1:05 PM Wednesday13 - May 2026
ಬ್ರೇಕಿಂಗ್ ನ್ಯೂಸ್
ಸ್ಯಾಂಡಲ್‌ವುಡ್‌ಗೆ ಬಿಗ್ ಶಾಕ್: ಹೃದಯಘಾತಕ್ಕೆ ನಟ ದಿಲೀಪ್ ರಾಜ್ ಬಲಿ ಪ್ರಧಾನಿ ಮೋದಿ ಕರೆ ಬೆನ್ನಲ್ಲೆ, ಅಡುಗೆ ಎಣ್ಣೆ ದರದಲ್ಲಿ ಭಾರಿ ಇಳಿಕೆ: ಅಕ್ಕಿ… ವಿದ್ಯುತ್ ಕಂಬದಲ್ಲಿ ಶಾರ್ಟ್ ಸರ್ಕ್ಯೂಟ್: ಬೈಕ್ ಸವಾರರ ನಿರ್ಲಕ್ಷ್ಯದ ಸವಾರಿ; ಅಪಾಯದಿಂದ ಪಾರು. ಬೆಂಗಳೂರು ಉಪನಗರ ರೈಲು ಯೋಜನೆ: 𝟭𝟱𝟯 ಮೆಟ್ರೋ ಕೋಚ್ ಗಳ ಖರೀದಿಗೆ ಐಸಿಎಫ್… ಚಿಕ್ಕಮಗಳೂರು | ಬ್ರೇಕ್ ಫೇಲ್: ಬಸ್ ನಿಲ್ದಾಣದ ಕಾಂಪೌಂಡ್‌ಗೆ ಡಿಕ್ಕಿ ಹೊಡೆದ ಸರಕಾರಿ… ಶೃಂಗೇರಿ ಕ್ಷೇತ್ರದ ಅಂಚೆ ಮತ ಗೊಂದಲ: ಕಾಂಗ್ರೆಸ್​​ನ ರಾಜೇಗೌಡರಿಗೆ ಮತ್ತೆ ದಕ್ಕಿದ ಶಾಸಕ… ದೇಶದ ಜನತೆಗೆ ಮೋದಿ ಮಿತವ್ಯಯದ ಕರೆ: ವಾಗ್ದಾಳಿ ನಡೆಸಿದ ರಾಹುಲ್‌ಗೆ ಬಿಜೆಪಿ ತಿರುಗೇಟು ಶೃಂಗೇರಿ ಕ್ಷೇತ್ರ ಮರು ಎಣಿಕೆ: ಹೈಕೋರ್ಟ್ ಆದೇಶಕ್ಕೆ ಸುಪ್ರೀಂಕೋರ್ಟ್ ತಡೆ: ಮತ್ತೆ ರಾಜೇಗೌಡ… ಪತಿಯೊಂದಿಗೆ ಜಗಳವಾಡಿ 8ನೇ ಮಹಡಿಯಿಂದ ಜಿಗಿದು ಮಹಿಳೆ ಆತ್ಮಹತ್ಯೆ: ಸಾಮಾಜಿಕ ಜಾಲತಾಣಗಳಲ್ಲಿ ದೃಶ್ಯ… ರಾಜ್ಯ ಸರ್ಕಾರಿ ನೌಕರರಿಗೆ ಸಿಹಿ ಸುದ್ದಿ: ತುಟ್ಟಿಭತ್ಯೆ ಶೇ. 1.50ರಷ್ಟು ಹೆಚ್ಚಳ: ಸರ್ಕಾರದ…

ಇತ್ತೀಚಿನ ಸುದ್ದಿ

ಸಿಟಿ ಬಸ್ಸಿನಲ್ಲಿ ವಿದ್ಯಾರ್ಥಿಗೆ ಕಾಣಿಸಿಕೊಂಡ ಎದೆನೋವು: ಇಡೀ ಬಸ್ಸನ್ನೇ ಆ್ಯಂಬ್ಯುಲೆನ್ಸ್ ಮಾದರಿಯಲ್ಲಿ ಆಸ್ಪತ್ರೆಗೆ ಕೊಂಡೊಯ್ದ ಚಾಲಕ; ಎಲ್ಲೆಡೆ ಶ್ಲಾಘನೆ

31/07/2024, 19:56

ಮಂಗಳೂರು(reporterkarnataka.com): ಸಿಟಿ ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ಕಾಲೇಜು ವಿದ್ಯಾರ್ಥಿ ಯೊಬ್ಬನಿಗೆ ಎದೆನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಸಿಟಿ ಬಸ್ ಚಾಲಕರು ಸಮಯಪ್ರಜ್ಞೆಯನ್ನು ತೋರಿಸಿ ಬಸ್ಸನೇ ನೇರವಾಗಿ ಆಸ್ಪತ್ರೆ ಆವರಣದೊಳಗೆ ಕೊಂಡೋಯ್ದು ಚಿಕಿತ್ಸೆ ನೀಡಿದ ಘಟನೆ ಇಂದು ನಗರದಲ್ಲಿ ನಡೆದಿದ್ದು, ಚಾಲಕನ ಸಮಯ ಪ್ರಜ್ಞೆಯ ಬಗ್ಗೆ ಸಾರ್ವಜನಿಕರು ಒಕ್ಕೊರಲಿನಿಂದ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.


13F ರೂಟ್ ನಂಬರ್ ಕೃಷ್ಣ ಪ್ರಸಾದ್ ಬಸ್ಸು ಎಂದಿನಂತೆ ಕುಳೂರು ಮಾರ್ಗವಾಗಿ ಪ್ರಯಾಣಿಸುತ್ತಿತ್ತು. ಅದರಲ್ಲಿ ಪ್ರಯಾಣಿಸುತಿದ್ದ ಪ್ರಯಾಣಿಕರೊಬ್ಬರಲ್ಲಿ ಕಾಲೇಜು ವಿದ್ಯಾರ್ಥಿಯೊಬ್ಬನಿಗೆ ಥಟ್ಟನೆ ಎದೆ ನೋವು ಕಾಣಿಸಿಕೊಂಡಿತು. ತಕ್ಷಣ ಎಚ್ಚೆತ್ತುಕೊಂಡ ಬಸ್ಸಿನ ಚಾಲಕ ಮತ್ತು ನಿರ್ವಾಹಕರಾದ ಗಜೇಂದ್ರ ಕುಂದರ್ , ಮಹೇಶ್ ಪೂಜಾರಿ ಹಾಗೂ ಸುರೇಶ್ ಎನ್ನನ್ನು ಯೋಚಿಸದೆ ಎಲ್ಲಾ ಪ್ರಯಾಣಿಕರನ್ನು ಹೊತ್ತುಕೊಂಡು ಆಂಬುಲೆನ್ಸ್ ಮಾದರಿಯಲ್ಲಿ ಸೈರಾನ್ ಹಾಕಿಕೊಂಡು 6 ಕಿಮೀ. ದೂರವನ್ನು 6 ನಿಮಿಷಗಳಲ್ಲಿ ಕ್ರಮಿಸಿ ನಗರದ ಕಂಕನಾಡಿ ಆಸ್ಪತ್ರೆಯ ಹೊರಗಿನಿಂದ ಯಾರ ಅಪ್ಪಣೆಯನ್ನು ಕೇಳದೆ ಪ್ರಾಮುಖ್ಯತೆ ಯನ್ನು ಅರಿತು ಒಳ ಪ್ರವೇಶಿಸಿ ವಿದ್ಯಾರ್ಥಿ ಯನ್ನು casualty ಗೆ ಕ್ಲಪ್ತ ಸಮಯದಲ್ಲಿ ಸೇರಿಸಿ ಜೀವ ಉಳಿಸಿದ್ದಾರೆ. ಈ ಕೆಲಸ ನೋಡುತ್ತಿದ್ದ ಸಾರ್ವಜನಿಕರನ್ನು ಮೂಕ ವಿಸ್ಮಯರನ್ನಾಗಿಸಿದೆ ಹಾಗೂ ಅವರ ಪ್ರಶಂಷೆ ಗೆ ಪಾತ್ರ ವಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು