10:09 PM Tuesday23 - June 2026
ಬ್ರೇಕಿಂಗ್ ನ್ಯೂಸ್
ಟ್ರಾಫಿಕ್ ಸಮಸ್ಯೆಯಾಗಿದ್ದು ನಿಜ, ನೀಟ್ ವಿದ್ಯಾರ್ಥಿಗಳಿಗೆ ತೊಂದರೆಯಾಗಿದ್ದರೆ ಸಹಾಯ ಮಾಡ್ತೀವಿ: ಕೆಪಿಸಿಸಿ ಅಧ್ಯಕ್ಷ… ಚನ್ನಪಟ್ಟಣ | ಎಕ್ಸ್​ಪ್ರೆಸ್​ ರಸ್ತೆಯಲ್ಲಿ ಭೀಕರ ಅಪಘಾತ: ಕಾರಿನ ಚಕ್ರ ಸ್ಫೋಟಗೊಂಡು ಚಾಲಕ… ಹಸೆಮಣೆ ಏರಬೇಕಿದ್ದಾಕೆಗೆ ಪಾಪಿ ಯುವಕನಿಂದ ಬೆದರಿಕೆ: ಮಾನಕ್ಕೆ ಅಂಜಿ ಒಂದೇ ಕುಟುಂಬದ ಮೂವರು… ಚುನಾವಣೆಗಷ್ಟೇ ಅಲ್ಲ, ಸಿದ್ಧಾಂತದ ಬಲವರ್ಧನೆಗೆ ಕೆಪಿಸಿಸಿ ಅಧ್ಯಕ್ಷರಾಗಿ ಹರಿಪ್ರಸಾದ್ ಆಯ್ಕೆ: ಮಾಜಿ ಸಿಎಂ… ತೀರ್ಥಹಳ್ಳಿ | ಶಿವರಾಜಪುರ ಬಳಿ ಎರಡು ಕಾರುಗಳ ನಡುವೆ ಭೀಕರ ಅಪಘಾತ: ಸಂಪೂರ್ಣ… Bangalore | ಬಿಡದಿ ಟೌನ್‌ಶಿಪ್ ವಿರುದ್ಧ ನಿಖಿಲ್ ಕುಮಾರಸ್ವಾಮಿ ಪಾದಯಾತ್ರೆಗೆ ಗ್ರಾಮಸ್ಥರ ತಡೆ:… ಬೆಂಗಳೂರು ಅರಮನೆ ಮೈದಾನದಲ್ಲಿ ಬೃಹತ್ ಸಮಾರಂಭ: ಕೆಪಿಸಿಸಿ ಅಧ್ಯಕ್ಷ ಗದ್ದುಗೆ ಏರಿದ ಖಡಕ್… Bangalore | ನಾಗಸಂದ್ರ ಮೆಟ್ರೋ ನಿಲ್ದಾಣದ ತುರ್ತು ನಿರ್ಗಮನ ದ್ವಾರದಲ್ಲಿ ಶಾರ್ಟ್ ಸಕ್ಯೂಟ್;… ಮಸ್ಕಿ: ರಾಯಚೂರಿಗೆ AIIMS ಮಂಜೂರಾತಿಗಾಗಿ 1500 ದಿನಗಳ ಧರಣಿ ಸತ್ಯಾಗ್ರಹ: ಕಲ್ಯಾಣ ಕರ್ನಾಟಕದಾದ್ಯಂತ… Chitradurga | ಪರಶುರಾಂಪುರ: ಕಂದಾಯ ಇಲಾಖೆ ರಾಜಸ್ವ ನಿರೀಕ್ಷಕ ಎಸ್. ಆರ್. ರಾಜೇಶ್…

ಇತ್ತೀಚಿನ ಸುದ್ದಿ

ಚುನಾವಣೆ ನೀತಿ ಸಂಹಿತೆ ಉಲ್ಲಂಘಿಸಿದರೆ ಕ್ರಮ ಕೈಗೊಳ್ಳಲಾಗುವುದು: ಕೋಲಾರ ಜಿಲ್ಲಾಧಿಕಾರಿ ಡಾ. ಆರ್. ಸೆಲ್ವಮಣಿ 

15/11/2021, 20:27

ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಕೋಲಾರ

info.reporterkarnataka@gmail.com

ಕರ್ನಾಟಕ ವಿಧಾನ ಪರಿಷತ್ ಸ್ಥಳೀಯ ಸಂಸ್ಥೆಗಳ ಕ್ಷೇತ್ರದ ಚುನಾವಣೆಗೆ ನವೆಂಬರ್ 16 ರಿಂದ ನಾಮಪತ್ರಗಳನ್ನು ಸಲ್ಲಿಸುವ ಪ್ರಕ್ರಿಯೆ ಪ್ರಾರಂಭವಾಗಲಿದ್ದು , ಚುನಾವಣೆ ಸುಸಜ್ಜಿತವಾಗಿ ಯಾವುದೇ ತೊಂದರೆಯಾಗದಂತೆ ನಡೆಯಬೇಕು . ಚುನಾವಣೆ ನೀತಿ ಸಂಹಿತೆಯನ್ನು ಯಾರಾದರು ಉಲ್ಲಂಘಿಸಿದಲ್ಲಿ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಡಾ. ಆರ್.ಸೆಲ್ವಮಣಿ ಹೇಳಿದರು.

ಕೋಲಾರ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಚುನಾವಣಾ ಮಾದರಿ ನೀತಿ ಸಂಹಿತೆ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು . ಚುನಾವಣಾ ಮಾದರಿ ನೀತಿ ಸಂಹಿತೆಯ ನಿಯಮಗಳನ್ನು ಎಲ್ಲಾ ಅಧಿಕಾರಿಗಳು ತಿಳಿದುಕೊಳ್ಳಬೇಕು . ಚುನಾವಣೆ ಸಮಯದಲ್ಲಿ ಅಧಿಕಾರಿಗಳು ತುಂಬಾ ಜಾಗೃತಿ ವಹಿಸಬೇಕು . ಯಾವುದೇ ರೀತಿ ತೊಂದರೆಗಳಾದಲ್ಲಿ ಚುನಾವಣಾ ಸಮಿತಿಗೆ ತಕ್ಷಣ ಮಾಹಿತಿ ನೀಡಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು. 

ಚುನಾವಣಾ ಸಂಧರ್ಭದಲ್ಲಿ ಪ್ರಚಾರಕ್ಕಾಗಿ ಹಣ , ಮಧ್ಯ ಹಾಗೂ ವಸ್ತುಗಳನ್ನು ಹಂಚಲು ಬಳಸುತ್ತಾರೆ ಎಂಬ ದೂರುಗಳಿವೆ . ಮಧ್ಯವನ್ನು ದಸ್ತಾನು ಮಾಡುವುದು, ಸರಬರಾಜು ಮಾಡುವುದು ಹಾಗೂ ಹಂಚಿಕೆ ಮಾಡುವುದನ್ನು ಅಬಕಾರಿ ಇಲಾಖೆ ಅಧಿಕಾರಿಗಳು ಹಾಗೂ ಪೊಲೀಸ್ ಇಲಾಖೆ ಅಧಿಕಾರಿಗಳು ಪರಿಶೀಲನೆ ಮಾಡಬೇಕು . ಪ್ರಕರಣಗಳು ಕಂಡುಬಂದಲ್ಲಿ ಅಂತವರ ವಿರುದ್ದ ಪ್ರಕರಣ ದಾಖಲಾಯಿಸಿ ಎಂದು ಅವರು ಅಧಿಕಾರಿಗಳಿಗೆ ಸೂಚಿಸಿದರು. 

ಹಣ ಹಂಚುವುದು, ದಾಸ್ತಾನು ಮಾಡುವುದು ಹಾಗೂ ಸರಬರಾಜು ಮಾಡುವುದರ ಬಗ್ಗೆ ದೂರುಗಳು ಬಂದಲ್ಲಿ ತಕ್ಷಣ ಪರಿಶೀಲನೆ ಮಾಡಬೇಕು. 10 ಲಕ್ಷಕ್ಕಿಂತ ಕಡಿಮೆ ಇರುವ ಹಣ ಸಿಕ್ಕಿದಲ್ಲಿ ಜಿಲ್ಲಾ ಪಂಚಾಯತ್ ಮುಖ್ಯಕಾರ್ಯನಿರ್ವಹಣಾಧಿಕಾರಿಗಳ ಸಮಿತಿ ಕ್ರಮಕ್ಕೆ ವಹಿಸಬೇಕು. ಸಮಿತಿಯು ಪರಿಶೀಲನೆ ನಡೆಸಿ ಹಣದ ಬಗ್ಗೆ ಕ್ರಮ ಕೈಗೊಳ್ಳುವರು . 10 ಲಕ್ಷಕ್ಕಿಂತ ಮೇಲ್ಪಟ್ಟ ಹಣ ಸಿಕ್ಕಿದಲ್ಲಿ ಆದಾಯ ತೆರಿಗೆ ಇಲಾಖೆಗೆ ವಹಿಸಬೇಕು. ಅವರು ಹಣವನ್ನು ಪರಿಶೀಲನೆ ನಡೆಸಿ ಹಣದ ಮಾಹಿತಿ ಸಿಗದಿದ್ದಲ್ಲಿ ಅವರ ವಿರುದ್ದ ಪ್ರಕರಣ ದಾಖಲಾಯಿಸಬೇಕು ಎಂದು ಅವರು ಅಧಿಕಾರಿಗಳಿಗೆ ಸೂಚಿಸಿದರು . ಸಭೆಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಾದ ಉಕೇಶ್ ಕುಮಾರ್ , ಉಪ ವಿಭಾಗಾಧಿಕಾರಿಗಳಾದ ಆನಂದ್ ಪ್ರಕಾಶ್ ಮೀನಾ , ಚುನಾವಣಾ ತಹಶೀಲ್ದಾರ್ ಬಿ.ನಾಗವೇಣಿ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು