9:15 AM Tuesday4 - November 2025
ಬ್ರೇಕಿಂಗ್ ನ್ಯೂಸ್
ರಾಜ್ಯ ಚಲನಚಿತ್ರ ಪ್ರಶಸ್ತಿ ಪ್ರದಾನ | ಕೇವಲ‌ ಸಬ್ಸಿಡಿಗಾಗಿ ಸಿನಿಮಾ ಮಾಡಬೇಡಿ; ಒಳ್ಳೆ… ಮಂಡ್ಯ ಜಿಲ್ಲೆಯ 50ಕ್ಕೂ ಹೆಚ್ಚು ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಇಸಿಜಿ ಯಂತ್ರ Chikkamagaluru | ಶೃಂಗೇರಿ: ನರಹಂತಕ ಕಾಡಾನೆ ಕೊನೆಗೂ ಸೆರೆ; ಸಾಕಾನೆಯ ಮೂಲಕ ಕಾರ್ಯಾಚರಣೆ Mysore | ಅಸಮಾನತೆ ನಿವಾರಣೆ ಪ್ರತಿಯೊಬ್ಬ ರಾಜಕಾರಣಿಯ ಜವಾಬ್ದಾರಿ: ಸಿಎಂ ಸಿದ್ದರಾಮಯ್ಯ ನವಕಲಬುರಗಿ ನಿರ್ಮಾಣಕ್ಕೆ ನೀಲಿ ನಕ್ಷೆ ಸಿದ್ದ, ಲೀಪ್ ಯೋಜನೆಯ ಅಡಿಯಲ್ಲಿ ಅಭಿವೃದ್ದಿಗೆ ಒತ್ತು:… ಡಿಜಿಟಲ್ ಅರೆಸ್ಟ್ ಮೂಲಕ ಹಣ ವರ್ಗಾವಣೆಯಾಗದಂತೆ ತಡೆದ ಪೊಲೀಸರು: ಮಂಗಳೂರು ಪೊಲೀಸರ ಕಾರ್ಯಕ್ಕೆ… Kodagu | ಪೊನ್ನಂಪೇಟೆಯಲ್ಲಿ ಮಿತಿ ಮೀರಿದ ಬೀದಿ ನಾಯಿ ಹಾವಳಿ: ಶ್ವಾನ ದಾಳಿಗೆ… ರಾಜ್ಯ ಸರ್ಕಾರ ಬೆಳೆ ನಷ್ಟಕ್ಕೆ ಸೂಕ್ತ ಪರಿಹಾರ ನೀಡದಿದ್ದರೆ ರೈತರ ಚಳವಳಿ ಎದುರಿಸಬೇಕಾಗುತ್ತದೆ:… Bangalore | ರಾಜ್ಯದಲ್ಲಿ‌ ಕುಡಿಯುವ ನೀರು, ಒಳಚರಂಡಿ ಯೋಜನೆ: ಕೇಂದ್ರಕ್ಕೆ 6,500 ಕೋಟಿ… ಸೋಮವಾರಪೇಟೆ | ಸುಮಾರು 2.4 ಲಕ್ಷ ರೂ. ಮೌಲ್ಯದ ಕಾಳು ಮೆಣಸು ಕಳ್ಳತನ:…

ಇತ್ತೀಚಿನ ಸುದ್ದಿ

ಸೌಜನ್ಯ ಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಪೊಲೀಸ್ ವಶಕ್ಕೆ: ಖಾಸಗಿ ವಾಹನದಲ್ಲಿ ಪ್ರಯಾಣ; ಬ್ರಹ್ಮಾವರ ಪೊಲೀಸರಿಂದ ವಿಚಾರಣೆ

21/08/2025, 11:51

ಉಜಿರೆ(reporterkarnataka.com): ಸೌಜನ್ಯ ಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಅವರ ವಿರುದ್ಧ ದಾಖಲಾಗಿರುವ ಪ್ರಕರಣ ಸಂಬಂಧಿಸಿದಂತೆ ತಿಮರೋಡಿ ಅವರನ್ನು ಅವರ ಉಜಿರೆ ಸಮೀಪದ ಅವರ ಮನೆಯಲ್ಲಿ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಇದಕ್ಕೆ ಮುನ್ನ ಸುಮಾರು 1 ತಾಸಿಗೂ ಅಧಿಕ ಕಾಲ ತಿಮರೋಡಿ ಮನೆ ಎದುರು ಹೈಡ್ರಾಮವೇ ನಡೆದಿದೆ. ವಾರಂಟ್ ಇಲ್ಲದೆ ಹೇಗೆ ಬಂಧನ ಮಾಡುತ್ತೀರಿ ಎಂದು ತಿಮರೋಡಿ, ಗಿರೀಶ್ ಮಟ್ಟಣ್ಣನವರ್ ಪ್ರಶ್ನಿಸಿದ್ದಾರೆ. ಮೊದಲು ಪೊಲೀಸರು ತಮ್ಮ ವಾಹನ ಹತ್ತುವಂತೆ ತಿಮರೋಡಿ ಅವರಿಗೆ ಸೂಚನೆ ನೀಡಿದರು. ಆದರೆ ಮಹೇಶ್ ತಿಮರೋಡಿ ಅವರು ಪೊಲೀಸ್ ವಾಹನದಲ್ಲಿ ನಾನು ಬರುವುದಿಲ್ಲ, ನನ್ನ ವಾಹನದಲ್ಲೇ ನಾನು ಪೊಲೀಸ್ ಠಾಣೆಗೆ ಆಗಮಿಸುತ್ತೇನೆ ಎಂದು ಪಟ್ಟು ಹಿಡಿದರು. ನಂತರ ಪೊಲೀಸರ ಬೆಂಗಾವಲಿನಲ್ಲಿ ತಿಮರೋಡಿ ಅವರು ತನ್ನ ಸ್ವಂತ ವಾಹನದಲ್ಲಿ ಪ್ರಯಾಣ ಬೆಳೆಸಿದರು. ಭಾರೀ ಸಂಖ್ಯೆಯಲ್ಲಿ ತಿಮರೋಡಿ ಬೆಂಬಲಿಗರು ನೆರೆದಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು