4:31 PM Sunday16 - August 2026
ಬ್ರೇಕಿಂಗ್ ನ್ಯೂಸ್
ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್…

ಇತ್ತೀಚಿನ ಸುದ್ದಿ

ಸಿಟಿ ಬಸ್ಸಿನಲ್ಲಿ ವಿದ್ಯಾರ್ಥಿಗೆ ಕಾಣಿಸಿಕೊಂಡ ಎದೆನೋವು: ಇಡೀ ಬಸ್ಸನ್ನೇ ಆ್ಯಂಬ್ಯುಲೆನ್ಸ್ ಮಾದರಿಯಲ್ಲಿ ಆಸ್ಪತ್ರೆಗೆ ಕೊಂಡೊಯ್ದ ಚಾಲಕ; ಎಲ್ಲೆಡೆ ಶ್ಲಾಘನೆ

31/07/2024, 19:56

ಮಂಗಳೂರು(reporterkarnataka.com): ಸಿಟಿ ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ಕಾಲೇಜು ವಿದ್ಯಾರ್ಥಿ ಯೊಬ್ಬನಿಗೆ ಎದೆನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಸಿಟಿ ಬಸ್ ಚಾಲಕರು ಸಮಯಪ್ರಜ್ಞೆಯನ್ನು ತೋರಿಸಿ ಬಸ್ಸನೇ ನೇರವಾಗಿ ಆಸ್ಪತ್ರೆ ಆವರಣದೊಳಗೆ ಕೊಂಡೋಯ್ದು ಚಿಕಿತ್ಸೆ ನೀಡಿದ ಘಟನೆ ಇಂದು ನಗರದಲ್ಲಿ ನಡೆದಿದ್ದು, ಚಾಲಕನ ಸಮಯ ಪ್ರಜ್ಞೆಯ ಬಗ್ಗೆ ಸಾರ್ವಜನಿಕರು ಒಕ್ಕೊರಲಿನಿಂದ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.


13F ರೂಟ್ ನಂಬರ್ ಕೃಷ್ಣ ಪ್ರಸಾದ್ ಬಸ್ಸು ಎಂದಿನಂತೆ ಕುಳೂರು ಮಾರ್ಗವಾಗಿ ಪ್ರಯಾಣಿಸುತ್ತಿತ್ತು. ಅದರಲ್ಲಿ ಪ್ರಯಾಣಿಸುತಿದ್ದ ಪ್ರಯಾಣಿಕರೊಬ್ಬರಲ್ಲಿ ಕಾಲೇಜು ವಿದ್ಯಾರ್ಥಿಯೊಬ್ಬನಿಗೆ ಥಟ್ಟನೆ ಎದೆ ನೋವು ಕಾಣಿಸಿಕೊಂಡಿತು. ತಕ್ಷಣ ಎಚ್ಚೆತ್ತುಕೊಂಡ ಬಸ್ಸಿನ ಚಾಲಕ ಮತ್ತು ನಿರ್ವಾಹಕರಾದ ಗಜೇಂದ್ರ ಕುಂದರ್ , ಮಹೇಶ್ ಪೂಜಾರಿ ಹಾಗೂ ಸುರೇಶ್ ಎನ್ನನ್ನು ಯೋಚಿಸದೆ ಎಲ್ಲಾ ಪ್ರಯಾಣಿಕರನ್ನು ಹೊತ್ತುಕೊಂಡು ಆಂಬುಲೆನ್ಸ್ ಮಾದರಿಯಲ್ಲಿ ಸೈರಾನ್ ಹಾಕಿಕೊಂಡು 6 ಕಿಮೀ. ದೂರವನ್ನು 6 ನಿಮಿಷಗಳಲ್ಲಿ ಕ್ರಮಿಸಿ ನಗರದ ಕಂಕನಾಡಿ ಆಸ್ಪತ್ರೆಯ ಹೊರಗಿನಿಂದ ಯಾರ ಅಪ್ಪಣೆಯನ್ನು ಕೇಳದೆ ಪ್ರಾಮುಖ್ಯತೆ ಯನ್ನು ಅರಿತು ಒಳ ಪ್ರವೇಶಿಸಿ ವಿದ್ಯಾರ್ಥಿ ಯನ್ನು casualty ಗೆ ಕ್ಲಪ್ತ ಸಮಯದಲ್ಲಿ ಸೇರಿಸಿ ಜೀವ ಉಳಿಸಿದ್ದಾರೆ. ಈ ಕೆಲಸ ನೋಡುತ್ತಿದ್ದ ಸಾರ್ವಜನಿಕರನ್ನು ಮೂಕ ವಿಸ್ಮಯರನ್ನಾಗಿಸಿದೆ ಹಾಗೂ ಅವರ ಪ್ರಶಂಷೆ ಗೆ ಪಾತ್ರ ವಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು