2:52 AM Sunday20 - September 2026
ಬ್ರೇಕಿಂಗ್ ನ್ಯೂಸ್
*ರೈತರ ಬದುಕು ಉಳಿಸಲು ನಮ್ಮ ಸರ್ಕಾರ ಕೆಲಸ ಮಾಡಲಿದೆ: ಸಿಎಂ ಡಿ ಕೆ… *ರಾಜ್ಯದ ಹಿತವೇ ಸರ್ಕಾರದ ಮೊದಲ ಆದ್ಯತೆ: ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ* ಕೊಳತ್ತಮಜಲು ಅಬ್ದುಲ್ ರಹ್ಮಾನ್ ಕೊಲೆ ಆರೋಪಿಗಳಿಗೆ ಜಾಮೀನು: ಸರ್ಕಾರದ ವಿರುದ್ಧ ಎಸ್‌ಡಿಪಿಐ ಆಕ್ರೋಶ ಮಂಗಳೂರು ಜಿಲ್ಲಾ ಕಾರಾಗೃಹದ ಸುತ್ತಮುತ್ತ ಮೊಬೈಲ್ ನೆಟ್‌ವರ್ಕ್ ವ್ಯತ್ಯಯ ತಗ್ಗಿಸಲು ಕ್ರಮ: ಗೃಹ… ಶಾರ್ಜಾದ ‘ಸ್ಟ್ರಿಂಗ್ ಟ್ರಾನ್ಸ್‌ಪೋರ್ಟ್’ ವ್ಯವಸ್ಥೆ: ಟೂರಿಸಂ ಸಚಿವ ಕೆ.ಜೆ. ಜಾರ್ಜ್ ನೇತೃತ್ವದ ನಿಯೋಗ… ರಾಜ್ಯ ಸಚಿವ ಸಂಪುಟ ಸಭೆ | ಸಂಚಾರ ವ್ಯತ್ಯಯ; ಬದಲಿ ಮಾರ್ಗ ವ್ಯವಸ್ಥೆ ಹ್ಯಾಂಡ್ಪಿಕ್ಡ್: ಬೆಂಗಳೂರಿನಲ್ಲಿ ತಾಜಾ ಹಿಟ್ಟು, ಮಸಾಲೆ ಹಾಗೂ ಎಣ್ಣೆ ಉತ್ಪನ್ನ ಮಾರಾಟ ಆರಂಭ ‘ಮಂಗಳೂರು ಟೆಕ್ನೋವಾಂಜಾ 2026’: ಕರಾವಳಿಯಲ್ಲಿ ತಂತ್ರಜ್ಞಾನ ಕ್ರಾಂತಿ ಸೆ. 23ರಂದು ಅನಾವರಣ ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊ ದಾಖಲೆ ಸಾಧನೆ: 2025-26ನೇ ಸಾಲಿನಲ್ಲಿ 3,735 ಕೋಟಿ… ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ

ಇತ್ತೀಚಿನ ಸುದ್ದಿ

ಚುನಾವಣಾ ಸಾಕ್ಷರತಾ ಕ್ಲಬ್ ರಸಪ್ರಶ್ನೆ: ಜಿಲ್ಲಾಮಟ್ಟಕ್ಕೆ ಆಯ್ಕೆಯಾದ ಹೊಸೂರು ಗುಡ್ಡೇಕೇರಿ ಪ್ರೌಢಶಾಲೆ ವಿದ್ಯಾರ್ಥಿಗಳು

24/11/2024, 16:24

ರಶ್ಮಿ ಶ್ರೀಕಾಂತ್ ನಾಯಕ್ ತೀರ್ಥಹಳ್ಳಿ ಶಿವಮೊಗ್ಗ

info.reporterkarnataka@gmail.com

ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಹಾಗೂ ತಾಲೂಕು ಚುನಾವಣಾ ಸಾಕ್ಷರತಾ ಕ್ಲಬ್ ಆಶ್ರಯದಲ್ಲಿ ನಡೆದ ತಾಲೂಕು ‌ಮಟ್ಟದ ರಸಪ್ರಶ್ನೆ ಸ್ಪರ್ಧೆಯಲ್ಲಿ ತೀರ್ಥಹಳ್ಳಿ ತಾಲ್ಲೂಕಿನ ಸರ್ಕಾರಿ ಪ್ರೌಢಶಾಲೆ ಹೊಸೂರು ಗುಡ್ಡೇಕೇರಿ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದೆ.
ತಾಲೂಕಿನ ಸರ್ಕಾರಿ, ಅನುದಾನಿತ, ಅನುದಾನ ರಹಿತ ಶಾಲೆಗಳು ಭಾಗವಹಿಸಿದ್ದ ಈ ಸ್ಪರ್ಧೆಯಲ್ಲಿ ಗುಡ್ಡೇಕೇರಿ ಶಾಲಾ ಮಕ್ಕಳು ಲಿಖಿತ ಪರೀಕ್ಷೆಯಲ್ಲಿ ಪ್ರಥಮ ಸ್ಥಾನ ಪಡೆದು, ಮೌಖಿಕ ಅಂತಿಮ ಸುತ್ತಿಗೆ ಆಯ್ಕೆಯಾಗಿದ್ದರು. ಅಂತಿಮ ಸುತ್ತಿನಲ್ಲಿ, ಸಹ್ಯಾದ್ರಿ ಪ್ರೌಢಶಾಲೆ, ವಾಗ್ದೇವಿ ಪ್ರೌಢಶಾಲೆ, ಸರ್ಕಾರಿ ಪ್ರೌಢಶಾಲೆ ಮೇಗರವಳ್ಳಿ, ಸರ್ಕಾರಿ ಪ್ರೌಢಶಾಲೆ ಕೊಡ್ಲು ಹಾಗೂ ಗುಡ್ಡೇಕೇರಿ ಪ್ರೌಢಶಾಲೆ ಭಾಗವಹಿಸಿದ್ದವು. ಅಂತಿಮವಾಗಿ ಸರ್ಕಾರಿ ಪ್ರೌಢಶಾಲೆ ಹೊಸೂರು ಗುಡ್ಡೇಕೇರಿಯ ಮಕ್ಕಳು ಪ್ರಥಮ ಸ್ಥಾನ ಪಡೆದಿದ್ದಾರೆ.
ರಾಜ್ಯ ಪ್ರಶಸ್ತಿ ವಿಜೇತ ಶಿಕ್ಷಕರಾದ ವೀರೇಶ್ ಟಿ. ಅವರ ಮಾರ್ಗದರ್ಶನ ಹಾಗೂ ಎಲ್ಲಾ ಶಿಕ್ಷಕರ ಸಹಕಾರದಲ್ಲಿ ಸ್ಪರ್ಧೆಗೆ ಭಾಗವಹಿಸಿದ್ದ ಅಶ್ವಿನಿ ಪ್ರಭುಗೌಡರ್ ತುಂಬಿಗಿ ಹಾಗೂ ನಮ್ರತಾ ಮೋಹನ್ ನಂಟೂರು ಈಗ ಜಿಲ್ಲಾಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಕಳೆದ ವರ್ಷ ಇದೇ ಸ್ಪರ್ಧೆಯಲ್ಲಿ ಇದೇ ಶಾಲೆಯ ಅಕ್ಷತಾ ಎಚ್. ಯು. ಮತ್ತು ಶ್ರೀರಕ್ಷಾ ಕರ್ನಾಟಕ ರಾಜ್ಯ ಮಟ್ಟದಲ್ಲಿ ರನ್ನರ್ ಆಪ್ ಪ್ರಶಸ್ತಿ ಪಡೆದು ಜಿಲ್ಲೆಗೆ ತಾಲೂಕಿಗೆ ಕೀರ್ತಿ ತಂದಿದ್ದರು.
ಮಕ್ಕಳಿಗೆ ಅತ್ಯುತ್ತಮ ತರಬೇತಿ ನೀಡಿದ ರಾಜ್ಯ ಪ್ರಶಸ್ತಿ ವಿಜೇತ ಶಿಕ್ಷಕ ವೀರೇಶ್ ಟಿ. ಹಾಗೂ ಸಹಕಾರ ನೀಡಿದ ಎಲ್ಲಾ ಶಿಕ್ಷಕರಿಗೆ, ವಿಜಯಿ ಶಾಲಿಯಾದ ಅಶ್ವಿನಿ ಪ್ರಭುಗೌಡರ್ ತುಂಬಿಗಿ ಹಾಗೂ ನಮ್ರತಾ ಮೋಹನ್ ಅವರಿಗೆ ಪೋಷಕರ ಪರವಾಗಿ, ಮಕ್ಕಳ ಪರವಾಗಿ ಎಸ್ ಡಿಎಂಸಿ ಪರವಾಗಿ, ಎಸ್ ಡಿಎಂಸಿ ಅಧ್ಯಕ್ಷರಾದ ಸುರೇಶ್ ಎಂ. ಜಿ. ಹಾಗೂ ಮುಖ್ಯ ಶಿಕ್ಷಕ ಮಂಜು ಬಾಬು ಎಚ್. ಪಿ. ಅಭಿನಂದನೆಗಳನ್ನು ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು