12:39 AM Saturday17 - January 2026
ಬ್ರೇಕಿಂಗ್ ನ್ಯೂಸ್
88 ಪ್ರಕರಣಗಳಲ್ಲಿ ಪೊಲೀಸಿನವರೇ ಶಾಮೀಲು; ಬೇಲಿಯೇ ಎದ್ದು ಹೊಲ ಮೇಯುವುದು ಅಕ್ಷಮ್ಯ ಅಪರಾಧ:… ಬೆಂಗಳೂರಿನಲ್ಲಿ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಸ್ಥಾಪನೆ: ಅಜೀಂ ಪ್ರೇಮ್‌ಜಿ ಫೌಂಡೇಷನ್ ಜತೆ ಕೈಜೋಡಿಸಿದ… ಕುಶಾಲನಗರ – ಮಡಿಕೇರಿ ಹೆದ್ದಾರಿಯ ಆನೆಕಾಡು ಬಳಿ ಅಪಘಾತ: ಕಾಡು ಕುರಿ ಸಾವು,… ಕೊಡಗಿನಲ್ಲಿ ಅಕ್ರಮ ವಲಸಿಗರ ಬಗ್ಗೆ ಹೈ ಅಲರ್ಟ್: ನೂತನ ಎಸ್ಪಿ ಬಿಂದುಮಣಿ ಮಂಗಳೂರಿನಲ್ಲಿ ಸ್ಕೂಲ್ ಆಫ್ ಇಂಜಿನಿಯರಿಂಗ್ ಮತ್ತು ಕಾನೂನು ಶಾಲೆಗೆ ರಾಜ್ಯಪಾಲ ಗೆಹ್ಲೋಟ್ ಚಾಲನೆ ಉಡುಪಿ ಪರ್ಯಾಯ ಮಹೋತ್ಸವಕ್ಕೆ ಸರ್ವ ಸಜ್ಜು: ಜ.18ರಂದು ಶೋಭಾ ಯಾತ್ರೆ; ಶೀರೂರು ಶ್ರೀಗಳಿಂದ… ಕೊಡಗಿನ ಮಹಿಳೆಯರ ಬಗ್ಗೆ ಅವಹೇಳನಕಾರಿ ಹೇಳಿಕೆ: ಸೈಬರ್ ಕ್ರೈಂ ಠಾಣೆಯಲ್ಲಿ ಪ್ರಕರಣ ದಾಖಲು ಮನರೇಗಾ ಬಚಾವ್ ಸಂಗ್ರಾಮ: ಸ್ಥಳೀಯ ಸಂಸ್ಥೆಗಳ ಚುನಾವಣೆ ಪೂರ್ವಸಿದ್ದತಾ ಸಭೆ ಜಿ ರಾಮ್ ಜಿ ಬಗ್ಗೆ ಕಾಂಗ್ರೆಸ್ ಸುಳ್ಳು ಸಂಕಥನ: ಕೇಂದ್ರ ಸಚಿವ ಎಚ್.ಡಿ.… ಕಾರ್ಯಾಂಗ, ಶಾಸಕಾಂಗ, ನ್ಯಾಯಾಂಗ ಸಮನ್ವಯತೆಯಿಂದ ಕೆಲಸ ಮಾಡಿದಾಗ ಮಾತ್ರ ಸುಖಿ ರಾಜ್ಯ ಸ್ಥಾಪನೆ…

ಇತ್ತೀಚಿನ ಸುದ್ದಿ

ಸೌಜನ್ಯ ಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಪೊಲೀಸ್ ವಶಕ್ಕೆ: ಖಾಸಗಿ ವಾಹನದಲ್ಲಿ ಪ್ರಯಾಣ; ಬ್ರಹ್ಮಾವರ ಪೊಲೀಸರಿಂದ ವಿಚಾರಣೆ

21/08/2025, 11:51

ಉಜಿರೆ(reporterkarnataka.com): ಸೌಜನ್ಯ ಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಅವರ ವಿರುದ್ಧ ದಾಖಲಾಗಿರುವ ಪ್ರಕರಣ ಸಂಬಂಧಿಸಿದಂತೆ ತಿಮರೋಡಿ ಅವರನ್ನು ಅವರ ಉಜಿರೆ ಸಮೀಪದ ಅವರ ಮನೆಯಲ್ಲಿ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಇದಕ್ಕೆ ಮುನ್ನ ಸುಮಾರು 1 ತಾಸಿಗೂ ಅಧಿಕ ಕಾಲ ತಿಮರೋಡಿ ಮನೆ ಎದುರು ಹೈಡ್ರಾಮವೇ ನಡೆದಿದೆ. ವಾರಂಟ್ ಇಲ್ಲದೆ ಹೇಗೆ ಬಂಧನ ಮಾಡುತ್ತೀರಿ ಎಂದು ತಿಮರೋಡಿ, ಗಿರೀಶ್ ಮಟ್ಟಣ್ಣನವರ್ ಪ್ರಶ್ನಿಸಿದ್ದಾರೆ. ಮೊದಲು ಪೊಲೀಸರು ತಮ್ಮ ವಾಹನ ಹತ್ತುವಂತೆ ತಿಮರೋಡಿ ಅವರಿಗೆ ಸೂಚನೆ ನೀಡಿದರು. ಆದರೆ ಮಹೇಶ್ ತಿಮರೋಡಿ ಅವರು ಪೊಲೀಸ್ ವಾಹನದಲ್ಲಿ ನಾನು ಬರುವುದಿಲ್ಲ, ನನ್ನ ವಾಹನದಲ್ಲೇ ನಾನು ಪೊಲೀಸ್ ಠಾಣೆಗೆ ಆಗಮಿಸುತ್ತೇನೆ ಎಂದು ಪಟ್ಟು ಹಿಡಿದರು. ನಂತರ ಪೊಲೀಸರ ಬೆಂಗಾವಲಿನಲ್ಲಿ ತಿಮರೋಡಿ ಅವರು ತನ್ನ ಸ್ವಂತ ವಾಹನದಲ್ಲಿ ಪ್ರಯಾಣ ಬೆಳೆಸಿದರು. ಭಾರೀ ಸಂಖ್ಯೆಯಲ್ಲಿ ತಿಮರೋಡಿ ಬೆಂಬಲಿಗರು ನೆರೆದಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು