2:28 PM Wednesday9 - July 2025
ಬ್ರೇಕಿಂಗ್ ನ್ಯೂಸ್
ಪುನರ್ವಸು ಮಳೆ ಅಬ್ಬರ: ಕೊಚ್ಚಿ ಹೋಗುವ ಭೀತಿಯಲ್ಲಿ ತೀರ್ಥಹಳ್ಳಿಯ ಕುನ್ನಿಕೇವಿ ಸೇತುವೆ! ತುಂಗಾ ಕಮಾನು ಸೇತುವೆ ಮೇಲೆ ಹರಿಯುತ್ತಿದೆ ನೀರು!: ಹೆದ್ದಾರಿ ಇಂಜಿನಿಯರ್ ಗಳ ಅದ್ಬುತ… ಶೈಕ್ಷಣಿಕ ಧನ ಸಹಾಯ ಪಾವತಿಸಲು ಆಗ್ರಹಿಸಿ ಜುಲೈ 9ರಂದು ಕಟ್ಟಡ ಕಾರ್ಮಿಕರ ರಾಜ್ಯವ್ಯಾಪಿ… Kodagu | 19 ವರ್ಷದಲ್ಲಿ ದಾಖಲೆ ಸೃಷ್ಟಿಸಿದ ಹಾರಂಗಿ ಡ್ಯಾಮ್: ಜಲಾಶಯಕ್ಕೆ ಹರಿದು… Madikeri | ಕೊಡಗಿನಲ್ಲಿ ವ್ಯಾಪಕ ಅಬ್ಬರದ ಬಿರುಗಾಳಿ ಸಹಿತ ಮಳೆ: ಇಂದು ಶಾಲಾ-… ಕಾಫಿನಾಡು ಪ್ರವೇಶಿಸದಂತೆ ವಿಶ್ವ ಹಿಂದೂ ಪರಿಷತ್ ಮುಖಂಡ ಶರಣ್ ಪಂಪ್ ವೆಲ್ ಗೆ… Madikeri | ಕೊಡಗು ಜಿಲ್ಲೆ: ಜು. 6ರಿಂದ ಆಗಸ್ಟ್ 5ರ ವರೆಗೆ ಭಾರೀ… ಕೊಡವ ಸಮುದಾಯದಿಂದ ಚಿತ್ರರಂಗಕ್ಕೆ ಬಂದಿದ್ದು ನಾನೊಬ್ಬಳೇ ಎಂದ ರಶ್ಮಿಕಾಳಿಗೆ ಟೀಕೆಗಳ ಸುರಿಮಳೆ! ಮೆಟ್ರೋ ಹಳದಿ ಮಾರ್ಗ ಆಗಸ್ಟ್‌ ನಲ್ಲಿ ಸಾರ್ವಜನಿಕ ಸೇವೆಗೆ ಮುಕ್ತವಾಗದಿದ್ದರೆ ಪ್ರತಿಭಟನೆ: ಸಂಸದ… ವಿದ್ಯುತ್ ಆಘಾತಕ್ಕೆ ಯುವಕ ಬಲಿ: ಆಸ್ಪತ್ರೆಗೆ ಭೇಟಿ ನೀಡಿ ಕುಟುಂಬಕ್ಕೆ ಸಾಂತ್ವನ ಹೇಳಿದ…

ಇತ್ತೀಚಿನ ಸುದ್ದಿ

ಚಿತ್ರಾಪುರ ದುರ್ಗಾಪರಮೇಶ್ವರಿ ದೇಗುಲ ಆಮಂತ್ರಣ ಪತ್ರಿಕೆ ಬಿಡುಗಡೆ: ಪೇಜಾವರ ಶ್ರೀ, ಶಾಸಕ ಡಾ. ಭರತ್ ಶೆಟ್ಟಿ ಉಪಸ್ಥಿತಿ

08/02/2023, 20:40

ಸುರತ್ಕಲ್(reporterkarnataka.com):
ಚಿತ್ರಾಪುರ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಆಮಂತ್ರಣ ಪತ್ರಿಕೆಯನ್ನು ಬುಧವಾರ ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥ ಶ್ರೀಪಾದರು, ಚಿತ್ರಾಪುರ ಮಠದ ಶ್ರೀ ವಿದ್ಯೇಂದ್ರ ಶ್ರೀಪಾದರು ಹಾಗೂ ಶಾಸಕರಾದ ಡಾ.ಭರತ್ ಶೆಟ್ಟಿ ವೈ ಅವರು ದೇವಸ್ಥಾನದಲ್ಲಿ ಬಿಡುಗಡೆಗೊಳಿಸಿದರು.

