5:46 AM Wednesday23 - April 2025
ಬ್ರೇಕಿಂಗ್ ನ್ಯೂಸ್
ಕಾಶ್ಮೀರದಲ್ಲಿ ಕನ್ನಡಿಗರ ಮೇಲೆ ಉಗ್ರರ ದಾಳಿಗೆ ಶಿವಮೊಗ್ಗದ ಉದ್ಯಮಿ ಸಾವು: ಮುಖ್ಯಮಂತ್ರಿ ತುರ್ತುಸಭೆ;… Terrorist Attack | ಕಾಶ್ಮೀರದಲ್ಲಿ ಮತ್ತೆ ಉಗ್ರರ ಅಟ್ಟಹಾಸ: ಭೀಕರ ನರಮೇಧಕ್ಕೆ ಸಾವಿನ… Mandya | ಸಾಮಾಜಿಕ, ಶೈಕ್ಷಣಿಕ ಮತ್ತು ಆರ್ಥಿಕ ವರದಿ ಸರಿಯಿಲ್ಲವೆನ್ನಲು ಬಿಜೆಪಿಗೆ ನೈತಿಕ… ಕಾಶ್ಮೀರದಲ್ಲಿ ಪ್ರವಾಸಿಗರ ಮೇಲೆ ಉಗ್ರರ ದಾಳಿ: ಶಿವಮೊಗ್ಗದ ಉದ್ಯಮಿ ಸಹಿತ 5ಕ್ಕೂ ಹೆಚ್ಚು… Karnataka BJP | ಹಾವೇರಿಯಲ್ಲಿ ಬಿಜೆಪಿ ಜನಾಕ್ರೋಶ ಯಾತ್ರೆ: ಕಾಂಗ್ರೆಸ್ ಸರಕಾರದ ವಿರುದ್ಧ… DCM In Dharmastala | ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಧರ್ಮಸ್ಥಳಕ್ಕೆ ಭೇಟಿ:… Chikkamagaluru | ಜನಿವಾರ ತೆಗೆಸಿದ ಪ್ರಕರಣ: ಶೃಂಗೇರಿಯಲ್ಲಿ ಪೇಜಾವರ ಸ್ವಾಮೀಜಿ ಅಸಮಾಧಾನ Gokarna | ಜನಿವಾರ ಪ್ರಕರಣ: ಸಂಘಟಿತ ಪ್ರತಿಭಟನೆಗೆ ಹೊಸನಗರ ಮಠದ ರಾಘವೇಶ್ವರ ಶ್ರೀ… ಮುಳಿಯ ಗೋಲ್ಡ್ ಆ್ಯಂಡ್ ಡೈಮಂಡ್ ಶೋರೂಮ್ ಗೆ ನಾಳೆ ಪ್ರಸಿದ್ದ ಚಲನಚಿತ್ರ ನಟ… Mangaluru | ವಕ್ಫ್ ತಿದ್ದುಪಡಿ ಕಾಯ್ದೆ ವಿರುದ್ಧ ಬೃಹತ್ ಪ್ರತಿಭಟನೆ; ಅಡ್ಯಾರ್ ಮೈದಾನದಲ್ಲಿ…

ಇತ್ತೀಚಿನ ಸುದ್ದಿ

ಸಿಟಿ ಬಸ್ಸಿನಲ್ಲಿ ವಿದ್ಯಾರ್ಥಿಗೆ ಕಾಣಿಸಿಕೊಂಡ ಎದೆನೋವು: ಇಡೀ ಬಸ್ಸನ್ನೇ ಆ್ಯಂಬ್ಯುಲೆನ್ಸ್ ಮಾದರಿಯಲ್ಲಿ ಆಸ್ಪತ್ರೆಗೆ ಕೊಂಡೊಯ್ದ ಚಾಲಕ; ಎಲ್ಲೆಡೆ ಶ್ಲಾಘನೆ

31/07/2024, 19:56

ಮಂಗಳೂರು(reporterkarnataka.com): ಸಿಟಿ ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ಕಾಲೇಜು ವಿದ್ಯಾರ್ಥಿ ಯೊಬ್ಬನಿಗೆ ಎದೆನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಸಿಟಿ ಬಸ್ ಚಾಲಕರು ಸಮಯಪ್ರಜ್ಞೆಯನ್ನು ತೋರಿಸಿ ಬಸ್ಸನೇ ನೇರವಾಗಿ ಆಸ್ಪತ್ರೆ ಆವರಣದೊಳಗೆ ಕೊಂಡೋಯ್ದು ಚಿಕಿತ್ಸೆ ನೀಡಿದ ಘಟನೆ ಇಂದು ನಗರದಲ್ಲಿ ನಡೆದಿದ್ದು, ಚಾಲಕನ ಸಮಯ ಪ್ರಜ್ಞೆಯ ಬಗ್ಗೆ ಸಾರ್ವಜನಿಕರು ಒಕ್ಕೊರಲಿನಿಂದ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.


13F ರೂಟ್ ನಂಬರ್ ಕೃಷ್ಣ ಪ್ರಸಾದ್ ಬಸ್ಸು ಎಂದಿನಂತೆ ಕುಳೂರು ಮಾರ್ಗವಾಗಿ ಪ್ರಯಾಣಿಸುತ್ತಿತ್ತು. ಅದರಲ್ಲಿ ಪ್ರಯಾಣಿಸುತಿದ್ದ ಪ್ರಯಾಣಿಕರೊಬ್ಬರಲ್ಲಿ ಕಾಲೇಜು ವಿದ್ಯಾರ್ಥಿಯೊಬ್ಬನಿಗೆ ಥಟ್ಟನೆ ಎದೆ ನೋವು ಕಾಣಿಸಿಕೊಂಡಿತು. ತಕ್ಷಣ ಎಚ್ಚೆತ್ತುಕೊಂಡ ಬಸ್ಸಿನ ಚಾಲಕ ಮತ್ತು ನಿರ್ವಾಹಕರಾದ ಗಜೇಂದ್ರ ಕುಂದರ್ , ಮಹೇಶ್ ಪೂಜಾರಿ ಹಾಗೂ ಸುರೇಶ್ ಎನ್ನನ್ನು ಯೋಚಿಸದೆ ಎಲ್ಲಾ ಪ್ರಯಾಣಿಕರನ್ನು ಹೊತ್ತುಕೊಂಡು ಆಂಬುಲೆನ್ಸ್ ಮಾದರಿಯಲ್ಲಿ ಸೈರಾನ್ ಹಾಕಿಕೊಂಡು 6 ಕಿಮೀ. ದೂರವನ್ನು 6 ನಿಮಿಷಗಳಲ್ಲಿ ಕ್ರಮಿಸಿ ನಗರದ ಕಂಕನಾಡಿ ಆಸ್ಪತ್ರೆಯ ಹೊರಗಿನಿಂದ ಯಾರ ಅಪ್ಪಣೆಯನ್ನು ಕೇಳದೆ ಪ್ರಾಮುಖ್ಯತೆ ಯನ್ನು ಅರಿತು ಒಳ ಪ್ರವೇಶಿಸಿ ವಿದ್ಯಾರ್ಥಿ ಯನ್ನು casualty ಗೆ ಕ್ಲಪ್ತ ಸಮಯದಲ್ಲಿ ಸೇರಿಸಿ ಜೀವ ಉಳಿಸಿದ್ದಾರೆ. ಈ ಕೆಲಸ ನೋಡುತ್ತಿದ್ದ ಸಾರ್ವಜನಿಕರನ್ನು ಮೂಕ ವಿಸ್ಮಯರನ್ನಾಗಿಸಿದೆ ಹಾಗೂ ಅವರ ಪ್ರಶಂಷೆ ಗೆ ಪಾತ್ರ ವಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು