮೂರ್ತಿ ನಂಜನಗೂಡು: ಶ್ರೀ ಮುರಗಿ ಸ್ವಾಮಿ ಮಠದ ನೂತನ ಗದ್ದುಗೆ, ರಾಜದ್ವಾರ ಲೋಕಾರ್ಪಣೆ ಮಂಗಳೂರಿನ ವೆನ್ಲಾಕ್ ಗೆ ʼರೀಜನಲ್ ಆಸ್ಪತ್ರೆʼ ಸ್ಥಾನಮಾನ: ಸಿಎಂಗೆ ಸಂಸದ ಕ್ಯಾ. ಬ್ರಿಜೇಶ್… ಇನ್ವೆಸ್ಟ್‌ ಕರ್ನಾಟಕ 2025; ಜಾಗತಿಕ ಬಂಡವಾಳ ಹೂಡಿಕೆಯ ಶಕ್ತಿಕೇಂದ್ರ: ಕೈಗಾರಿಕಾ ಸಚಿವ ಎಂ.ಬಿ.…

ಇತ್ತೀಚಿನ ಸುದ್ದಿ

Chitradurga | ಚಳ್ಳಕೆರೆ: ನಿಧಿಯಾಸೆಗೆ ನರಬಲಿ; ಡ್ರಾಪ್ ಕೊಡುವ ನೆಪದಲ್ಲಿ ಕೊಲೆ; ಜ್ಯೋತಿಷಿ ಸಹಿತ ಇಬ್ಬರ ಬಂಧನ

12/02/2025, 18:37

ಮುರುಡೇಗೌಡ ಚಳ್ಳಕೆರೆ ಚಿತ್ರದುರ್ಗ

info.reporterkarnataka@gmail.com

ವ್ಯಕ್ತಿಯೋರ್ವನನ್ನು ಡ್ರಾಪ್ ಕೊಡುವ ನೆಪದಲ್ಲಿ ಕರೆದೊಯ್ದು ನಿಧಿಯಾಸೆಗಾಗಿ ನರಬಲಿ ಕೊಟ್ಟಿರುವ ಘಟನೆ ಚಿತ್ರದುರ್ಗ ಚಳ್ಳಕೆರೆ ತಾಲ್ಲೂಕಿ ಪರಾಶುರಂಪುರದ ಜೆ ಜೇ ಕಾಲೋನಿಯಲ್ಲಿ ನಡೆದಿದೆ.
ಪಾವಗಡ ಮೂಲದ ಜ್ಯೋತಿಷಿಯೊಬ್ಬರ ಮಾತು ನಂಬಿದ ಆಂಧ್ರ ಮೂಲದ ಆನಂದ ರೆಡ್ಡಿ ಎಂಬಾತ ನಿಧಿಯಾಸೆಗಾಗಿ ಬಸ್ ನಿಲ್ದಾಣದಲ್ಲಿ ಚಪ್ಪಲಿ ಹೊಲಿಯುತ್ತಿದ್ದ ಜೆಜೆ ಕಾಲೊನಿ ನಿವಾಸಿ ಪ್ರಭಾಕರ ಎಂಬಾತನನ್ನು ಕರೆದೊಯ್ದು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿ ನರಬಲಿ ಕೊಟ್ಟಿದ್ದಾನೆ. ಡಾಬಾವೊಂದರಲ್ಲಿ ಅಡುಗೆ ಕೆಲಸ ಮಾಡುತ್ತಿದ್ದ ಆನಂದ್ ರೆಡ್ಡಿ, ಪಾವಗಡದ ಕೋಟಗುಡ್ಡ ನಿವಾಸಿ ಜ್ಯೋತಿಷಿ ರಾಮಕೃಷ್ಣನ ಬಳಿ ಜ್ಯೋತಿಷ ಕೇಳಿದ್ದ. ನಿಧಿಸಿಗಬೇಕೆಂದರೆ ನರಬಲಿಕೊಡಬೇಕು ಎಂದಿದ್ದಾನೆ.
/
ಪರಶುರಾಮಪುರ ಪಶ್ಚಿಮದಲ್ಲಿ ನರಬಲಿ ಕೊಟ್ಟರೆ ನಿಧಿ ಸಿಗುತ್ತದೆ. ಆ ರಕ್ತವನ್ನು ಮಾರಮ್ಮ ದೇವಿಗೆ ಅರ್ಪಿಸು ಎಂದಿದ್ದನಂತೆ. ಜ್ಯೋತಿಷಿ ಮಾತು ಕೇಳಿದ ಆನಂದ ರೆಡ್ಡಿ, ಭಾನುವಾರ ಸಂಜೆ ಪಶ್ಚಿಮ ದಿಕ್ಕಿನಲ್ಲಿ ಬಂದ ಪ್ರಭಾಕರನ ಬರ್ಬರ ಹತ್ಯೆ ಮಾಡಿದ್ದಾನೆ.
ಪ್ರಭಾಕರ ಪರಾಶುರಂಪುರದ ಬಸ್ ನಿಲ್ದಾಣದ ಬಳಿ ಚಪ್ಪಲಿ ಹೊಲಿಯುವ ಕೆಲಸ ಮಾಡುತ್ತಿದ್ದ. ಅದೇ ಮಾರ್ಗವಾಗಿ ನಡೆದು ಬರುತ್ತಿದ್ದ ಆತನನ್ನು ಕಂಡ ಆನಂದ ರೆಡ್ಡಿ ಬೈಕ್ ನಿಲ್ಲಿಸಿ ಡ್ರಾಪ್ ಕೊಡುತ್ತೇನೆ ಬನ್ನಿ ಎಂದು ಕರೆದೊಯ್ದಿದ್ದಾನೆ. ಬಳಿಕ ಮಾರಕಾಸ್ತ್ರಗಳಲ್ಲಿ ಕೊಚ್ಚಿ ಕೊಲೆ ಮಾಡಿದ್ದಾನೆ. ಸದ್ಯ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಜ್ಯೋತಿಷಿ ರಾಮಕೃಷ್ಣ ಹಾಗೂ ಆರೋಪಿ ಆನಂದ ರೆಡ್ಡಿ ಇಬ್ಬರನ್ನೂ ಬಂಧಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು