12:43 AM Sunday9 - August 2026
ಬ್ರೇಕಿಂಗ್ ನ್ಯೂಸ್
ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:…

ಇತ್ತೀಚಿನ ಸುದ್ದಿ

ಚುನಾವಣೆ ನೀತಿ ಸಂಹಿತೆ: ಚಳ್ಳಕೆರೆ ಚಕ್ ಪೋಸ್ಟ್ ಬಳಿ ಬಸ್ಸಿನಲ್ಲಿ ಸಾಗಿಸುತ್ತಿದ್ದ 39.15 ಲಕ್ಷ ರೂ. ವಶ

21/03/2024, 23:07

ಮುರುಡೇಗೌಡ ಚಳ್ಳಕೆರೆ ಚಿತ್ರದುರ್ಗ

info.reporterkarnataka@gmail.com

ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ಪೊಲೀಸರು ಚಿತ್ರದುರ್ಗದ ಚಳ್ಳಕೆರೆ ಬಳಿ 39.15 ಲಕ್ಷ ರೂ. ವಶಪಡಿಸಿಕೊಂಡಿದ್ದಾರೆ.
ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಚಳ್ಳಕೆರೆಯ ಕೆಇಬಿ ಚಕ್ ಪೋಸ್ಟ್ ಬಳಿ ಬಸ್ ನಲ್ಲಿ‌ ಸಾಗಿಸುತ್ತಿದ್ದ 1.15 ಲಕ್ಷ ರೂಪಾಯಿಯನ್ನು ಪೊಲೀಸರು ಪರಿಶೀಲಿಸಿ ವಶಕ್ಕೆ ಪಡೆದಿದ್ದಾರೆ.
ಹಣ ಸಾಗಿಸುತ್ತಿದ್ದ ವ್ಯಕ್ತಿ ಅಕ್ಕಿ ಮಿಲ್ ನಲ್ಲಿ ಕೆಲಸ ಮಾಡುತ್ತಿದ್ದ ಗೋಪಿನಾಥ್ ಎಂದು ತಿಳಿದು ಬಂದಿದೆ. ಈತ ಚಳ್ಳಕೆರೆಯಿಂದ ಚಿತ್ರದುರ್ಗಕ್ಕೆ ಬರುತ್ತಿದ್ದಾಗ ಬಸ್ ನಿಲ್ಲಿಸಿ ತಪಾಸಣೆ ನಡೆಸಿದಾಗ ಪೊಲೀಸರು ಹಣ ವಶಪಡಿಸಿಕೊಂಡಿದ್ದಾರೆ. ಚಳ್ಳಕೆರೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಇನ್ನೊಂದು ಪ್ರಕರಣದಲ್ಲಿ ನಾಯಕನಹಟ್ಟಿ ಕ್ರಾಸ್ ಬಳಿ ಇರುವ ಚಕ್ ಪೋಸ್ಟ್ ನ ಪೊಲೀಸರು ಪರಿಶೀಲಿಸಿ 38 ಲಕ್ಷ ಹಣವನ್ನು ಜಪ್ತಿ ಮಾಡಿಕೊಂಡಿದ್ದಾರೆ. ಹಣವು ಚಳ್ಳಕೆರೆಯ ಬ್ಯಾಂಕ್ ಆಫ್ ಬರೋಡಾದಿಂದ ನಗದೀಕರಿಸಲಾಗಿದೆ. ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಸಂಘದ ಯೋಜನೆಗಾಗಿ ಗ್ರಾಮಸ್ಥರು ಬ್ಯಾಂಕಿನಿಂದ ಬಿಡಿಸಿಕೊಂಡು ಬರುವಾಗ ಚಕ್ ಪೋಸ್ಟ್ ಸಿಬ್ಬಂದಿಗಳು ವಶಕ್ಕೆ ಪಡೆದಿದ್ದು, ತಹಶೀಲ್ದಾರ್ ಮತ್ತು ಆದಾಯ ತೆರಿಗೆ ಅಧಿಕಾರಿಗಳು ದಾಖಲೆಗಳನ್ನು ಪರಿಶೀಲಿಸುತ್ತಿದ್ದಾರೆಂದು ಪೊಲೀಸರು ತಿಳಿಸಿದ್ದಾರೆ

ಇತ್ತೀಚಿನ ಸುದ್ದಿ

ಜಾಹೀರಾತು