2:55 AM Saturday28 - March 2026
ಬ್ರೇಕಿಂಗ್ ನ್ಯೂಸ್
ಕೇಂದ್ರ ಸರಕಾರವನ್ನು ಟೀಕೆ ಮಾಡುವುದರಲ್ಲೇ 3 ವರ್ಷಗಳ ಕಾಲಹರಣ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ… ಕೈ ನಾಯಕರ ಸಂಧಾನ ಯಶಸ್ವಿ: ದಾವಣಗೆರೆ ದಕ್ಷಿಣ ಬಂಡಾಯ ಅಭ್ಯರ್ಥಿ ಪೈಲ್ವಾನ್ ಸ್ಪರ್ಧೆಯಿಂದ… ಚಿಕ್ಕಮಗಳೂರು: ಬಿಸಿಲ ಧಗೆಗೆ ಹೊತ್ತಿ ಉರಿಯುತ್ತಿರುವ ಮೀಸಲು ಅರಣ್ಯ; ಅಪಾಯದಲ್ಲಿ ಜೀವ ಸಂಕುಲ 1ನೇ ತರಗತಿ ದಾಖಲಾತಿ ವಯೋಮಿತಿಯಲ್ಲಿ 60 ದಿನಗಳ ಸಡಿಲಿಕೆ: ಸಚಿವ ಮಧು ಬಂಗಾರಪ್ಪ… ತುಮಕೂರು | ಮಧ್ಯರಾತ್ರಿ ಕುಡುಕ ಪುಂಡರ ಅಟ್ಟಹಾಸ: 10ಕ್ಕೂ ಅಧಿಕ ವಾಹನಗಳ ಗ್ಲಾಸ್… ರಾಜ್ಯ ಸರ್ಕಾರಕ್ಕೆ ಪ್ರತಿಷ್ಠೆಯಾದ ಉಪ ಚುನಾವಣೆ: ಪೈಲ್ವಾನ್ ಮನವೊಲಿಸಲು ಜಮೀರ್‌ಗೆ ಮುಖ್ಯಮಂತ್ರಿ ಸೂಚನೆ ಮಾಜಿ ಶಾಸಕರ ಪುತ್ರನ ಕೊಲೆ ಪ್ರಕರಣ: ಮಹಿಳೆ ಸೇರಿ ಮೂವರು ಪೊಲೀಸ್ ವಶಕ್ಕೆ ಹೈಕಮಾಂಡ್ ಹೇಳಿದಾಗ ಡಿಕೆಶಿ ಸಿಎಂ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಫೋಟಕ ಹೇಳಿಕೆ ಕಾಂಗ್ರೆಸ್ ಮೋಸ ಮಾಡಿದೆ; ನಾಮಪತ್ರ ಹಿಂತೆಗೆಯುವ ಮಾತೇ ಇಲ್ಲ: ತೊಡೆ ತಟ್ಟಿದ ಪೈಲ್ವಾನ್‌ ದಾವಣಗೆರೆ ದಕ್ಷಿಣ: ಬಿಜೆಪಿ ಅಭ್ಯರ್ಥಿಯ ಪತ್ನಿಗೆ ಮುಸ್ಲಿಂ ಮಹಿಳೆಯರಿಂದ ಭವ್ಯ ಸ್ವಾಗತ, ಉಡಿ…

ಇತ್ತೀಚಿನ ಸುದ್ದಿ

ಸಿಟಿ ಬಸ್ ಕಂಡೆಕ್ಟರ್ ನಿಂದ ಸಾರ್ವಜನಿಕವಾಗಿ ಅವಾಚ್ಯ ನಿಂದನೆ: ವಕೀಲೆಯಿಂದ ದೂರು ದಾಖಲು

10/10/2023, 14:31

ಮಂಗಳೂರು(reporterkarnataka.com): ಸಾರ್ವಜನಿಕರ ಮುಂದೆ ಅವಾಚ್ಯ ಶಬ್ದಗಳಿಂದ ಬಸ್ ನಿರ್ವಾಹಕ ನಿಂದಿಸಿದ್ದಾನೆ ಎಂದು ವಕೀಲೆಯೊಬ್ಬರು ಪೊಲೀಸರಿಗೆ ದೂರು ನೀಡಿದ್ದು, ಕೇಸು ದಾಖಲಾಗಿದೆ.
ವೃತ್ತಿಯಲ್ಲಿ ವಕೀಲೆಯಾಗಿರುವ ಮಹಿಳೆಯೊಬ್ಬರು ಪಿವಿಎಸ್ ಸರ್ಕಲ್ ಬಳಿ ಬೋಂದೆಲ್ ನಿಂದ ಸ್ಟೆಟ್ ಬ್ಯಾಂಕ್ ಗೆ ತೆರಳು ಆಶೆಲ್ ರೂಟ್ ನಂಬರ್ 19 ಬಸ್ ನ್ನು ಹತ್ತಲು ಹೋಗಿದ್ದಾರೆ. ಈ ವೇಳೆ ಬಸ್ ಡ್ರೈವರ್ ಏಕಾಏಕಿ ಬಸ್ ನ್ನು ಚಲಾಯಿಸಿದ್ದು, ಮಹಿಳೆ ರಸ್ತೆಗೆ ಬೀಳುವ ವೇಳೆ ಬಸ್ ನ ನಿರ್ವಾಹಕ ಮಹಿಳೆಯ ಕೈಯನ್ನು ಹಿಡಿದು ಎಳೆದು ಬಸ್ ನಲ್ಲಿದ್ದ ಸಾರ್ವಜನಿಕರ ಎದುರೇ ” ನೀವು ಮುಸ್ಲಿಂ ಹೆಂಗಸರಿಗೆ ತುಂಬಾ ಅಹಂಕಾರ ಬೇಕಾದರೆ ನಮ್ಮ ಬಸ್ಸಲ್ಲಿ ಬರಬೇಕು ಇಲ್ಲದಿದ್ದರೆ ಇಳಿಯಬೇಕು ಎಂದು ” ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾನೆ. ಈ ಕುರಿತಂತೆ ವಕೀಲೆ ಕದ್ರಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.


ಈ ಬಗ್ಗೆ ಬಸ್ ಚಾಲಕ ಮತ್ತು ಕಂಡೆಕ್ಟರ್ ವಿರುದ್ಧ ಕದ್ರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು