9:14 PM Wednesday5 - August 2026
ಬ್ರೇಕಿಂಗ್ ನ್ಯೂಸ್
2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:… *10 ಲಕ್ಷ ರೂ. ಲಂಚಕ್ಕೆ ಬೇಡಿಕೆ; ಲೋಕಾಯುಕ್ತ ಬಲೆಗೆ ಬಿದ್ದ ಹುಣಸೂರು ಉಪವಿಭಾಗಾಧಿಕಾರಿ… ವಿಧಾನ ಪರಿಷತ್‌ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ ರಾಜೀನಾಮೆ ಸಂಪುಟ ವಿಸ್ತರಣೆ | ಕೊನೆ ಕ್ಷಣದಲ್ಲಿ 3 ಬಾರಿ ಪಟ್ಟಿ ಬದಲು: ಗಾಯತ್ರಿ… ಸಂಪುಟ ವಿಸ್ತರಣೆ | ಈ ಬಾರಿಯೂ ಕೊಡಗಿಗೆ ಒಲಿಯದ ಮಂತ್ರಿಗಿರಿ: ವಿರಾಜಪೇಟೆ ಶಾಸಕ… ಮೈಸೂರಿಗೆ ಪ್ರಧಾನಿ ಮೋದಿ: ಸ್ವಾಮಿ ವಿವೇಕಾನಂದ ಸಾಂಸ್ಕೃತಿಕ ಯುವ ಕೇಂದ್ರ ವಿವೇಕ ಸ್ಮಾರಕ… ಭಾರತದ ಭವ್ಯ ಪರಂಪರೆ ಮೈಸೂರಿನ ಕಣಕಣದಲ್ಲಿದೆ: ವಿವೇಕ ಸ್ಮಾರಕ ಉದ್ಘಾಟಿಸಿ ಪ್ರಧಾನಿ ಮೋದಿ… ಸಿದ್ದಾಪುರ: ದೇವಾಲಯ ಆವರಣದಲ್ಲಿ ಗೋರಿ ನಿರ್ಮಾಣ ಪ್ರಕರಣ; 8 ಮಂದಿ ಬಂಧನ

ಇತ್ತೀಚಿನ ಸುದ್ದಿ

ಚುನಾವಣಾ ಸಾಕ್ಷರತಾ ಕ್ಲಬ್ ರಸಪ್ರಶ್ನೆ: ಜಿಲ್ಲಾಮಟ್ಟಕ್ಕೆ ಆಯ್ಕೆಯಾದ ಹೊಸೂರು ಗುಡ್ಡೇಕೇರಿ ಪ್ರೌಢಶಾಲೆ ವಿದ್ಯಾರ್ಥಿಗಳು

24/11/2024, 16:24

ರಶ್ಮಿ ಶ್ರೀಕಾಂತ್ ನಾಯಕ್ ತೀರ್ಥಹಳ್ಳಿ ಶಿವಮೊಗ್ಗ

info.reporterkarnataka@gmail.com

ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಹಾಗೂ ತಾಲೂಕು ಚುನಾವಣಾ ಸಾಕ್ಷರತಾ ಕ್ಲಬ್ ಆಶ್ರಯದಲ್ಲಿ ನಡೆದ ತಾಲೂಕು ‌ಮಟ್ಟದ ರಸಪ್ರಶ್ನೆ ಸ್ಪರ್ಧೆಯಲ್ಲಿ ತೀರ್ಥಹಳ್ಳಿ ತಾಲ್ಲೂಕಿನ ಸರ್ಕಾರಿ ಪ್ರೌಢಶಾಲೆ ಹೊಸೂರು ಗುಡ್ಡೇಕೇರಿ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದೆ.
ತಾಲೂಕಿನ ಸರ್ಕಾರಿ, ಅನುದಾನಿತ, ಅನುದಾನ ರಹಿತ ಶಾಲೆಗಳು ಭಾಗವಹಿಸಿದ್ದ ಈ ಸ್ಪರ್ಧೆಯಲ್ಲಿ ಗುಡ್ಡೇಕೇರಿ ಶಾಲಾ ಮಕ್ಕಳು ಲಿಖಿತ ಪರೀಕ್ಷೆಯಲ್ಲಿ ಪ್ರಥಮ ಸ್ಥಾನ ಪಡೆದು, ಮೌಖಿಕ ಅಂತಿಮ ಸುತ್ತಿಗೆ ಆಯ್ಕೆಯಾಗಿದ್ದರು. ಅಂತಿಮ ಸುತ್ತಿನಲ್ಲಿ, ಸಹ್ಯಾದ್ರಿ ಪ್ರೌಢಶಾಲೆ, ವಾಗ್ದೇವಿ ಪ್ರೌಢಶಾಲೆ, ಸರ್ಕಾರಿ ಪ್ರೌಢಶಾಲೆ ಮೇಗರವಳ್ಳಿ, ಸರ್ಕಾರಿ ಪ್ರೌಢಶಾಲೆ ಕೊಡ್ಲು ಹಾಗೂ ಗುಡ್ಡೇಕೇರಿ ಪ್ರೌಢಶಾಲೆ ಭಾಗವಹಿಸಿದ್ದವು. ಅಂತಿಮವಾಗಿ ಸರ್ಕಾರಿ ಪ್ರೌಢಶಾಲೆ ಹೊಸೂರು ಗುಡ್ಡೇಕೇರಿಯ ಮಕ್ಕಳು ಪ್ರಥಮ ಸ್ಥಾನ ಪಡೆದಿದ್ದಾರೆ.
ರಾಜ್ಯ ಪ್ರಶಸ್ತಿ ವಿಜೇತ ಶಿಕ್ಷಕರಾದ ವೀರೇಶ್ ಟಿ. ಅವರ ಮಾರ್ಗದರ್ಶನ ಹಾಗೂ ಎಲ್ಲಾ ಶಿಕ್ಷಕರ ಸಹಕಾರದಲ್ಲಿ ಸ್ಪರ್ಧೆಗೆ ಭಾಗವಹಿಸಿದ್ದ ಅಶ್ವಿನಿ ಪ್ರಭುಗೌಡರ್ ತುಂಬಿಗಿ ಹಾಗೂ ನಮ್ರತಾ ಮೋಹನ್ ನಂಟೂರು ಈಗ ಜಿಲ್ಲಾಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಕಳೆದ ವರ್ಷ ಇದೇ ಸ್ಪರ್ಧೆಯಲ್ಲಿ ಇದೇ ಶಾಲೆಯ ಅಕ್ಷತಾ ಎಚ್. ಯು. ಮತ್ತು ಶ್ರೀರಕ್ಷಾ ಕರ್ನಾಟಕ ರಾಜ್ಯ ಮಟ್ಟದಲ್ಲಿ ರನ್ನರ್ ಆಪ್ ಪ್ರಶಸ್ತಿ ಪಡೆದು ಜಿಲ್ಲೆಗೆ ತಾಲೂಕಿಗೆ ಕೀರ್ತಿ ತಂದಿದ್ದರು.
ಮಕ್ಕಳಿಗೆ ಅತ್ಯುತ್ತಮ ತರಬೇತಿ ನೀಡಿದ ರಾಜ್ಯ ಪ್ರಶಸ್ತಿ ವಿಜೇತ ಶಿಕ್ಷಕ ವೀರೇಶ್ ಟಿ. ಹಾಗೂ ಸಹಕಾರ ನೀಡಿದ ಎಲ್ಲಾ ಶಿಕ್ಷಕರಿಗೆ, ವಿಜಯಿ ಶಾಲಿಯಾದ ಅಶ್ವಿನಿ ಪ್ರಭುಗೌಡರ್ ತುಂಬಿಗಿ ಹಾಗೂ ನಮ್ರತಾ ಮೋಹನ್ ಅವರಿಗೆ ಪೋಷಕರ ಪರವಾಗಿ, ಮಕ್ಕಳ ಪರವಾಗಿ ಎಸ್ ಡಿಎಂಸಿ ಪರವಾಗಿ, ಎಸ್ ಡಿಎಂಸಿ ಅಧ್ಯಕ್ಷರಾದ ಸುರೇಶ್ ಎಂ. ಜಿ. ಹಾಗೂ ಮುಖ್ಯ ಶಿಕ್ಷಕ ಮಂಜು ಬಾಬು ಎಚ್. ಪಿ. ಅಭಿನಂದನೆಗಳನ್ನು ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು