11:25 AM Wednesday4 - March 2026
ಬ್ರೇಕಿಂಗ್ ನ್ಯೂಸ್
ಡಿಕೆಶಿ ಮೇಲೆ ಕಣ್ಗಾವಲು | ಎಚ್ ಡಿಕೆ, ಆರ್. ಅಶೋಕ್ ಹೇಳಿಕೆ ‘’ತಾ… ಚೆನ್ನೈ ವಿಶೇಷ ಸಮಾವೇಶದಲ್ಲಿ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್: ಸಾರ್ವಜನಿಕ ಆರೋಗ್ಯ ಮೂಲಸೌಕರ್ಯ ಕುರಿತು… ಚೆನ್ನಪಟ್ಟಣ | ಕೊಡಗಿನ ಸಾಕಾನೆಗಳ ಯಶಸ್ವಿ ಕಾರ್ಯಾಚರಣೆ: ನಿರಂತರ ಉಪಟಳ ನೀಡುತ್ತಿದ್ದ ಮಕ್ನಾ… ಬೆಂಗಳೂರಿನ ನೈಜೆಲ್ ಫೆರ್ನಾಂಡಿಸ್‌ಗೆ ಅಪರೂಪದ ‘ಪಾಪಲ್ ನೈಟ್‌ಹುಡ್’ ಗೌರವ ಪ್ರದಾನ ತಂತ್ರಜ್ಞಾನ ಕ್ಷೇತ್ರದಲ್ಲಿ ಭಾರತ ಜಾಗತಿಕ ಮುಂಚೂಣಿಯತ್ತ ಸಾಗಿದೆ: ಕೃಷಿ ವಿಜ್ಞಾನಿ ಡಾ. ತಿಮಕಾಪುರ ನಿರಂತರ ಕಾಡಾನೆ ದಾಳಿಗೆ ಕಂಗಾಲಾದ ಮಲೆನಾಡಿಗರು: ಕಳೆದೊಂದು ವರ್ಷದಲ್ಲಿ 9 ಜನ ಕಾಡಾನೆ… ನಾಪೋಕ್ಲು: ಹಿಂದೂ ಸಂಗಮ ಸಮಾವೇಶ ಪ್ರಚಾರ ವೇಳೆ ಮಾತಿನ ಚಕಮಕಿ; ಓರ್ವನಿಗೆ ಗಾಯ ಯೋಗೀಶ್ ಗೌಡ ಕೊಲೆ ಪ್ರಕರಣ: ಶಾಸಕ ವಿನಯ್ ಕುಲಕರ್ಣಿಗೆ ಸುಪ್ರೀಂ ಕೋರ್ಟ್‌ನಿಂದ ಜಾಮೀನು… “ನಾನು ಭ್ರಷ್ಟನಲ್ಲ”: ದಿಲ್ಲಿ ಅಬಕಾರಿ ಪ್ರಕರಣದಲ್ಲಿ ಖುಲಾಸೆಗೊಂಡ ಅರವಿಂದ್ ಕೇಜ್ರಿವಾಲ್ ಕಣ್ಣೀರು ಪಾದಚಾರಿಗೆ ಸ್ಕೂಟಿ ಡಿಕ್ಕಿ: ಅದೇ ವ್ಯಕ್ತಿ ಮೇಲೆ ಹರಿದ ಕಾರು; ಸ್ಥಳದಲ್ಲೇ ಸಾವು

ಇತ್ತೀಚಿನ ಸುದ್ದಿ

ಸೌಜನ್ಯ ಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಪೊಲೀಸ್ ವಶಕ್ಕೆ: ಖಾಸಗಿ ವಾಹನದಲ್ಲಿ ಪ್ರಯಾಣ; ಬ್ರಹ್ಮಾವರ ಪೊಲೀಸರಿಂದ ವಿಚಾರಣೆ

21/08/2025, 11:51

ಉಜಿರೆ(reporterkarnataka.com): ಸೌಜನ್ಯ ಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಅವರ ವಿರುದ್ಧ ದಾಖಲಾಗಿರುವ ಪ್ರಕರಣ ಸಂಬಂಧಿಸಿದಂತೆ ತಿಮರೋಡಿ ಅವರನ್ನು ಅವರ ಉಜಿರೆ ಸಮೀಪದ ಅವರ ಮನೆಯಲ್ಲಿ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಇದಕ್ಕೆ ಮುನ್ನ ಸುಮಾರು 1 ತಾಸಿಗೂ ಅಧಿಕ ಕಾಲ ತಿಮರೋಡಿ ಮನೆ ಎದುರು ಹೈಡ್ರಾಮವೇ ನಡೆದಿದೆ. ವಾರಂಟ್ ಇಲ್ಲದೆ ಹೇಗೆ ಬಂಧನ ಮಾಡುತ್ತೀರಿ ಎಂದು ತಿಮರೋಡಿ, ಗಿರೀಶ್ ಮಟ್ಟಣ್ಣನವರ್ ಪ್ರಶ್ನಿಸಿದ್ದಾರೆ. ಮೊದಲು ಪೊಲೀಸರು ತಮ್ಮ ವಾಹನ ಹತ್ತುವಂತೆ ತಿಮರೋಡಿ ಅವರಿಗೆ ಸೂಚನೆ ನೀಡಿದರು. ಆದರೆ ಮಹೇಶ್ ತಿಮರೋಡಿ ಅವರು ಪೊಲೀಸ್ ವಾಹನದಲ್ಲಿ ನಾನು ಬರುವುದಿಲ್ಲ, ನನ್ನ ವಾಹನದಲ್ಲೇ ನಾನು ಪೊಲೀಸ್ ಠಾಣೆಗೆ ಆಗಮಿಸುತ್ತೇನೆ ಎಂದು ಪಟ್ಟು ಹಿಡಿದರು. ನಂತರ ಪೊಲೀಸರ ಬೆಂಗಾವಲಿನಲ್ಲಿ ತಿಮರೋಡಿ ಅವರು ತನ್ನ ಸ್ವಂತ ವಾಹನದಲ್ಲಿ ಪ್ರಯಾಣ ಬೆಳೆಸಿದರು. ಭಾರೀ ಸಂಖ್ಯೆಯಲ್ಲಿ ತಿಮರೋಡಿ ಬೆಂಬಲಿಗರು ನೆರೆದಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು