9:24 AM Saturday10 - May 2025
ಬ್ರೇಕಿಂಗ್ ನ್ಯೂಸ್
Vatican City | ನೂತನ ಪೋಪ್‌ ಆಗಿ ಅಮೆರಿಕದ ರಾಬರ್ಟ್ ಫ್ರಾನ್ಸಿಸ್‌ ಪ್ರಿವೊಸ್ಟ್‌… Indo- Pak | ಯುದ್ಧ ಕಾರ್ಮೋಡ: ಹೊರನಾಡು ಅನ್ನಪೂರ್ಣೇಶ್ವರಿ ಕ್ಷೇತ್ರದಿಂದ ಭಾರತೀಯ ಸೇನೆಗೆ… ಮಾರಣಾಂತಿಕ ಹೀಮೋಫೀಲಿಯಾ ಬಾಧಿತ ಗರ್ಭಿಣಿ ಮಹಿಳೆಗೆ ಯಶಸ್ವೀ ಶಸ್ತ್ರಚಿಕಿತ್ಸೆ: ತಾಯಿ – ಮಗುವಿಗೆ… Airport | ಕಲಬುರಗಿ ವಿಮಾನ ನಿಲ್ದಾಣ: ಭದ್ರತಾ ತಪಾಸಣೆ; ನಿಗದಿತ ಸಮಯಕ್ಕೆ ಪ್ರಯಾಣಿಕರು… J&K | ಆಪರೇಶನ್ ಸಿಂಧೂರ್: ಕರ್ನಲ್ ಸೋಫಿಯಾ ಖುರೇಷಿ: ಕರ್ನಾಟಕದ ಸೊಸೆ ರೀ..!! Karnataka CM | ಮೈಶುಗರ್ ಕಾರ್ಖಾನೆಗೆ 50 ಕೋಟಿ ಕೊಟ್ಟಿದ್ದಷ್ಟೆ ಅಲ್ಲ, ವಿದ್ಯುತ್… ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರ ಬದ್ಧತೆ, ಧೃಢ ನಿರ್ಧಾರವನ್ನು ಸ್ವಾಗತಿಸಿದ ಮಾಜಿ… ಬೆಂಗಳೂರು ಜ್ಞಾನಭಾರತಿ ವಿಶ್ವವಿದ್ಯಾಲಯದಲ್ಲಿ ರಿಜಿಸ್ಟ್ರಾರ್ ಹುದ್ದೆಗೆ 35 ಲಕ್ಷ ರೂ. ವಂಚನೆ: ಎಫ್… Doddaballapura | ಘಾಟಿ ಸುಬ್ರಹ್ಮಣ್ಯ ಕ್ಷೇತ್ರ: ಸರಳ ಸಾಮೂಹಿಕ ವಿವಾಹದಲ್ಲಿ 66 ಜೋಡಿಗಳಿಗೆ… Ex CM | ಸಿಂಧೂರ ಕಳೆದುಕೊಂಡ ಹೆಣ್ಣು ಮಕ್ಕಳ ಪ್ರತೀಕಾರ: ಮಾಜಿ ಮುಖ್ಯಮಂತ್ರಿ…

ಇತ್ತೀಚಿನ ಸುದ್ದಿ

ಚುನಾವಣೆ ದಣಿವು ಆರುವ ಮುನ್ನವೇ ಮತ್ತೆ ಸಮಾಜಮುಖಿ ಕಾರ್ಯಕ್ಕೆ ಫೀಲ್ಡಿಗಿಳಿದ ಪದ್ಮರಾಜ್: ದಿ.ಅನಿಲ್ ಪೂಜಾರಿ ಕುಟುಂಬಕ್ಕೆ ನೆರವಿನ ಹಸ್ತ

06/06/2024, 20:36

ಮಂಗಳೂರು(reporterkarnataka.com):ಲೋಕಸಭೆ ಚುನಾವಣೆಯಲ್ಲಿ ವೀರೋಚಿತ ಸೋಲಿನ ಬಳಿಕವೂ ಕಾಂಗ್ರೆಸ್ ಪಕ್ಷದ ಲೋಕಸಭಾ ಅಭ್ಯರ್ಥಿಯಾಗಿದ್ದ ಪದ್ಮರಾಜ್ ಆರ್. ಪೂಜಾರಿ ಮತ್ತೆ ಸಮಾಜಮುಖಿ ಸೇವೆಯಲ್ಲಿ ತೊಡಗಿಕೊಂಡಿದ್ದಾರೆ.
ಗುರುಬೆಳದಿಂಗಳು ಫೌಂಡೇಶನ್ ಅಧ್ಯಕ್ಷರಾದ ಅವರು ಚುನಾವಣೆಯ ದಣಿವು ಆರುವ ಮುನ್ನವೇ ಮತ್ತೆ ಬಡವರ ಕಣ್ಣೀರೊರೆಸುವ ನಿಟ್ಟಿನಲ್ಲಿ ಫಿಲ್ಡಿಗಿಳಿದಿದ್ದಾರೆ.


ಕಷ್ಟದಲ್ಲಿರುವವರಿಗೆ ನೆರವಾಗಬೇಕೆನ್ನುವ ಮನದಾಸೆಯಿಂದ ಇತ್ತೀಚೆಗೆ ನಿಧನರಾದ ಕೊಡಿಪ್ಪಾಡಿ ಗ್ರಾಮದ ಬಟ್ರುಪ್ಪಾಡಿ ನಿವಾಸಿ, ಆಟೋ ಚಾಲಕ ದಿ.ಅನಿಲ್ ಪೂಜಾರಿಯವರ ನಿವಾಸಕ್ಕೆ ಭೇಟಿ ನೀಡಿ ಕುಟುಂಬ ಸದಸ್ಯರಿಗೆ ಪದ್ಮರಾಜ್ ಸಾಂತ್ವನ ಹೇಳುವುದರ ಜತೆಗೆ, ಮಕ್ಕಳ ವಿದ್ಯಾಭ್ಯಾಸಕ್ಕಾಗಿ ಗುರುಬೆಳದಿಂಗಳು ಫೌಂಡೇಶನ್ ಮೂಲಕ ಧನಸಹಾಯ ನೀಡಿ ನಾವು ನಿಮ್ಮೊಂದಿಗೆ ಇದ್ದೇವೆ ಎಂದು ಭರವಸೆಯ ಮಾತು ಹೇಳಿ ಮಾದರಿ ರಾಜಕಾರಣಿಯಾಗಿದ್ದಾರೆ. ಈ ಸಂದರ್ಭದಲ್ಲಿ ವಿಟ್ಲ ಉಪ್ಪಿನಂಗಡಿ ಬ್ಲಾಕ್ ಅಧ್ಯಕ್ಷ ಡಾ.ರಾಜಾರಾಂ, ಹಿಂದುಳಿದ ವರ್ಗ ಬ್ಲಾಕ್ ಅಧ್ಯಕ್ಷ ಮೋಹನ್ ಗುರ್ಜಿನಡ್ಕ, ಕೊಡಿಪ್ಪಾಡಿ ವಲಯ ಅಧ್ಯಕ್ಷ ಕೇಶವಪೆಲತ್ತಡಿ, ಪ್ರವೀಣ್ ಶೆಟ್ಟಿ ಅಳಕೆಮಜಲು,ನೌಷಾದ್,ಯುವ ಕಾಂಗ್ರೆಸ್‌ ಅಧ್ಯಕ್ಷ ಶ್ರೀಪ್ರಸಾದ್‌ ಪಾಣಾಜೆ, ದಾಮೋದರ ಮುರ,ನಗರಸಭಾ ಸದಸ್ಯ ರಿಯಾಜ್ ಪರ್ಲಡ್ಕ, ಶರತ್ ಕೇಪುಳು, ಯಂಗ್ ಬ್ರಿಗೆಡ್ ರಾಜ್ಯಾಧ್ಯಕ್ಷ ಜುನೈದ್ ಪಿ.ಕೆ, ಮೆಸ್ಕಾಂ ಸಲಹಸ ಸಮಿತಿ ಸದಸ್ಯರಾದ ಚಂದ್ರಶೇಖರ ಕಲ್ಲಗುಡ್ಡೆ, ಚಂದ್ರ ಅರ್ಕ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು