11:54 AM Tuesday19 - May 2026
ಬ್ರೇಕಿಂಗ್ ನ್ಯೂಸ್
ಒಂದು ದೇಶ – ಒಂದು ಚುನಾವಣೆ: ವಿವಿಧ ವರ್ಗಗಳ ಅಭಿಪ್ರಾಯ ಆಲಿಸಿದ ಜಂಟಿ… ದುಬಾರೆಯಲ್ಲಿ ಆನೆಗಳ ಸ್ನಾನ ನಾಳೆಯಿಂದ 100 ಅಡಿ ದೂರದಲ್ಲಿ ನಿಂತು ನೋಡಲಷ್ಟೇ ಅವಕಾಶ:… ಕೊಡಗಿನ ತಮ್ಮ ಕಾಫಿ ಎಸ್ಟೇಟ್‌ಗೆ ನುಗ್ಗಿದ ಆನೆಗಳ ಹಿಂಡಿನ ವಿಡಿಯೋ ಹಂಚಿಕೊಂಡ ಉದ್ಯಮಿ… ಕುದುರೆಮುಖ ರಾಷ್ಟ್ರೀಯ ಉದ್ಯಾನವನ ಪುನರ್ವಸತಿಗೆ ಹೆಚ್ಚುವರಿಯಾಗಿ 20 ಕೋಟಿ: ಮಂಗಳೂರಿನಲ್ಲಿ ಸಚಿವ ಖಂಡ್ರೆ ಚಿಕ್ಕಮಗಳೂರು | ದೇವನಗುಲ್ ಕಾಡಿನೊಳಗೆ ಅನಾಥ ಸ್ಥಿತಿಯಲ್ಲಿ ವೃದ್ಧನ ಶವ ಪತ್ತೆ ಬಳ್ಳಾರಿ | ಆಗಸ್ಟ್ 2ರಂದು ‘ಸ್ಟೀಲ್ ಸಿಟಿ ರನ್ 2026’ 5ನೇ ಆವೃತ್ತಿ:… ತರೀಕೆರೆ | ರೆವೆನ್ಯೂ ಇನ್ಸ್‌ಪೆಕ್ಟರ್ ಲೋಕಾಯುಕ್ತ ಬಲೆಗೆ: ರೈತನಿಂದ 30 ಸಾವಿರ ಲಂಚ… ಸ್ಯಾಂಡಲ್‌ವುಡ್‌ಗೆ ಬಿಗ್ ಶಾಕ್: ಹೃದಯಘಾತಕ್ಕೆ ನಟ ದಿಲೀಪ್ ರಾಜ್ ಬಲಿ ಪ್ರಧಾನಿ ಮೋದಿ ಕರೆ ಬೆನ್ನಲ್ಲೆ, ಅಡುಗೆ ಎಣ್ಣೆ ದರದಲ್ಲಿ ಭಾರಿ ಇಳಿಕೆ: ಅಕ್ಕಿ… ವಿದ್ಯುತ್ ಕಂಬದಲ್ಲಿ ಶಾರ್ಟ್ ಸರ್ಕ್ಯೂಟ್: ಬೈಕ್ ಸವಾರರ ನಿರ್ಲಕ್ಷ್ಯದ ಸವಾರಿ; ಅಪಾಯದಿಂದ ಪಾರು.

ಇತ್ತೀಚಿನ ಸುದ್ದಿ

ಚಿತ್ರದುರ್ಗ ಮುರುಘಾ ಮಠದ ಸ್ವಾಮೀಜಿಗೆ ಬಂಧನ ಭೀತಿ: ಪೀಠತ್ಯಾಗ ಮಾಡುತ್ತಾರಾ ಶ್ರೀಗಳು?

