4:32 PM Monday29 - June 2026
ಬ್ರೇಕಿಂಗ್ ನ್ಯೂಸ್
ಗೆಳೆಯ ವೈಶಾಖ್‌ ಆತ್ಮಹತ್ಯೆ ಪ್ರಕರಣ: ಫಸ್ಟ್‌ ರಿಯಾಕ್ಷನ್ ಕೊಟ್ಟ ನಟಿ ಕೃಷಿ ತಾಪಂಡ ರೆಸಾರ್ಟ್ ನ ಈಜುಕೊಳದಲ್ಲಿ ದುರಂತ | 10 ಅಡಿ ಎತ್ತರದಿಂದ 4 ಅಡಿ… 2 ದಿನಗಳ ರಾಜ್ಯ ಪ್ರವಾಸ ಮುಗಿಸಿದ ಉಪ ರಾಷ್ಟ್ರಪತಿ ಸಿ.ಪಿ. ರಾಧಾಕೃಷ್ಣನ್ ಅವರಿಗೆ… ಆರೆಸ್ಸೆಸ್ ವಿರುದ್ಧ ಪೋಸ್ಟ್ : ಗೃಹ ಸಚಿವ ಪ್ರಿಯಾಂಕ್ ಖರ್ಗೆ, ನಲಪಾಡ್‌ಗೆ ಕೋರ್ಟ್… ಕ್ರಿಪ್ಟೋ ಹೂಡಿಕೆ ಹೆಸರಿನಲ್ಲಿ ಕೋಟ್ಯಂತರ ರೂ. ವಂಚನೆ ಆರೋಪ: ತೀರ್ಥಹಳ್ಳಿ ಕಾಲೇಜು ಪ್ರಾಧ್ಯಾಪಕ… ಶಾಸಕ ಪ್ರದೀಪ್ ಈಶ್ವರ್ ಮೇಲೆ ಚಪ್ಪಲಿ ತೂರಿದ ಪ್ರಕರಣ | 4 ಮಂದಿ… ಮುಂಬೈ | ಮೊಹರಂ ವೇಳೆ ಸಾಮೂಹಿಕ ವಿಷಪ್ರಾಶನಕ್ಕೆ ಸಂಚು: 14,900 ಕ್ಯಾಪ್ಸುಲ್‌ ವಶಕ್ಕೆ;… ತೀರ್ಥಹಳ್ಳಿ: ಪಲ್ಸ್ ಪೋಲಿಯೋ ಅಭಿಯಾನಕ್ಕೆ ಶಾಸಕ ಆರಗ ಜ್ಞಾನೇಂದ್ರ ಚಾಲನೆ ಟ್ರೆಕ್ಕಿಂಗ್ ವೇಳೆ ದುರಂತ: ಹೃದಯಾಘಾತದಿಂದ ಚಿತ್ರ ನಿರ್ಮಾಪಕ ಭಾ ಮಾ ಹರೀಶ್ ಪುತ್ರ… ವಿರಾಜಪೇಟೆ: ಕಾಡಾನೆ ದಾಳಿಯಿಂದ ಕೂದಲೆಳೆ ಅಂತರದಲ್ಲಿ ಮಹಿಳೆ ಪಾರು

ಇತ್ತೀಚಿನ ಸುದ್ದಿ

ಸೌಜನ್ಯ ಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಪೊಲೀಸ್ ವಶಕ್ಕೆ: ಖಾಸಗಿ ವಾಹನದಲ್ಲಿ ಪ್ರಯಾಣ; ಬ್ರಹ್ಮಾವರ ಪೊಲೀಸರಿಂದ ವಿಚಾರಣೆ

21/08/2025, 11:51

ಉಜಿರೆ(reporterkarnataka.com): ಸೌಜನ್ಯ ಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಅವರ ವಿರುದ್ಧ ದಾಖಲಾಗಿರುವ ಪ್ರಕರಣ ಸಂಬಂಧಿಸಿದಂತೆ ತಿಮರೋಡಿ ಅವರನ್ನು ಅವರ ಉಜಿರೆ ಸಮೀಪದ ಅವರ ಮನೆಯಲ್ಲಿ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಇದಕ್ಕೆ ಮುನ್ನ ಸುಮಾರು 1 ತಾಸಿಗೂ ಅಧಿಕ ಕಾಲ ತಿಮರೋಡಿ ಮನೆ ಎದುರು ಹೈಡ್ರಾಮವೇ ನಡೆದಿದೆ. ವಾರಂಟ್ ಇಲ್ಲದೆ ಹೇಗೆ ಬಂಧನ ಮಾಡುತ್ತೀರಿ ಎಂದು ತಿಮರೋಡಿ, ಗಿರೀಶ್ ಮಟ್ಟಣ್ಣನವರ್ ಪ್ರಶ್ನಿಸಿದ್ದಾರೆ. ಮೊದಲು ಪೊಲೀಸರು ತಮ್ಮ ವಾಹನ ಹತ್ತುವಂತೆ ತಿಮರೋಡಿ ಅವರಿಗೆ ಸೂಚನೆ ನೀಡಿದರು. ಆದರೆ ಮಹೇಶ್ ತಿಮರೋಡಿ ಅವರು ಪೊಲೀಸ್ ವಾಹನದಲ್ಲಿ ನಾನು ಬರುವುದಿಲ್ಲ, ನನ್ನ ವಾಹನದಲ್ಲೇ ನಾನು ಪೊಲೀಸ್ ಠಾಣೆಗೆ ಆಗಮಿಸುತ್ತೇನೆ ಎಂದು ಪಟ್ಟು ಹಿಡಿದರು. ನಂತರ ಪೊಲೀಸರ ಬೆಂಗಾವಲಿನಲ್ಲಿ ತಿಮರೋಡಿ ಅವರು ತನ್ನ ಸ್ವಂತ ವಾಹನದಲ್ಲಿ ಪ್ರಯಾಣ ಬೆಳೆಸಿದರು. ಭಾರೀ ಸಂಖ್ಯೆಯಲ್ಲಿ ತಿಮರೋಡಿ ಬೆಂಬಲಿಗರು ನೆರೆದಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು