10:50 AM Friday13 - February 2026
ಬ್ರೇಕಿಂಗ್ ನ್ಯೂಸ್
ಮಾಜಿ ಪ್ರಧಾನಿ ಎಚ್ಡಿಡಿ ಮಧ್ಯಪ್ರವೇಶ: ಕಾಫಿ ತೋಟಗಳ ಆನ್-ಲೈನ್ ಹರಾಜು ತಕ್ಷಣವೇ ಸ್ಥತಿತಗೊಳಿಸುವಂತೆ… ಕಾಲವೇ ಉತ್ತರ ಕೊಡುತ್ತೆ: ಸೋನಿಯಾ, ರಾಹುಲ್, ಪ್ರಿಯಾಂಕ ಭೇಟಿ ಬಳಿಕ ಡಿಸಿಎಂ ಡಿಕೆಶಿ… ಶಿವಣ್ಣನ ಶಿವಭಕ್ತಿ: ಶಿವರಾತ್ರಿಯ ಅಂಗವಾಗಿ 37 ವರ್ಷಗಳಿಂದ ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ಪಾದಯಾತ್ರೆ! ದಕ್ಷಿಣ ಕೊಡಗಿನಲ್ಲಿ ಆತಂಕದ ಸೃಷ್ಟಿಸಿದ್ದ ವ್ಯಾಘ್ರ ಕೊನೆಗೂ ಸೆರೆ: ಬಲೆಗೆ ಬಿದ್ದ ಗಂಡು… ತೇಜಸ್ವಿ ಸೂರ್ಯ ಬಂಧನ ಮಾಡಿಸಿದ ಸಿದ್ದರಾಮಯ್ಯ ಪುಕ್ಕಲ ಸಿಎಂ: ಪ್ರತಾಪ್‌ ಸಿಂಹ ಕಿಡಿ ಚಿಕ್ಕಮಗಳೂರು: ಕಾಫಿ ತೋಟದ ಇಬ್ಬರು ಮಹಿಳಾ ಕಾರ್ಮಿಕರ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ… ಎಚ್ ಡಿ ಕೋಟೆ | ಕಂಚಮಳ್ಳಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಮೇಲೆ ಭಾರೀ… Kodagu | ಕುಶಾಲನಗರ: ರಸ್ತೆಯಲ್ಲೇ ಧಗಧಗನೆ ಹೊತ್ತಿ ಉರಿದ ಕ್ರೇಟಾ ಕಾರು; ಅದೃಷ್ಟವಶಾತ್… ಇ-ಸ್ವತ್ತು ತಂತ್ರಾಂಶದಲ್ಲಿ ಬದಲಾವಣೆ ಮೂಲಕ ಸಾರ್ವಜನಿಕರಿಗೆ ತ್ವರಿತ ಸೇವೆಗೆ ಕ್ರಮ: ಗ್ರಾಮೀಣಾಭಿವೃದ್ಧಿ ಸಚಿವ… ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಕೃಷ್ಣಾ ನದಿ ನೀರು; ಶೀಘ್ರವೇ ಆಂಧ್ರ ಸಿಎಂ ಜತೆ…

ಇತ್ತೀಚಿನ ಸುದ್ದಿ

ಚುನಾವಣೆ ನೀತಿ ಸಂಹಿತೆ ಉಲ್ಲಂಘಿಸಿದರೆ ಕ್ರಮ ಕೈಗೊಳ್ಳಲಾಗುವುದು: ಕೋಲಾರ ಜಿಲ್ಲಾಧಿಕಾರಿ ಡಾ. ಆರ್. ಸೆಲ್ವಮಣಿ 

15/11/2021, 20:27

ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಕೋಲಾರ

info.reporterkarnataka@gmail.com

ಕರ್ನಾಟಕ ವಿಧಾನ ಪರಿಷತ್ ಸ್ಥಳೀಯ ಸಂಸ್ಥೆಗಳ ಕ್ಷೇತ್ರದ ಚುನಾವಣೆಗೆ ನವೆಂಬರ್ 16 ರಿಂದ ನಾಮಪತ್ರಗಳನ್ನು ಸಲ್ಲಿಸುವ ಪ್ರಕ್ರಿಯೆ ಪ್ರಾರಂಭವಾಗಲಿದ್ದು , ಚುನಾವಣೆ ಸುಸಜ್ಜಿತವಾಗಿ ಯಾವುದೇ ತೊಂದರೆಯಾಗದಂತೆ ನಡೆಯಬೇಕು . ಚುನಾವಣೆ ನೀತಿ ಸಂಹಿತೆಯನ್ನು ಯಾರಾದರು ಉಲ್ಲಂಘಿಸಿದಲ್ಲಿ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಡಾ. ಆರ್.ಸೆಲ್ವಮಣಿ ಹೇಳಿದರು.

ಕೋಲಾರ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಚುನಾವಣಾ ಮಾದರಿ ನೀತಿ ಸಂಹಿತೆ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು . ಚುನಾವಣಾ ಮಾದರಿ ನೀತಿ ಸಂಹಿತೆಯ ನಿಯಮಗಳನ್ನು ಎಲ್ಲಾ ಅಧಿಕಾರಿಗಳು ತಿಳಿದುಕೊಳ್ಳಬೇಕು . ಚುನಾವಣೆ ಸಮಯದಲ್ಲಿ ಅಧಿಕಾರಿಗಳು ತುಂಬಾ ಜಾಗೃತಿ ವಹಿಸಬೇಕು . ಯಾವುದೇ ರೀತಿ ತೊಂದರೆಗಳಾದಲ್ಲಿ ಚುನಾವಣಾ ಸಮಿತಿಗೆ ತಕ್ಷಣ ಮಾಹಿತಿ ನೀಡಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು. 

ಚುನಾವಣಾ ಸಂಧರ್ಭದಲ್ಲಿ ಪ್ರಚಾರಕ್ಕಾಗಿ ಹಣ , ಮಧ್ಯ ಹಾಗೂ ವಸ್ತುಗಳನ್ನು ಹಂಚಲು ಬಳಸುತ್ತಾರೆ ಎಂಬ ದೂರುಗಳಿವೆ . ಮಧ್ಯವನ್ನು ದಸ್ತಾನು ಮಾಡುವುದು, ಸರಬರಾಜು ಮಾಡುವುದು ಹಾಗೂ ಹಂಚಿಕೆ ಮಾಡುವುದನ್ನು ಅಬಕಾರಿ ಇಲಾಖೆ ಅಧಿಕಾರಿಗಳು ಹಾಗೂ ಪೊಲೀಸ್ ಇಲಾಖೆ ಅಧಿಕಾರಿಗಳು ಪರಿಶೀಲನೆ ಮಾಡಬೇಕು . ಪ್ರಕರಣಗಳು ಕಂಡುಬಂದಲ್ಲಿ ಅಂತವರ ವಿರುದ್ದ ಪ್ರಕರಣ ದಾಖಲಾಯಿಸಿ ಎಂದು ಅವರು ಅಧಿಕಾರಿಗಳಿಗೆ ಸೂಚಿಸಿದರು. 

ಹಣ ಹಂಚುವುದು, ದಾಸ್ತಾನು ಮಾಡುವುದು ಹಾಗೂ ಸರಬರಾಜು ಮಾಡುವುದರ ಬಗ್ಗೆ ದೂರುಗಳು ಬಂದಲ್ಲಿ ತಕ್ಷಣ ಪರಿಶೀಲನೆ ಮಾಡಬೇಕು. 10 ಲಕ್ಷಕ್ಕಿಂತ ಕಡಿಮೆ ಇರುವ ಹಣ ಸಿಕ್ಕಿದಲ್ಲಿ ಜಿಲ್ಲಾ ಪಂಚಾಯತ್ ಮುಖ್ಯಕಾರ್ಯನಿರ್ವಹಣಾಧಿಕಾರಿಗಳ ಸಮಿತಿ ಕ್ರಮಕ್ಕೆ ವಹಿಸಬೇಕು. ಸಮಿತಿಯು ಪರಿಶೀಲನೆ ನಡೆಸಿ ಹಣದ ಬಗ್ಗೆ ಕ್ರಮ ಕೈಗೊಳ್ಳುವರು . 10 ಲಕ್ಷಕ್ಕಿಂತ ಮೇಲ್ಪಟ್ಟ ಹಣ ಸಿಕ್ಕಿದಲ್ಲಿ ಆದಾಯ ತೆರಿಗೆ ಇಲಾಖೆಗೆ ವಹಿಸಬೇಕು. ಅವರು ಹಣವನ್ನು ಪರಿಶೀಲನೆ ನಡೆಸಿ ಹಣದ ಮಾಹಿತಿ ಸಿಗದಿದ್ದಲ್ಲಿ ಅವರ ವಿರುದ್ದ ಪ್ರಕರಣ ದಾಖಲಾಯಿಸಬೇಕು ಎಂದು ಅವರು ಅಧಿಕಾರಿಗಳಿಗೆ ಸೂಚಿಸಿದರು . ಸಭೆಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಾದ ಉಕೇಶ್ ಕುಮಾರ್ , ಉಪ ವಿಭಾಗಾಧಿಕಾರಿಗಳಾದ ಆನಂದ್ ಪ್ರಕಾಶ್ ಮೀನಾ , ಚುನಾವಣಾ ತಹಶೀಲ್ದಾರ್ ಬಿ.ನಾಗವೇಣಿ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು