2:43 AM Tuesday16 - September 2025
ಬ್ರೇಕಿಂಗ್ ನ್ಯೂಸ್
Belagavi | ಶೀಘ್ರವೇ ಅಂಗನವಾಡಿ ಕಾರ್ಯಕರ್ತೆಯರು, ಸಿಬ್ಬಂದಿಗೆ ಬಡ್ತಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಭೂ ಸ್ವಾಧೀನ ಪ್ರಕ್ರಿಯೆ ಅಕ್ರಮ ಕೂಡಲೇ ಕೈಬಿಡಿ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಆಗ್ರಹ ಪಾಲಿಕೆಯೇ ಪಾಪರ್‌ ಆಗಿರುವಾಗ ಹೊಸದಾಗಿ ಇಂಜಿನಿಯರ್‌ಗಳನ್ನು ಹೇಗೆ ನೇಮಿಸುತ್ತಾರೆ: ಪ್ರತಿಪಕ್ಷದ ನಾಯಕ ಆರ್.… ಮತಗಳ್ಳತನಕ್ಕೆ ಅವಕಾಶ ನೀಡಬೇಡಿ: ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ಪರಿಹಾರದಾಸೆಗೆ ಪತಿಯ ಕೊಲೆಗೈದು ಹುಲಿ ಕೊಂದಿದೆ ಎಂದು ಕಥೆ ಕಟ್ಟಿ ಸಿಕ್ಕಿಬಿದ್ದ ಪತ್ನಿ;… Kodagu | ಮಡಿಕೇರಿ ದಸರಾ: ರಾಜ್ಯ ಸರಕಾರದಿಂದ1.50 ಕೋಟಿ ಅನುದಾನ ಬಿಡುಗಡೆ 2026ರ ಮಾರ್ಚ್‌ಗೆ PM KUSUM 2ನೇ ಹಂತ ಅನುಷ್ಠಾನ: ಕೇಂದ್ರ ಸಚಿವ ಪ್ರಹ್ಲಾದ್… ವಿಧಾನ ಪರಿಷತ್ ಸದಸ್ಯರಾಗಿ ಡಾ. ಆರತಿಕೃಷ್ಣ, ರಮೇಶ್ ಬಾಬು ಸಹಿತ ನಾಲ್ವರು ಪ್ರಮಾಣ… ಅಸ್ಸಾಂ ಕಾರ್ಮಿಕರು ಕೊಡಗಿನಿಂದ ಹಾಸನ ಕಡೆಗೆ ವಲಸೆ: ಕುಶಾಲನಗರ ಬಸ್ ನಿಲ್ದಾಣದಲ್ಲಿ ಹಿಂಡು… Kodagu | ಕಾಲೇಜಿನಲ್ಲಿ ಮಚ್ಚು ಹಿಡಿದು ರೀಲ್ಸ್: ವಿದ್ಯಾರ್ಥಿ ವಿರುದ್ದ ಪ್ರಕರಣ ದಾಖಲು;…

ಇತ್ತೀಚಿನ ಸುದ್ದಿ

ಸಿನಿರಿಪೋರ್ಟ್ : ನಗಿಸಿ, ಅಳಿಸಿ ಭಾವುಕಗೊಳಿಸಿ, ತಾಯಿಯತ್ತ ಒಮ್ಮೆ ಹೊರಳಿ ನೋಡುವಂತೆ ಮಾಡುತ್ತೆ “ರತ್ನನ್ ಪ್ರಪಂಚ”

23/10/2021, 17:00

ಗಣೇಶ್ ಅದ್ಯಪಾಡಿ, ಮಂಗಳೂರು
adyapadyganesha@gmail.com

ಒಂದು ಕಡೆ ಎರಡೆರಡು ಸಿನಿಮಾಗಳು ಅಬ್ಬರಿಸಿ ಬೊಬ್ಬಿರಿದು ಥಿಯೇಟರ್‌ಗಳಿಗೆ ಇಳಿದಿದ್ದರೆ ಇಲ್ಲೊಂದು ಚಿತ್ರ ಸದ್ದಿಲ್ಲದೆ ಜನರ ಮನಸ್ಸು ಗೆಲ್ಲುತ್ತಿದೆ. ಹೌದು, ರೋಹಿತ್ ಪದಕಿ ನಿರ್ದೇಶನದ ರತ್ನನ್ ಪ್ರಪಂಚ ತನ್ನ ಕಥಾ ವಸ್ತುವಿನ ಮೂಲಕ ಚಿತ್ರ ಪ್ರೇಮಿಗಳ ಮನಸ್ಸು ಮುಟ್ಟುತ್ತಿದೆ.

ಅಮೇಜಾನ್ ಪ್ರೈಮ್ ಓಟಿಟಿಯಲ್ಲಿ ಬಿಡುಗಡೆಯಾದ ಸಿನಿಮಾ ಅಮೋಘ ಭಾವುಕ ಅನುಭವ ನೀಡುತ್ತಾ, ನಗಿಸಿ ಅಳಿಸಿ, ಒಂದಷ್ಟು ಪಾಠ ಕಲಿಸಿ, ಹೃದಯ ತುಂಬುವಂತೆ ಮಾಡಿ ನಿರಾಳಗೊಳಿಸಿ.. ಬದುಕಿನ ಮಜಲನ್ನು ಪರಿಚಯಿಸುತ್ತಾ ಮನಸ್ಸಲ್ಲಿ ಛಾಪನ್ನು ಮೂಡಿಸಿಬಿಡುತ್ತದೆ.

ತಾಯಿ ಮಗನ ನಡುವಿನ ಮಮತೆ ಹಾಗೂ ಮನಸ್ಥಿತಿಗಳ ನಡುವಿನ ತಿಕ್ಕಾಟದ ಜತೆಗೆ ಕಳೆದು ಹೋದ ನಿನ್ನೆ ಹಾಗೂ ಇಂದಿನ ವರ್ತಮಾನಕ್ಕೆ ಎರವಾದವರ ನಡುವಿನ ಹಲವಾರು ಭಾವುಕ ವಿಪ್ಲವಗಳನ್ನು ಕಣ್ಣ ಮುಂದೆ ಇಡುತ್ತದೆ.

ಪೆದ್ದುಪೆದ್ದಾಗಿ ನಡೆದುಕೊಳ್ಳುವ, ಮಗನ ಬಗ್ಗೆ ಅತಿಯಾದ ಪ್ರೀತಿ ಹಾಗೂ ಕಾಳಜಿ ಹೊಂದಿರುವ ತಾಯಿ ಪಾತ್ರದಲ್ಲಿ ಉಮಾಶ್ರೀ ಅವರ ನಟನೆ ಬಹಳ ಆಪ್ತವೆನಿಸಿಬಿಡುತ್ತದೆ. ಅತಿಯಾದ ಪ್ರೀತಿ ಕಾಳಜಿ ಮತ್ತೊಂದಿಷ್ಟು ತುಂಟತನ ಮನಸಿಗಿಳಿಯುತ್ತದೆ.

ಡಾಲಿ ಧನಂಜಯ್ ಕೂಡ ತನ್ನ ಪಾತ್ರಕ್ಕೆ ಜೀವ ತುಂಬಿದ್ದಾರೆ. ಫರ್ಸ್ಟ್ರೇಟೆಡ್ ಮಿಡಲ್ ಕ್ಲಾಸ್ ಮ್ಯಾನ್ ರತ್ನಾಕರನ ಕ್ಯಾರೆಕ್ಟರ್ ಇಡೀ ಸಿನಿಮಾದ ಮುಖ್ಯ ಕೇಂದ್ರ. ತನ್ನ ತಾಯಿ ತನ್ನನ್ನು ಹೆತ್ತವಳು ಅಲ್ಲ ಎಂದು ಗೊತ್ತಾದಾಗ ಮನೆ ಬಿಟ್ಟು ಹೆತ್ತ ತಾಯಿಯನ್ನು ಹುಡುಕಲು ಹೊರಟಾಗ ಆತ ಕಂಡುಕೊಳ್ಳುವ ಸತ್ಯಗಳು, ಜರ್ನಿಯಲ್ಲಿ ಎದುರಿಸುವ ಸಮಸ್ಯೆಗಳು, ಸುಖಗಳು, ಭೇಟಿಯಾಗುವ ಜನ, ಎದುರಿಸುವ ಭಾವ ತೀವ್ರತೆಯ ಸನ್ನಿವೇಶಗಳ ಭಾವ ತೀವ್ರತೆ ಹಾಗೂ ಅದನ್ನು ತಲುಪಿಸಿದ ಬಗೆ ಸೊಗಸಾಗಿದೆ.

ತಾಯಿಯನ್ನು ವಿವಿಧ ಮಜಲುಗಳಲ್ಲಿ ಅಥವಾ ತಾಯ್ತನವನ್ನು ಬೇರೆ ಬೇರೆ ರೀತಿಯಲ್ಲಿ ತೆರೆ ಮೇಲೆ ತರುವಂತಹ ಪ್ರಯತ್ನ ಮಾಡಿದ ರೋಹಿತ್ ಪದಕಿಯವರಿಗೆ ಶಭಾಶ್ ಎನ್ನಲೆ ಬೇಕು.

ತಾರಾಗಣದಲ್ಲಿರುವ ಶೃತಿ, ಅಚ್ಯುತ ಕುಮಾರ್, ರೇಬಾ ಮೋನಿಕಾ, ರವಿಶಂಕರ್, ಪ್ರಮೋದ್ ಮೊದಲಾದವರು ತಮ್ಮ ಪಾತ್ರಗಳನ್ನು ಅಚ್ಚುಕಟ್ಟಾಗಿ ನಿರ್ವಹಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು