8:43 AM Wednesday22 - July 2026
ಬ್ರೇಕಿಂಗ್ ನ್ಯೂಸ್
ಮುಖ್ಯಮಂತ್ರಿಗಳ ಕಾರ್ಯದರ್ಶಿ ಆಗಿ ಕುಶಾಲನಗರದ ಎಸ್. ಎಸ್. ನಕುಲ್ ನೇಮಕ ವಂದೇ ಮಾತರಂ ಗೀತೆಗೆ ಹೊಸ ರೂಲ್ಸ್: ಸಂಸತ್ ಮುಂಗಾರು ಅಧಿವೇಶನದಲ್ಲಿ ಮಸೂದೆ ಮಂಡನೆ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನ: ಕಾಮುಕನಿಗೆ ಗ್ರಾಮಸ್ಥರ ಧರ್ಮದೇಟು; ಪೊಲೀಸ್ ವಶಕ್ಕೆ ವಂದೇ ಮಾತರಂ ಗೀತೆಗೆ ಹೊಸ ರೂಲ್ಸ್: ಸಂಸತ್ ಮುಂಗಾರು ಅಧಿವೇಶನದಲ್ಲಿ ಮಸೂದೆ ಮಂಡನೆ ತೀರ್ಥಹಳ್ಳಿ | ಗುಂಡುಗದ್ದೆ ಬಳಿ ಆಟವಾಡುತ್ತಾ ರಸ್ತೆಗೆ ಬಂದ ಮಗು: ಕಾರು ಡಿಕ್ಕಿಯಾಗಿ… ಧಾರವಾಡ ಟು ಬೆಂಗಳೂರು: ಲಾರಿಯಲ್ಲಿ ಸಾಗಿಸುತ್ತಿದ್ದ 100ಕ್ಕೂ ಹೆಚ್ಚು ಗೋವುಗಳ ಮಾಂಸ ವಶ Mangaluru | ವೆನ್ಲಾಕ್ ಸರಕಾರಿ ಆಸ್ಪತ್ರೆಗೆ ಆರೋಗ್ಯ ಸಚಿವ ಯು.ಟಿ. ಖಾದರ್ ಭೇಟಿ:… ದಾರಿ ತಪ್ಪಿ ನಾಪೋಕ್ಲು ಪಟ್ಟಣ ಪ್ರವೇಶಿಸಿದ ಜಿಂಕೆ: ವಾಹನಗಳ ಅರ್ಭಟ, ಬೀದಿ ನಾಯಿಗಳ… ಮೈಸೂರು ದಸರಾದಲ್ಲಿ ಕಂಬಳ ಆಯೋಜನೆ ನಿರ್ಧಾರ ಕೈಬಿಡದಿದ್ದರೆ ಧರಣಿ: ವಿವಿಧ ಸಂಘಟನೆಗಳ ಆಕ್ರೋಶ ಮುತ್ತೈದೆ ಸಾವು ಕಂಡ ಮಹಾತಾಯಿ: ಹುಟ್ಟೂರಿನ ಬಗ್ಗೆ ಅಪಾರ ಪ್ರೀತಿ ಹೊಂದಿದ್ದ ಚೆನ್ನಮ್ಮ…

ಇತ್ತೀಚಿನ ಸುದ್ದಿ

ಮಂಜೇಶ್ವರ ಸ್ನೇಹಾಲಯದಲ್ಲಿ ‘ಕ್ರಿಸ್‌ಮಸ್ ಸಂಭ್ರಮ 2025’ ಸಾಂಸ್ಕೃತಿಕ ಹಬ್ಬ: ಕ್ಯಾರೋಲ್ ಗಾಯನ, ನೃತ್ಯ ವೈವಿಧ್ಯ

22/12/2025, 22:46

ಕಾಸರಗೋಡು(reporterkarnataka.com): ಮಂಜೇಶ್ವರದಲ್ಲಿರುವ ಸ್ನೇಹಾಲಯ ಮನೋ-ಸಾಮಾಜಿಕ ಪುನರ್ವಸತಿ ಕೇಂದ್ರದಲ್ಲಿ “ಕ್ರಿಸ್ಮಸ್ ಸಂಭ್ರಮ – 2025” ಅನ್ನು ಅತ್ಯಂತ ಭಕ್ತಿಭಾವ ಮತ್ತು ಹಬ್ಬದ ಉಲ್ಲಾಸದೊಂದಿಗೆ ಆಚರಿಸಲಾಯಿತು.
ಕ್ರಿಸ್‌ಮಸ್ ಅದರ ನಿಜವಾದ ಅರ್ಥದಲ್ಲಿ ಹೊಸತನದ ಜನನ, ಸಂತೋಷ, ಮಾನವಕುಲಕ್ಕೆ ಸೇವಾ ಮನೋಭಾವವನ್ನು ಈ ಸಮಾರಂಭ ಸಾರಿತು.
ಕ್ರಿಸ್‌ಮಸ್ ಸಂಭ್ರಮ – 2025.” ವು ಸಾಂಸ್ಕೃತಿಕ ಹಬ್ಬ, ವಿಶ್ವ ದಾಖಲೆ ಹೊಂದಿರುವ ರೆಮೋನಾ ಇವೆಟ್ ಪಿರೇರಾ ಅವರಿಂದ ಯೇಸುವಿನ ಜನನದ ಕಥೆಯನ್ನು ಅಭಿನಯಿಸುವ ಭರತನಾಟ್ಯ ಪ್ರದರ್ಶನ ಮತ್ತು ಪ್ರಸಿದ್ಧ ಗಾಯಕರಾದ ಜೋಶಲ್ ಮತ್ತು ಜೇಸನ್ ಅವರ ಸುಮಧುರ ಕ್ಯಾರೋಲ್ ಗಾಯನ, ಮಾಸ್ಟರ್ ಸಂಗೀತಗಾರ ಸಂಜಯ್ ರೊಡ್ರಿಗಸ್ ನಿರ್ದೇಶನ, ಹೊರಿಝೊನ್ ತಂಡ ಮತ್ತು ಅರ್ಬನ್ ಗ್ರೂವ್‌ ತಂಡಗಳಿಂದ ವೈವಿಧ್ಯಮಯ ನೃತ್ಯ ಪ್ರದರ್ಶನಗಳ ಸೂಪರ್ ಕಾಂಬೊ ಆಗಿತ್ತು.
ಅತೀ ವಂದನೀಯ ಬಿಷಪ್ ಹೇಮಚಂದ್ರ ಕುಮಾರ್, ಒಫ಼್ ಚರ್ಚ್ ಒಫ಼್ ಸೌತ್ ಇಂಡಿಯಾ ಇವರು ಮುಖ್ಯ ಅತಿಥಿಯಾಗಿ ಆಗಮಿಸಿ, ಆಚರಣೆಗೆ ಮುನ್ನ ಕ್ಯಾಂಪಸ್‌ಗೆ ಭೇಟಿ ನೀಡಿದರು, ಅವರು ನಿವಾಸಿಗಳನ್ನು ಆಶೀರ್ವದಿಸಿದರು ಮತ್ತು ಪ್ರೀತಿ, ಕರುಣೆ ಮತ್ತು ಮಾನವೀಯ ಕಾರ್ಯಗಳ ಅದ್ಭುತ ಸಂದೇಶವನ್ನು ನೀಡಿದರು ಮತ್ತು ನಾವು ಏನೇ ಮಾಡಿದರೂ ಕ್ರಿಸ್ತರು ಕಲಿಸಿದ ಮೌಲ್ಯಗಳನ್ನು ಅನುಸರಿಸಲು ಕರೆ ನೀಡಿದರು.
ಗೌರವಾನ್ವಿತ ಅತಿಥಿಗಳಾಗಿ ಸಾನಿಧ್ಯ ಸಮೂಹ ಸಂಸ್ಥೆಗಳ ಆಡಳಿತಾಧಿಕಾರಿ ವಸಂತ್ ಶೆಟ್ಟಿ ಉಪಸ್ಥಿತಿ ಇದ್ದು, ಕ್ರಿಸ್ತ ಮತ್ತು ಕೃಷ್ಣರನ್ನು ಹೋಲಿಸುವ ಅದ್ಭುತ ಸಂದೇಶದೊಂದಿಗೆ ಸಭಿಕರ ಹೃದಯಗಳನ್ನು ಮುಟ್ಟಿದರು. ಎಲ್ಲಾ ಧರ್ಮಗಳ ನಡುವಿನ ಸಮಾನತೆ ಹಾಗು ಬ್ರದರ್ ಜೋಸೆಫ್ ಕ್ರಾಸ್ತಾ ಅವರ ಸೇವೆಯನ್ನು ಶ್ಲಾಘಿಸಿದರು.
ನೂತನವಾಗಿ ಆಯ್ಕೆಯಾದ ಕಾಸರಗೋಡು ಜಿಲ್ಲಾ ಪಂಚಾಯತ ಸದಸ್ಯರಾದ ಹರ್ಷದ್ ವರ್ಕಾಡಿ ಅಂದೇ ಪ್ರಮಾಣ ವಚನ ಮತ್ತು ಅಧಿಕಾರ ಸ್ವೀಕಾರ ಮಾಡಿ ಸಂಭ್ರಮದಲ್ಲಿ ಪಾಲ್ಗೊಂಡು ಜೋಸೆಫ್ ಹಾಗೂ ಅವರ ಮಿಷನ್‌ನ ಹಳೆಯ ದಿನಗಳನ್ನು ಅವರು ನೆನಪಿಸಿಕೊಂಡರು ಮತ್ತು ವಿನಮ್ರ ಕೆಲಸವನ್ನು ಹೇಗೆ ಆಶೀರ್ವದಿಸಲಾಗುತ್ತಿದೆ ಎಂಬುದನ್ನು ಉದಾಹರಣೆಯಾಗಿ ನೀಡಿದರು.
ಈ ಕಾರ್ಯಕ್ರಮದ ಭಾಗವಾಗಿರುವುದಕ್ಕೆ ಅವರು ಸಂತೋಷ ವ್ಯಕ್ತಪಡಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು