5:03 PM Friday19 - September 2025
ಬ್ರೇಕಿಂಗ್ ನ್ಯೂಸ್
ಪಂಚ ಗ್ಯಾರಂಟಿ ಯೋಜನೆಗಳಿಗೆ 98 ಸಾವಿರ ಕೋಟಿ; ಅಭಿವೃದ್ಧಿಗೆ 8 ಸಾವಿರ ಕೋಟಿ:… New Delhi | ಕಾಂಗ್ರೆಸ್ ಸರಕಾರದ ಪಂಚೇಂದ್ರಿಯಗಳು ನಿಷ್ಕ್ರಿಯವಾಗಿವೆ: ಕೇಂದ್ರ ಸಚಿವ ಕುಮಾರಸ್ವಾಮಿ… Bangaluru | ರೈತ ಮುಖಂಡರ ನಿಯೋಗ ಸಿಎಂ ಸಿದ್ದರಾಮಯ್ಯ ಭೇಟಿ: ರೈತರ ಸಮಸ್ಯೆ… ಕೃಷ್ಣಾ ಮೇಲ್ದಂಡೆ ಯೋಜನೆ: ಮುಳುಗಡೆ ರೈತರ ನೀರಾವರಿ ಜಮೀನಿಗೆ 40 ಲಕ್ಷ, ಒಣಭೂಮಿಗೆ… Belagavi | ಶೀಘ್ರವೇ ಅಂಗನವಾಡಿ ಕಾರ್ಯಕರ್ತೆಯರು, ಸಿಬ್ಬಂದಿಗೆ ಬಡ್ತಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಭೂ ಸ್ವಾಧೀನ ಪ್ರಕ್ರಿಯೆ ಅಕ್ರಮ ಕೂಡಲೇ ಕೈಬಿಡಿ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಆಗ್ರಹ ಪಾಲಿಕೆಯೇ ಪಾಪರ್‌ ಆಗಿರುವಾಗ ಹೊಸದಾಗಿ ಇಂಜಿನಿಯರ್‌ಗಳನ್ನು ಹೇಗೆ ನೇಮಿಸುತ್ತಾರೆ: ಪ್ರತಿಪಕ್ಷದ ನಾಯಕ ಆರ್.… ಮತಗಳ್ಳತನಕ್ಕೆ ಅವಕಾಶ ನೀಡಬೇಡಿ: ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ಪರಿಹಾರದಾಸೆಗೆ ಪತಿಯ ಕೊಲೆಗೈದು ಹುಲಿ ಕೊಂದಿದೆ ಎಂದು ಕಥೆ ಕಟ್ಟಿ ಸಿಕ್ಕಿಬಿದ್ದ ಪತ್ನಿ;… Kodagu | ಮಡಿಕೇರಿ ದಸರಾ: ರಾಜ್ಯ ಸರಕಾರದಿಂದ1.50 ಕೋಟಿ ಅನುದಾನ ಬಿಡುಗಡೆ

ಇತ್ತೀಚಿನ ಸುದ್ದಿ

ಸಿಲಿಕಾನ್ ಸಿಟಿಯಲ್ಲಿ Rapido Bike Taxi  ಬಿತ್ತು ಬ್ರೇಕ್:  ಸಾರಿಗೆ ಇಲಾಖೆಯಿಂದ ಅಧಿಕೃತ ಆದೇಶ

24/02/2022, 11:50

ಬೆಂಗಳೂರು(reporterkarnataka.com):-ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ Rapido Bike Taxi ಓಟಕ್ಕೆ ಬ್ರೇಕ್ ಬಿದ್ದಿದ್ದು, Rapido ನಿಷೇಧಿಸಿ ಸಾರಿಗೆ ಇಲಾಖೆಯಿಂದ ಅಧಿಕೃತ ಆದೇಶ ಹೊರಡಿಸಲಾಗಿದೆ.

ನಗರದಲ್ಲಿ ಇತ್ತೀಚೆಗೆ ಖಾಸಗಿ ದ್ವಿಚಕ್ರ ವಾಹನಗಳು ಕೆಲವೊಂದು ಅನಧಿಕೃತ ಅಗ್ರಿಗೇಟರ್ ಆ್ಯಪ್ ಬಳಸಿಕೊಂಡು ಕಾನೂನುಬಾಹಿರವಾಗಿ ಪ್ರಯಾಣಿಕರನ್ನು ಸಾಗಿಸುತ್ತಿರುವುದು ಕಂಡು ಬಂದಿದ್ದು, ಅಂತಹ ವಾಹನಗಳ ವಿರುದ್ಧ ಸಾರಿಗೆ ಇಲಾಖೆಯು ಕಠಿಣ ಕ್ರಮ ಕೈಗೊಳ್ಳುತ್ತಿದೆ.

ಸಾರ್ವಜನಿಕರು ಕಾನೂನು ಬಾಹಿರವಾಗಿ ಆಚರಣೆ ಮಾಡುತ್ತಿರುವ ಇಂತಹ ವಾಹನಗಳ ಬಳಕೆಯನ್ನು ಮಾಡದಿರುವಂತೆ ಸೂಚನೆ ನೀಡಿದೆ. ದ್ವಿಚಕ್ರ ವಾಹನಗಳ ಮಾಲೀಕರು ಕೂಡ ತಮ್ಮ ವಾಹನಗಳನ್ನು ಈ ಆ್ಯಪ್ ಮೂಲಕ ಬಾಡಿಗೆ ಓಡಿಸುತ್ತಿರುವುದನ್ನು ನಿಲ್ಲಿಸುವಂತೆ ತಿಳಿಸಿದೆ.

ಇನ್ನೂ, ಕೆಲವೊಂದು ರೆಂಟ್ ಎ ಕ್ಯಾಬ್ ಲೈಸೆನ್ಸ್ ಪಡೆದಿರುವ ಕಂಪನಿಗಳು ಖಾಸಗಿ ಮಾಲೀಕತ್ವದ ಲಘು ಮೋಟಾರು ವಾಹನಗಳನ್ನು ( ಎಲ್ ಎಂ ವಿ) ಕಂಪನಿ ಹೆಸರಿನಲ್ಲಿ ಸಾರ್ವಜನಿಕರು ಬಾಡಿಗೆ ನೀಡುತ್ತಿರುವುದು ಕಂಡು ಬಂದಿದ್ದು, ಇಂತಹ ವಾಹನಗಳ ವಿರುದ್ಧ ಕ್ರಮ ಕೈಗೊಳ್ಳುತ್ತಿದೆ. ಸಾರ್ವಜನಿಕರು ಕೂಡ ತಮ್ಮ ಖಾಸಗಿ ವಾಹನಗಳನ್ನು ಯಾವುದೇ ಕಂಪನಿಗಳಿಗೆ ಬಾಡಿಗೆಗೆ ನೀಡಬಾರದೆಂದು ಸಾರಿಗೆ ಇಲಾಖೆ ಮನವಿ ಮಾಡಿದ್ದು, ತಪ್ಪಿದ್ದಲ್ಲಿ ಕಾನೂನು ಕ್ರಮ ಜರುಗಿಸುವ ಎಚ್ಚರಿಕೆ ನೀಡಿದೆ.

ಇತ್ತೀಚಿನ ಸುದ್ದಿ

ಜಾಹೀರಾತು