5:45 PM Saturday21 - March 2026
ಬ್ರೇಕಿಂಗ್ ನ್ಯೂಸ್
ರಂಗೇರಿದ ದಾವಣಗೆರೆ ಉಪ ಚುನಾವಣೆ ಸಮರ: ಕೈ-ಕಮಲ ಅಭ್ಯರ್ಥಿಗಳ ಆಸ್ತಿ ವಿವರ ಘೋಷಣೆ ದಾವಣಗೆರೆ ದಕ್ಷಿಣ ಬೈ ಎಲೆಕ್ಷನ್: ಬಿಜೆಪಿ ಅಭ್ಯರ್ಥಿಯಾಗಿ ಶ್ರೀನಿವಾಸ್ ದಾಸಕರಿಯಪ್ಪ ನಾಮಪತ್ರ ಸಲ್ಲಿಕೆ ದಾವಣಗೆರೆ ದಕ್ಷಿಣ ಉಪ ಚುನಾವಣೆ: ಕಾಂಗ್ರೆಸ್‌ ಟಿಕೆಟ್‌ ಘೋಷಣೆಗೂ ಮುನ್ನವೇ ಸಮರ್ಥ್‌ ಶಾಮನೂರು… ಬಾಗಲಕೋಟೆ ಉಪ ಚುನಾವಣೆ: ನಾಮಪತ್ರ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠ ಬಿಸಿಲ‌ ಧಗೆ: ಕುದುರೆಮುಖ ರಾಷ್ಟ್ರೀಯ ಉದ್ಯಾನವನದ 25ಕ್ಕೂ ಹೆಚ್ಚು ಕಡೆಯಲ್ಲಿ ಶೋಲಾ ಹುಲ್ಲುಗಾವಲಿಗೆ… Kodagu | ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ಆರೋಪ: ಆಟೋ ಚಾಲಕ ಅರೆಸ್ಟ್ ಹಬ್ಬದ ಸ್ಪೆಷಲ್: ಕಾರವಾರ- ಉಡುಪಿ- ಮಂಗಳೂರು- ಬೆಂಗಳೂರಿಗೆ ವಿಶೇಷ ರೈಲು; ವೇಳಾಪಟ್ಟಿ ರೆಡಿ Kodagu | ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ: ಸವಾರ ದುರ್ಮರಣ ಲಂಚದೊಂದಿಗೆ ಕಾರಿನಲ್ಲಿ ಪರಾರಿ: 15 ಕಿಮೀ ಬೆನ್ನತ್ತಿ ಸಹಾಯಕ ಔಷಧ ನಿಯಂತ್ರಕಿಯ ಬಂಧಿಸಿದ… ಕುಶಾಲನಗರದಲ್ಲಿ ವೇಶ್ಯವಾಟಿಕೆ: ಇಬ್ಬರ ಬಂಧನ: ಇನ್ನಿಬ್ಬರು ಯುವತಿಯರು ಸಾಂತ್ವನ ಕೇಂದ್ರಕ್ಕೆ

ಇತ್ತೀಚಿನ ಸುದ್ದಿ

ಕಾಂಗ್ರೆಸ್ ನೀಡಿರುವ ಗ್ಯಾರಂಟಿಯನ್ನು ಜನರಿಗೆ ತಲುಪಿಸುತ್ತೇವೆ: ಪಕ್ಷದ ಪ್ರಧಾನ ಕಾರ್ಯದರ್ಶಿ ಇನಾಯತ್ ಆಲಿ

28/02/2023, 20:51

ಮಂಗಳೂರು(reporterkarnataka.com): ಸಾಮಾನ್ಯ ಜನರ ಬದುಕನ್ನು ಸುಗಮಗೊಳಿಸಲು ನಾನು ಮತ್ತು ನಮ್ಮ ತಂಡ ಮಂಗಳೂರು ಉತ್ತರ ಕ್ಷೇತ್ರದ ಪ್ರತಿ ಮನೆ ಬಾಗಿಲಿಗೆ ತೆರಳಿ ಕಾಂಗ್ರೆಸ್ ಪಕ್ಷ ನೀಡಿರುವ ಗ್ಯಾರಂಟಿಗಳನ್ನು ಜನರಿಗೆ ತಲುಪಿಸುತ್ತೇವೆ ಎಂದು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಪ್ರಧಾನ ಕಾರ್ಯದರ್ಶಿ ಇನಾಯತ್ ಅಲಿ ಹೇಳಿದರು.


ನಗರದಲ್ಲಿ ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷ ಘೋಷಣೆ ಮಾಡಿರುವ ಗ್ಯಾರಂಟಿಗಳಿಗೆ ಜನರನ್ನು ನೋಂದಾಯಿಸಲು ವಿನೂತನ ಮತ್ತು ವಿಶೇಷ ಅಭಿಯಾನವನ್ನು ಇಂದಿನಿಂದಲೇ ಆರಂಭಿಸಲಾಗುವುದು ಎಂದರು.
ನಮ್ಮ ತಂಡ ಕಾಂಗ್ರೆಸ್ ಪಕ್ಷ ಬಿಡುಗಡೆ ಮಾಡಿದ ಗ್ಯಾರಂಟಿಗಳ ಬಗ್ಗೆ ಜನರಿಗೆ ತಿಳಿಸುವ ಮೊಬೈಲ್ ಅಪ್ಲಿಕೇಶನ್ ಅನ್ನು ಅಭಿವೃದ್ಧಿಪಡಿಸಿದೆ. ಕ್ಷೇತ್ರದ ಭೇಟಿ ವೇಳೆ ಹೆಸರು, ವಯಸ್ಸು, ಮೊಬೈಲ್ ಸಂಖ್ಯೆ, ವಿಳಾಸದಂತಹ ಮೂಲ ಮಾಹಿತಿಯನ್ನು ಪಡೆದು ಕಾಂಗ್ರೆಸ್ ಪಕ್ಷದ ಗ್ಯಾರಂಟಿಗಳಿಗೆ ನೋಂದಾಯಿಸಿಕೊಳ್ಳುತ್ತೇವೆ ಎಂದು ತಿಳಿಸಿದರು.
ನಮ್ಮೊಂದಿಗೆ ನೋಂದಾಯಿಸಿದ ಜನರು ಆದ್ಯತೆ ಮೇಲೆ ಕಾಂಗ್ರೆಸ್ ಗ್ಯಾರಂಟಿಗಳ ಪ್ರಯೋಜನ ಪಡೆಯುವುದನ್ನು ಖಚಿತಪಡಿಸಿಕೊಳ್ಳಲು “IAM” ಫೌಂಡೇಶನ್ ನೀಡಿದ ಆದ್ಯತೆ ಕಾರ್ಡ್‌ನೊಂದಿಗೆ ನಾವು ಕಾಂಗ್ರೆಸ್ ಪಕ್ಷ ನೀಡಿದ ಗ್ಯಾರಂಟಿ ಕಾರ್ಡ್‌ಗಳನ್ನು ಜನರಿಗೆ ಒದಗಿಸುತ್ತೇವೆ. ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರಲಿದ್ದು, ನಾವೇ ಸರ್ಕಾರ ರಚಿಸುತ್ತೇವೆ. ಅದೇ ಸಮಯದಲ್ಲಿ, ನಮ್ಮ ಜನರು ಹಿಂದುಳಿಯುವುದನ್ನು ನಾವು ಬಯಸುವುದಿಲ್ಲ, ಅದಕ್ಕಾಗಿಯೇ ನಾವು ಈ ವಿಶೇಷ ಮನೆ-ಮನೆ ಅಭಿಯಾನವನ್ನು ಪ್ರಾರಂಭಿಸಿದ್ದೇವೆ.ಎಂದರು.
ಇನಾಯತ್ ಅಲಿ ಅವರು ನೋಂದಣಿ ಅಭಿಯಾನದಲ್ಲಿ ಗರಿಷ್ಠ ಸಂಖ್ಯೆಯಲ್ಲಿ ಭಾಗವಹಿಸುವಂತೆ ಜನರಿಗೆ ಮನವಿ ಮಾಡಿದರು.
ಕಾಂಗ್ರೆಸ್ ಪಕ್ಷ ಘೋಷಿಸಿರುವ ಗೃಹ ಜ್ಯೋತಿ ಗ್ಯಾರಂಟಿ ಮೂಲಕ ಪ್ರತಿ ಮನೆಗೆ 200 ಯೂನಿಟ್ ವಿದ್ಯುತ್ ಅನ್ನು ಉಚಿತವಾಗಿ ನೀಡಲಾಗುತ್ತದೆ. ಅಲ್ಲದೆ ಕಾಂಗ್ರೆಸ್ ಪಕ್ಷದ ಗೃಹಲಕ್ಷಿ ಗ್ಯಾರಂಟಿ ಅಡಿ ಪ್ರತಿ ಮಹಿಳಾ ಕುಟುಂಬದ ಯಜಮಾನಿಗೆ ಮಾಸಿಕ 2000 ರೂಪಾಯಿ ನೀಡಲಾಗುತ್ತದೆ.
ಬೆಲೆ ಏರಿಕೆಯಿಂದ ಜನ ಸಾಮಾನ್ಯರ ಬದುಕು ಹೈರಾಣಾಗಿದೆ ಎಂದು ಇನಾಯತ್ ಅಲಿ ತಿಳಿಸಿದರು.
ಕಾಂಗ್ರೆಸ್ ಪಕ್ಷ ಸಮಾಜದ ಕಲ್ಯಾಣ ಮತ್ತು ಪ್ರಗತಿಪರ ಬೆಳವಣಿಗೆ ರಾಜಕೀಯವನ್ನು ನಂಬುತ್ತದೆ ಹಾಗೂ ಸಾಮಾನ್ಯ ಜನರು ಎದುರಿಸುತ್ತಿರುವ ಸಮಸ್ಯೆಗಳನ್ನು ಪರಿಹರಿಸುವ ಉದ್ದೇಶದಿಂದ ಗ್ಯಾರಂಟಿಗಳನ್ನುಘೋಷಿಸಲಾಗಿದೆ ಎಂದು ತಿಳಿಸಿದರು.
ಯುವ ಕಾಂಗ್ರೆಸ್ ಉಪಾಧ್ಯಕ್ಷ ಗಿರೀಶ್ ಆಳ್ವ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಉಮೇಶ್ ದಂಡಕೇರಿ, ಮಾಜಿ ಉಪಮೇಯರ್ ಪುರುಷೋತ್ತಮ್ಮ ಚಿತ್ರಾಪುರ, ಪ್ರಚಾರ ಸಮಿತಿ ಸದಸ್ಯ ಪೃಥ್ವಿರಾಜ್, ಎನ್ ಎಸ್ಯುಐ ರಾಜ್ಯ ಪ್ರಧಾನ ಕಾರ್ಯದರ್ಶಿ ಸುಹಾನ್ ಆಳ್ವ, ಗುರುಪುರ ಬ್ಲಾಕ್ ಅಧ್ಯಕ್ಷ ಸುರೇಂದ್ರ ಕಾಂಬ್ಳಿ, ಸದಾಶಿವ ಶೆಟ್ಟಿ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು