12:18 AM Monday1 - December 2025
ಬ್ರೇಕಿಂಗ್ ನ್ಯೂಸ್
ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು… Kodagu | ಹುಣಸೂರು: ರೈತರ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ; ನಿಟ್ಟುಸಿರು… Udupi | ನದಿ, ವೃಕ್ಷ ಸಂರಕ್ಷಣೆ ಸೇರಿದಂತೆ ನವ ಸಂಕಲ್ಪಗಳ ಪಾಲನೆಗೆ ಪ್ರಧಾನಿ… Udupi | ಕೃಷ್ಣನಗರಿಯಲ್ಲಿ ಪ್ರಧಾನಿ ಮೋದಿಗೆ ಬೆಳ್ಳಿ ಕಡೆಗೋಲು ಕೊಡುಗೆ Udupi | ‘ಜೈ ಶ್ರೀ ಕೃಷ್ಣ’ ಎಂದು ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನಿ… ಪ್ರಧಾನಿ ಮೋದಿ ಇಂದು ಉಡುಪಿಗೆ: ಶ್ರೀಕೃಷ್ಣ ಮಠದ ಲಕ್ಷ ಕಂಠ ಗೀತಾ ಪಾರಾಯಣದಲ್ಲಿ… ಉಡುಪಿಗೆ ಪ್ರಧಾನಿ ಭೇಟಿ: ಎಸ್‌ಪಿಜಿ ಜತೆಗೆ ಖಾಕಿ ಸರ್ಪಗಾವಲು: ನಿಗದಿತ ಸಮಯಕ್ಕೆ ಮುಂಚಿತವಾಗಿಯೇ…

ಇತ್ತೀಚಿನ ಸುದ್ದಿ

ಚುನಾವಣೆ ನೀತಿ ಸಂಹಿತೆ ಉಲ್ಲಂಘಿಸಿದರೆ ಕ್ರಮ ಕೈಗೊಳ್ಳಲಾಗುವುದು: ಕೋಲಾರ ಜಿಲ್ಲಾಧಿಕಾರಿ ಡಾ. ಆರ್. ಸೆಲ್ವಮಣಿ 

15/11/2021, 20:27

ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಕೋಲಾರ

info.reporterkarnataka@gmail.com

ಕರ್ನಾಟಕ ವಿಧಾನ ಪರಿಷತ್ ಸ್ಥಳೀಯ ಸಂಸ್ಥೆಗಳ ಕ್ಷೇತ್ರದ ಚುನಾವಣೆಗೆ ನವೆಂಬರ್ 16 ರಿಂದ ನಾಮಪತ್ರಗಳನ್ನು ಸಲ್ಲಿಸುವ ಪ್ರಕ್ರಿಯೆ ಪ್ರಾರಂಭವಾಗಲಿದ್ದು , ಚುನಾವಣೆ ಸುಸಜ್ಜಿತವಾಗಿ ಯಾವುದೇ ತೊಂದರೆಯಾಗದಂತೆ ನಡೆಯಬೇಕು . ಚುನಾವಣೆ ನೀತಿ ಸಂಹಿತೆಯನ್ನು ಯಾರಾದರು ಉಲ್ಲಂಘಿಸಿದಲ್ಲಿ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಡಾ. ಆರ್.ಸೆಲ್ವಮಣಿ ಹೇಳಿದರು.

ಕೋಲಾರ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಚುನಾವಣಾ ಮಾದರಿ ನೀತಿ ಸಂಹಿತೆ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು . ಚುನಾವಣಾ ಮಾದರಿ ನೀತಿ ಸಂಹಿತೆಯ ನಿಯಮಗಳನ್ನು ಎಲ್ಲಾ ಅಧಿಕಾರಿಗಳು ತಿಳಿದುಕೊಳ್ಳಬೇಕು . ಚುನಾವಣೆ ಸಮಯದಲ್ಲಿ ಅಧಿಕಾರಿಗಳು ತುಂಬಾ ಜಾಗೃತಿ ವಹಿಸಬೇಕು . ಯಾವುದೇ ರೀತಿ ತೊಂದರೆಗಳಾದಲ್ಲಿ ಚುನಾವಣಾ ಸಮಿತಿಗೆ ತಕ್ಷಣ ಮಾಹಿತಿ ನೀಡಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು. 

ಚುನಾವಣಾ ಸಂಧರ್ಭದಲ್ಲಿ ಪ್ರಚಾರಕ್ಕಾಗಿ ಹಣ , ಮಧ್ಯ ಹಾಗೂ ವಸ್ತುಗಳನ್ನು ಹಂಚಲು ಬಳಸುತ್ತಾರೆ ಎಂಬ ದೂರುಗಳಿವೆ . ಮಧ್ಯವನ್ನು ದಸ್ತಾನು ಮಾಡುವುದು, ಸರಬರಾಜು ಮಾಡುವುದು ಹಾಗೂ ಹಂಚಿಕೆ ಮಾಡುವುದನ್ನು ಅಬಕಾರಿ ಇಲಾಖೆ ಅಧಿಕಾರಿಗಳು ಹಾಗೂ ಪೊಲೀಸ್ ಇಲಾಖೆ ಅಧಿಕಾರಿಗಳು ಪರಿಶೀಲನೆ ಮಾಡಬೇಕು . ಪ್ರಕರಣಗಳು ಕಂಡುಬಂದಲ್ಲಿ ಅಂತವರ ವಿರುದ್ದ ಪ್ರಕರಣ ದಾಖಲಾಯಿಸಿ ಎಂದು ಅವರು ಅಧಿಕಾರಿಗಳಿಗೆ ಸೂಚಿಸಿದರು. 

ಹಣ ಹಂಚುವುದು, ದಾಸ್ತಾನು ಮಾಡುವುದು ಹಾಗೂ ಸರಬರಾಜು ಮಾಡುವುದರ ಬಗ್ಗೆ ದೂರುಗಳು ಬಂದಲ್ಲಿ ತಕ್ಷಣ ಪರಿಶೀಲನೆ ಮಾಡಬೇಕು. 10 ಲಕ್ಷಕ್ಕಿಂತ ಕಡಿಮೆ ಇರುವ ಹಣ ಸಿಕ್ಕಿದಲ್ಲಿ ಜಿಲ್ಲಾ ಪಂಚಾಯತ್ ಮುಖ್ಯಕಾರ್ಯನಿರ್ವಹಣಾಧಿಕಾರಿಗಳ ಸಮಿತಿ ಕ್ರಮಕ್ಕೆ ವಹಿಸಬೇಕು. ಸಮಿತಿಯು ಪರಿಶೀಲನೆ ನಡೆಸಿ ಹಣದ ಬಗ್ಗೆ ಕ್ರಮ ಕೈಗೊಳ್ಳುವರು . 10 ಲಕ್ಷಕ್ಕಿಂತ ಮೇಲ್ಪಟ್ಟ ಹಣ ಸಿಕ್ಕಿದಲ್ಲಿ ಆದಾಯ ತೆರಿಗೆ ಇಲಾಖೆಗೆ ವಹಿಸಬೇಕು. ಅವರು ಹಣವನ್ನು ಪರಿಶೀಲನೆ ನಡೆಸಿ ಹಣದ ಮಾಹಿತಿ ಸಿಗದಿದ್ದಲ್ಲಿ ಅವರ ವಿರುದ್ದ ಪ್ರಕರಣ ದಾಖಲಾಯಿಸಬೇಕು ಎಂದು ಅವರು ಅಧಿಕಾರಿಗಳಿಗೆ ಸೂಚಿಸಿದರು . ಸಭೆಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಾದ ಉಕೇಶ್ ಕುಮಾರ್ , ಉಪ ವಿಭಾಗಾಧಿಕಾರಿಗಳಾದ ಆನಂದ್ ಪ್ರಕಾಶ್ ಮೀನಾ , ಚುನಾವಣಾ ತಹಶೀಲ್ದಾರ್ ಬಿ.ನಾಗವೇಣಿ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು