1:41 PM Thursday18 - June 2026
ಬ್ರೇಕಿಂಗ್ ನ್ಯೂಸ್
ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ… ದೆಹಲಿ ಮಟ್ಟದಲ್ಲಿ ಹೈವೋಲ್ಟೇಜ್ ಸಂಧಾನ: ಬೆಂಗಳೂರು ಅಭಿವೃದ್ಧಿ ಸಚಿವರಾಗಿ ಕೃಷ್ಣ ಬೈರೇಗೌಡ ಅಧಿಕಾರ… ತೀರ್ಪು ಮುನ್ನವೇ ಶಂಕಿತ ಉಗ್ರ ಕೊಡಗು ಮೂಲದ ಅಬ್ದುಲ್ ಖಾದರ್ ಸಾವು ಮೈಸೂರು ದುರಂತ: ಅಕ್ರಮ ಪಬ್, ಬಾರ್, ರೆಸ್ಟೋರೆಂಟ್‌ಗಳ ಮೇಲೆ ಕ್ರಮ: ಸಚಿವ ಡಾ.… ವಿಜಯಪುರ | ಭೀಕರ ರಸ್ತೆ ಅಪಘಾತ: ಟಿಪ್ಪರ್-ಬಸ್ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ 3… ವಿರಾಜಪೇಟೆ ಸಮೀಪದ ರೆಸಾರ್ಟ್ ಈಜುಕೋಳದಲ್ಲಿ ಬಿದ್ದು ಗೋವಾದ ಪ್ರವಾಸಿಗ ಸಾವು ಇಂದಿರಾ ಲಂಕೇಶ್ ನಿಧನ: ಮಾಜಿ ಸಿಎಂ ಸಿದ್ಧರಾಮಯ್ಯ, ಖ್ಯಾತ ನಟ ಪ್ರಕಾಶ್ ರೈ… ಮೈಸೂರು ಪಬ್‌ನಲ್ಲಿ ಭೀಕರ ಅಗ್ನಿ ದುರಂತ: ಇಬ್ಬರು ಸಜೀವ ದಹನ; ಹಲವರ ಸ್ಥಿತಿ… ಶಬರಿಮಲೆ ಮಣಿಕಂಠನ ದರ್ಶನಕ್ಕಾಗಿ ಇರುಮುಡಿ ಹೊತ್ತು ಶಬರಿಮಲೆಗೆ ಹೊರಟ ಕೇಂದ್ರ ಸಚಿವ ಕುಮಾರಸ್ವಾಮಿ

ಇತ್ತೀಚಿನ ಸುದ್ದಿ

ಕ್ರಿಸ್ಮಸ್, ಹೊಸ ವರ್ಷಾಚರಣೆ: ಹೊಸ ಮಾರ್ಗಸೂಚಿಯಲ್ಲಿ ಏನಕ್ಕೆಲ್ಲ ನಿಷೇಧವಿದೆ ಗೊತ್ತಾ? 

23/12/2021, 23:53

ಮಂಗಳೂರು(reporterkarnataka.com): ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಕ್ರಿಸ್ಮಸ್ ಹಾಗೂ ಹೊಸ ವರ್ಷಾಚರಣೆಗೆ ಸಂಬಂಧಿಸಿ ಹೊಸ ಮಾರ್ಗಸೂಚಿ ಪ್ರಕಟಿಸಿ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಆದೇಶ ಹೊರಡಿಸಿದ್ದಾರೆ.

ಮಾರ್ಗಸೂಚಿಯಲ್ಲಿ ಏನಿದೆ?:

ಕೋವಿಡ್ ನಿಯಮ ಕಡ್ಡಾಯವಾಗಿ ಪಾಲಿಸಿಕೊಂಡು ಚರ್ಚ್ ಆವರಣದಲ್ಲಿ ಸಾಂಪ್ರಾದಾಯಿಕ ಪ್ರಾರ್ಥನೆ ಮಾಡಲು ಅವಕಾಶವಿದೆ. 

ಆಚರಣೆ, ಪ್ರಾರ್ಥನೆಗಳನ್ನು ಯಾವುದೇ ಸಾರ್ವಜನಿಕ, ರಸ್ತೆ, ಉದ್ಯಾನವದಲ್ಲಿ ಮಾಡುವಂತಿಲ್ಲ.

ಕ್ಲಬ್, ಪಬ್, ರೆಸ್ಟೋರೆಂಟ್, ಹೋಟೆಲ್, ಉದ್ಯಾನವನ, ಖಾಸಗಿ ಸ್ಥಳಗಳಲ್ಲಿ ಡಿಜೆ, ಆರ್ಕೆಸ್ಟ್ರಾ, ಸಮೂಹ ನೃತ್ಯ ಮುಂತಾದ ವಿಶೇಷ ಕಾರ್ಯಕ್ರಮಕ್ಕೆ ಅವಕಾಶವಿಲ್ಲ.

ಸಾರ್ವಜನಿಕ ಸ್ಥಳ, ರಸ್ತೆ, ಉದ್ಯಾನವನ, ಮೈದಾನದಲ್ಲಿ ಹೊಸ ವರ್ಷಾಚರಣೆಗೆ ಅವಕಾಶವಿಲ್ಲ.

ಪಬ್, ಹೋಟೆಲ್, ರೆಸ್ಟೋರೆಂಟ್, ಕ್ಲಬ್ ಎಂದಿನಂತೆ ಕಾರ್ಯನಿರ್ವಹಿಸಬಹುದು.

ಸಿಬ್ಬಂದಿಗಳು ಆರ್ ಟಿಪಿಸಿಆರ್ ನೆಗೆಟಿವ್, 2 ಲಸಿಕೆ ಪಡೆದಿರಬೇಕು.

ಪಬ್, ಹೋಟೆಲ್, ರೆಸ್ಟೋರೆಂಟ್, ಕ್ಲಬ್ ಪ್ರವೇಶಿಸುವ ಸಾರ್ವಜನಿಕರು 2 ಡೋಸ್ ಲಸಿಕೆ ಪಡೆದಿರಬೇಕು.

ಕಾನೂನು ಉಲ್ಲಂಘಿಸಿದರೆ ಅಂತಹವರ ವಿರುದ್ಧ ಕಠಿಣ ಕ್ರಮ.

ಇತ್ತೀಚಿನ ಸುದ್ದಿ

ಜಾಹೀರಾತು