29/08/2022, 11:52

ಚಿತ್ರದುರ್ಗ(reporterkarnataka.com): ಬಸವ ತತ್ವಕ್ಕೆ ಹೆಸರು ಪಡೆದ ಚಿತ್ರದುರ್ಗದ ಮುರುಘಾ ಮಠದ ಶ್ರೀ ಶಿವಮೂರ್ತಿ ಶಿವಶರಣ ಸ್ವಾಮೀಜಿಗೆ ಬಂಧನ ಭೀತಿ ಎದುರಾಗಿದೆ. ಅಪ್ರಾಪ್ತ ವಯಸ್ಸಿನ ಬಾಲಕಿಯರಿಗೆ ಲೈಂಗಿಕ ದೌರ್ಜನ್ಯ ನಡೆಸಿದ ಆರೋಪಕ್ಕೆ ಶ್ರೀಗಳು ಗುರಿಯಾಗಿದ್ದಾರೆ.
ಶ್ರೀಗಳ ವಿರುದ್ಧ ದೂರು ನೀಡಿರುವ ಇಬ್ಬರು ಬಾಲಕಿಯರನ್ನು ಸಿಡಬ್ಲ್ಯುಸಿ ಎದುರು ವಿಚಾರಣೆ ನಡೆಸಲಾಗಿದೆ. ಅಲ್ಲಿ ಇಬ್ಬರು ಬಾಲಕಿಯರು ಮುರಘ ಶ್ರೀಗಳಿಂದ ತಮಗೆ ಲೈಂಗಿಕ ದೌರ್ಜನ್ಯವಾಗಿದೆ ಎಂದು ಹೇಳಿಕೆ ನೀಡಿದ್ದಾರೆ. ಬಾಲಕಿಯರ ವೈದ್ಯಕೀಯ ಪರೀಕ್ಷೆಯೂ ಪೂರ್ಣಗೊಂಡಿದೆ. ಇದೀಗ ಬಾಲಕಿಯರನ್ನು ನ್ಯಾಯಾಲಯಕ್ಕೆ ಹಾಜರುಪಡಿಸುವ ಪ್ರಕ್ರಿಯೆ ನಡೆಯಲಿದೆ. ಅಲ್ಲೂ ಬಾಲಕಿಯರು ಮುರುಘಾ ಮಠದ ಸ್ವಾಮೀಜಿಯಿಂದ ಲೈಂಗಿಕ ದೌರ್ಜನ್ಯ ನಡೆದಿದೆ ಎಂದು ಹೇಳಿದರೆ, ಶ್ರೀಗಳ ಬಂಧನ ಅನಿವಾರ್ಯವಾಗುತ್ತದೆ. ಪೊಲೀಸರು ಫೊಕ್ಸೊ ಕಾಯ್ದೆಯಡಿ ಸ್ವಾಮೀಜಿಯವರನ್ನು ಬಂಧಿಸಬೇಕಾಗುತ್ತದೆ.
ಮಠದ ಆಡಳಿತಕ್ಕೊಳಪಟ್ಟ ವಸತಿಗೃಹದಲ್ಲಿ ವಾಸವಾಗಿದ್ದ ಈ ಇಬ್ಬರು ಬಾಲಕಿಯರು ತಮ್ಮ ಮೇಲಿನ ಲೈಂಗಿಕ ದೌರ್ಜನ್ಯದ ಬಗ್ಗೆ ಬೆಂಗಳೂರಿನ ಕಾಟನ್ ಪೇಟೆ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಅಲ್ಲಿ ಅವರ ದೂರನ್ನು ಸ್ವೀಕರಿಸಿಲ್ಲ. ಬಳಿಕ ಅವರು ಮೈಸೂರಿನ ಒಡನಾಡಿ ಸಂಸ್ಥೆಯನ್ನು ಸಂಪರ್ಕಿಸಿದರು. ನಂತರ ಲೈಂಗಿಕ ದೌರ್ಜನ್ಯ ಪ್ರಕರಣ ಬೆಳಕಿಗೆ ಬಂತು.

ಇತ್ತೀಚಿನ ಸುದ್ದಿ

ಜಾಹೀರಾತು