7:40 AM Saturday4 - July 2026
ಬ್ರೇಕಿಂಗ್ ನ್ಯೂಸ್
Raichuru | ಮಸ್ಕಿ: ಅತಿಥಿ ಶಿಕ್ಷಕರ ಭದ್ರತೆ ಸೇರಿದಂತೆ ವಿವಿಧ ಬೇಡಿಕೆ ಆಗ್ರಹಿಸಿ… ಮಡಿಕೇರಿ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಕ್ರಮವಾಗಿ ಜೂಜಾಟ: 28 ಜನರ ಬಂಧನ;… ಮತ ಪರಿಷ್ಕರಣೆ ವಿಚಾರದಲ್ಲಿ ಅಧಿಕಾರಿಗಳ ಕಳ್ಳಾಟ..!?: ಮನೆ ಮನೆಗೆ ಹೋಗುವ ಬದಲಾಗಿ ಜನರನ್ನೇ… ಮುಂದಿನ ಪೀಳಿಗೆಗೆ ಹಿಂಸೆ, ದ್ವೇಷ, ಸುಳ್ಳಿನ ಭಾರತವನ್ನು ಕೊಡಬಾರದು: ಕೆಪಿಸಿಸಿ ಅಧ್ಯಕ್ಷ ಬಿ.ಕೆ.… ಕಾಸು ಬೇಕಾದ್ರೆ ನನ್ನ ಹತ್ರ ಕೇಳೋ: ಲಂಚಕೋರ ಅಧಿಕಾರಿಗೆ ಕುಣಿಗಲ್ ಶಾಸಕ ಡಾ.… Bangalore | ವೇಶ್ಯಾವಾಟಿಕೆ:12 ಮಂದಿ ಬಾಂಗ್ಲಾದೇಶಿ ಪ್ರಜೆಗಳು ಸಿಸಿಬಿ ಪೊಲೀಸರ ವಶಕ್ಕೆ ಶಾಸಕ ಪ್ರದೀಪ್ ಈಶ್ವರ್ ಮೇಲೆ ಹಲ್ಲೆ ಯತ್ನ: ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ… ಬೆಂಗಳೂರು | ನಕಲಿ ಪೊಲೀಸ್ ಅಸಲಿ ಆಟ: ಯೂನಿಫಾರ್ಮ್ ಧರಿಸಿ ಬೈಕ್ ಸವಾರರಿಂದ… Belagavi | ವಿವಾಹಿತೆಯೊಂದಿಗೆ ಪರಾರಿ: ಯುವಕನ ಮನೆ ಧ್ವಂಸ; ಕುರಿಗಳನ್ನೂ ಹೊತ್ತೊಯ್ದು ಭರ್ಜರಿ… ಮತಾಂತರ ಆರೋಪ: ಕುಶಾಲನಗರದಲ್ಲಿ ಸ್ವಯಂಪ್ರೇರಿತ ಬಂದ್; ಎಲ್ಲವೂ ಸ್ತಬ್ದ

ಇತ್ತೀಚಿನ ಸುದ್ದಿ

ಕ್ರಿಸ್ತ ಜಯಂತಿ – 2025 ಜ್ಯುಬಿಲಿ ವರ್ಷ: ಮಾ. 20- 23: ಮಂಗಳೂರಿನಲ್ಲಿ ಬೈಬಲ್ ಮಹಾ ಸಮ್ಮೇಳನ

16/03/2025, 20:27

ಮಂಗಳೂರು(reporterkarnataka.com): ಕ್ರಿಸ್ತ ಜಯಂತಿ – 2025 ಜ್ಯುಬಿಲಿ ವರ್ಷ ಹಾಗೂ ಕ್ಯಾರಿಸ್ಮಾಟಿಕ್‌ ಸೇವಾ ಸಂಚಾಲನದ ಸುವರ್ಣ ಮಹೋತ್ಸವದ ಅಂಗವಾಗಿ ಬೈಬಲ್ ಮಹಾ ಸಮ್ಮೇಳನ ಮಾರ್ಚ್ 20ರಿಂದ 23ರ ತನಕ ನಗರದ ಕುಲಶೇಖರ ಕೋರ್ಡೆಲ್ ಹೋಲಿ ಕ್ರಾಸ್‌ ಚರ್ಚ್‌ನ ತೆರೆದ ಮೈದಾನದಲ್ಲಿ ಪ್ರತಿ ದಿನ ಸಂಜೆ 4ರಿಂದ ರಾತ್ರಿ 8.30ರ ತನಕ ನಡೆಯಲಿದೆ ಎಂದು ಮಂಗಳೂರು ಧರ್ಮ ಪ್ರಾಂತ್ಯದ ಧರ್ಮಾಧ್ಯಕ್ಷ ಅತಿ ವಂದನೀಯ ಡಾ. ಪೀಟರ್‌ ಪಾವ್ಲ್ ಸಲ್ಡಾನ್ಹಾ ಅವರು ತಿಳಿಸಿದ್ದಾರೆ.
ಈ ಪ್ರಾರ್ಥನಾ ಸಭೆಯಲ್ಲಿ ಬಲಿ ಪೂಜೆ, ಪರಮ ಪ್ರಸಾದದ ಆರಾಧನೆ, ಪ್ರವಚನ ಮತ್ತು ವಿಶೇಷ ಪ್ರಾರ್ಥನಾ ವಿಧಿ ಇರಲಿದ್ದು, ಕೇರಳದ ಆನಕ್ಕರ ಮೇರಿಯನ್‌ ರಿಟ್ರೀಟ್‌ ಸೆಂಟರಿನ ನಿರ್ದೇಶಕ ವಂದನೀಯ ಫಾದರ್‌ ಡೊಮಿನಿಕ್‌ ನಲಮನಲ್‌ ಅವರು ವಿಶೇಷ ಪ್ರಬೋಧನೆ ನೀಡಲಿದ್ದಾರೆ ಎಂದು ಪ್ರತಿಕಾ ಪ್ರಕಟನೆ ತಿಳಿಸಿದೆ.

ಇತ್ತೀಚಿನ ಸುದ್ದಿ

ಜಾಹೀರಾತು