ಶಾಸಕರೂ, ಜೀರ್ಣೋದ್ಧಾರ ಸಮಿತಿ ಗೌರವಾಧ್ಯಕ್ಷರೂ ಆದ ಡಾ. ಭರತ್ ಶೆಟ್ಟಿ ವೈ. ಮಾತನಾಡಿ, ಕ್ಷೇತ್ರದಲ್ಲಿ 2 ಕೋಟಿ ರೂ. ಸರಕಾರದ ಅನುದಾನ ಮತ್ತು ಭಕ್ತರು ದಾನಿಗಳ ಅಂದಾಜು 8-10 ಕೋಟಿ ರೂ.ಗಳ ನೆರವಿನಿಂದ ಜೀರ್ಣೋದ್ಧಾರ ಸಮಿತಿ ಮುಂದಾಳತ್ವ , ಸ್ವಾಮೀಜಿಗಳ ಮಾರ್ಗದರ್ಶನದಲ್ಲಿ ಅಭಿವೃದ್ಧಿ ಕಾರ್ಯಗಳು ಪೂರ್ಣಗೊಳ್ಳುವ ಹಂತದಲ್ಲಿದೆ. ಮುಂದೆ 15 ದಿನಗಳ ಕಾಲ ನಡೆಯಲಿರುವ ಧಾರ್ಮಿಕ ಕಾರ್ಯಕ್ರಮಗಳು ಇದೇ ರೀತಿ ಭಕ್ತರ, ಹಿಂದೂ ಸಂಘಟನೆಗಳ ಮತ್ತು ಮೊಗವೀರ ಸಮಾಜ ಬಾಂಧವರಿಂದ ಸಹಕಾರದಲ್ಲಿ ಯಶಸ್ವಿಯಾಗಿ ನಡೆಯಬೇಕೆಂದರು.


ಕಾರ್ಪೋರೇಟರ್ ಸುಮಿತ್ರಾ ಕರಿಯ, ಪ್ರಮುಖರಾದ ಉಮೇಶ್ ಟಿ. ಕರ್ಕೇರ, ವಿಷ್ಣುಮೂರ್ತಿ ಏಗಳ್, ಲಕ್ಷ್ಮಣ ಅಮೀನ್, ಭರತ್ ಕುಮಾರ್, ಕೇಶವ ಸಾಲಿಯಾನ್, ಗಣೇಶ್ ಹೊಸಬೆಟ್ಟು, ಎನ್. ಆರ್ ಪುರುಷೋತ್ತಮ, ಹೆಚ್ ಎಲ್ ರಾವ್, ದೇವಿಪ್ರಸಾದ್ ಶೆಟ್ಟಿ, ಹರೀಶ್ ಶೆಟ್ಟಿ, ಸುರೇಶ್, ಕೃಷ್ಣ ಶೆಟ್ಟಿ, ಶ್ರೀಧರ್ ದೇವಾಡಿಗ, ಮೋಹನ್ ಕರ್ಕೇರ, ರೋಹಿದಾಸ್ ಸಾಲಿಯಾನ್, ಚಂದ್ರಶೇಖರ ಎಂಸಿಸಿ, ಓಂದಾಸ್ ಕಾಂಚನ್, ಹರೀಶ್ಚಂದ್ರ ಕರ್ಕೇರ, ದಿನೇಶ್ ಕರ್ಕೇರ, ಆಶಾಕಿರಣ ರೈ, ಪವಿತ್ರ ಕೋಡಿಕೆರೆ, ಶಿವಾಜಿ ದೇವಾಡಿಗ, ನಿಶ್ಚಲ್ ನಿಖಿಲ್, ದಿವಾಕರ್ ಉದ್ಯಾವರ, ಲೀಲಾಧರ ಕೋಡಿಕಲ್, ಚಂದ್ರಹಾಸ್ ಕರ್ಕೇರ, ಗಿರೀಶ್ ಶ್ರೀಯನ್, ಸುಕುಮಾರ್ ದೇವಾಡಿಗ, ಸಂತೋಷ್ ಕುಮಾರ್ ಶೆಟ್ಟಿ ಮತ್ತಿತರರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು