1:16 PM Friday19 - June 2026
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ… ದೆಹಲಿ ಮಟ್ಟದಲ್ಲಿ ಹೈವೋಲ್ಟೇಜ್ ಸಂಧಾನ: ಬೆಂಗಳೂರು ಅಭಿವೃದ್ಧಿ ಸಚಿವರಾಗಿ ಕೃಷ್ಣ ಬೈರೇಗೌಡ ಅಧಿಕಾರ… ತೀರ್ಪು ಮುನ್ನವೇ ಶಂಕಿತ ಉಗ್ರ ಕೊಡಗು ಮೂಲದ ಅಬ್ದುಲ್ ಖಾದರ್ ಸಾವು ಮೈಸೂರು ದುರಂತ: ಅಕ್ರಮ ಪಬ್, ಬಾರ್, ರೆಸ್ಟೋರೆಂಟ್‌ಗಳ ಮೇಲೆ ಕ್ರಮ: ಸಚಿವ ಡಾ.… ವಿಜಯಪುರ | ಭೀಕರ ರಸ್ತೆ ಅಪಘಾತ: ಟಿಪ್ಪರ್-ಬಸ್ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ 3…

ಇತ್ತೀಚಿನ ಸುದ್ದಿ

ಕೃಷಿ ಉತ್ಪಾದಕತೆಯ ಮೇಲೆ ಹವಾಮಾನ ಬದಲಾವಣೆಯ ಕ್ರಮ: ಕೃಷಿ ಸಚಿವಾಲಕ್ಕೆ ಮಾಹಿತಿ ಕೇಳಿದ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್

10/12/2025, 20:52

ನವದೆಹಲಿ(reporterkarnataka.com): ಕೃಷಿ ಉತ್ಪಾದಕತೆಯ ಮೇಲೆ ಹವಾಮಾನ ಬದಲಾವಣೆಯ ಪರಿಣಾಮದ ಮೇಲೆ ಕೈಗೊಂಡ ಕ್ರಮದ ಬಗ್ಗೆ ಕೇಂದ್ರದ ಕೃಷಿ ಸಚಿವಾಲಯಕ್ಕೆ ದಾವಣಗೆರೆ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್ ಪ್ರಶ್ನೆ ಕೇಳಿದ್ದಾರೆ ಹಾಗೂ ಅವರ ಪ್ರಶ್ನೆಗೆ ಕೇಂದ್ರ ಸರ್ಕಾರ ಉತ್ತರ ನೀಡಿದೆ.
ದೇಶದ ವಿವಿಧ ಕೃಷಿ ಹವಾಮಾನ ವಲಯಗಳಲ್ಲಿ ಕೃಷಿ ಉತ್ಪಾದಕತೆಯ ಮೇಲೆ ಅನಿಯಮಿತ ಮಳೆ, ಉಷ್ಣದ ಪರಿಣಾಮ ಮತ್ತು ಬರಗಾಲ ಸೇರಿದಂತೆ ಹವಾಮಾನ ಬದಲಾವಣೆಯ ಪರಿಣಾಮದ ಬಗ್ಗೆ ಸರ್ಕಾರ ಯಾವುದೇ ಮೌಲ್ಯಮಾಪನವನ್ನು ನಡೆಸಿದ ಮಾಹಿತಿ, ರಾಷ್ಟ್ರೀಯ ಹವಾಮಾನ ಸ್ಥಿತಿಸ್ಥಾಪಕ ಕೃಷಿ ನಾವೀನ್ಯತೆಗಳು (NICRA) ಕಾರ್ಯಕ್ರಮದ ಅಡಿಯಲ್ಲಿ ಅಸುರಕ್ಷಿತ ಜಿಲ್ಲೆಗಳ ವಿವರಗಳು, ಸಣ್ಣ ಮತ್ತು ಅತಿ ಸಣ್ಣ ರೈತರಿಗೆ ಆರ್ಥಿಕ ಮತ್ತು ತಾಂತ್ರಿಕ ಸಹಾಯವನ್ನು ವಿಸ್ತರಿಸಲು ಸರ್ಕಾರ ಯೋಚಿಸಿದೆಯೇ?
ಹೌದಾದರೆ ಕಳೆದ ಮೂರು ಆರ್ಥಿಕ ವರ್ಷಗಳಲ್ಲಿ ಇಂತಹ ಯೋಜನೆಗಳ ಅಡಿಯಲ್ಲಿ ಮಾಡಲಾದ ಬಜೆಟ್ ವಿನಿಯೋಗ ಹಾಗೂ ಸಾಧನೆಗಳ ವಿವರಗಳನ್ನು ತಿಳಿಸಬೇಕೆಂದು ಸಂಸದರು‌ ಪ್ರಶ್ನೆ ಕೇಳಿದ್ದಾರೆ.
ಇದಕ್ಕೆ ಉತ್ತರಿಸಿದ ಕೇಂದ್ರ ಸರ್ಕಾರದ ಉತ್ತರ
ಭಾರತದಲ್ಲಿ 651 ಜಿಲ್ಲೆಗಳಲ್ಲಿ ಹವಾಮಾನ ಅಪಾಯ ಮೌಲ್ಯಮಾಪನ ನಡೆಸಲಾಗಿದ್ದು,
310 ಜಿಲ್ಲೆಗಳು ಅಸುರಕ್ಷಿತವೆಂದು ಗುರುತಿಸಲಾಗಿದೆ. NICRA ಯೋಜನೆಯಡಿ 151 ಅಪಾಯಕಾರಿ ಜಿಲ್ಲೆಗಳ 448 ಹವಾಮಾನ ಸಹಿಷ್ಣು ಗ್ರಾಮಗಳಲ್ಲಿ ತಂತ್ರಜ್ಞಾನ ಪ್ರದರ್ಶನ, ಬೀಜ ಬ್ಯಾಂಕ್‌ಗಳು, ಕಸ್ಟಮ್ ಹೈರಿಂಗ್ ಸೆಂಟರ್‌ಗಳು ಸ್ಥಾಪಿಸಲಾಗಿದೆ. 2014–24 ಅವಧಿಯಲ್ಲಿ ICAR 2900 ಹೊಸ ಬೆಳೆ ಜಾತಿಗಳನ್ನು ಬಿಡುಗಡೆಮಾಡಿದ್ದು, ಅವುಗಳಲ್ಲಿ 2661 ಜಾತಿಗಳು ಹವಾಮಾನ ಒತ್ತಡ ತಡೆದುಕೊಳ್ಳುತ್ತವೆ.
ಉದಾಹರಣೆಗೆ ಭತ್ತ,ಗೋಧಿ, ಸೋಯಾಬೀನ್, ಸಾಸಿವೆ, ಕಡಲೆಕಾಳು.
ಕಳೆದ ಮೂರು ವರ್ಷಗಳಲ್ಲಿ ಯೋಜನೆಗೆ ರೂ.1600 ಲಕ್ಷ–2550 ಲಕ್ಷಗಳವರೆಗೆ ಬಜೆಟ್ ವಿನಿಯೋಗ ಮಾಡಲಾಗಿದೆ ಎಂದು ಉತ್ತರಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು