11:03 AM Monday1 - December 2025
ಬ್ರೇಕಿಂಗ್ ನ್ಯೂಸ್
ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು… Kodagu | ಹುಣಸೂರು: ರೈತರ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ; ನಿಟ್ಟುಸಿರು… Udupi | ನದಿ, ವೃಕ್ಷ ಸಂರಕ್ಷಣೆ ಸೇರಿದಂತೆ ನವ ಸಂಕಲ್ಪಗಳ ಪಾಲನೆಗೆ ಪ್ರಧಾನಿ… Udupi | ಕೃಷ್ಣನಗರಿಯಲ್ಲಿ ಪ್ರಧಾನಿ ಮೋದಿಗೆ ಬೆಳ್ಳಿ ಕಡೆಗೋಲು ಕೊಡುಗೆ Udupi | ‘ಜೈ ಶ್ರೀ ಕೃಷ್ಣ’ ಎಂದು ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನಿ… ಪ್ರಧಾನಿ ಮೋದಿ ಇಂದು ಉಡುಪಿಗೆ: ಶ್ರೀಕೃಷ್ಣ ಮಠದ ಲಕ್ಷ ಕಂಠ ಗೀತಾ ಪಾರಾಯಣದಲ್ಲಿ… ಉಡುಪಿಗೆ ಪ್ರಧಾನಿ ಭೇಟಿ: ಎಸ್‌ಪಿಜಿ ಜತೆಗೆ ಖಾಕಿ ಸರ್ಪಗಾವಲು: ನಿಗದಿತ ಸಮಯಕ್ಕೆ ಮುಂಚಿತವಾಗಿಯೇ…

ಇತ್ತೀಚಿನ ಸುದ್ದಿ

ಕ್ಲಾಕ್ ಟವರ್ ಕೊನೆಗೂ ಉಪಯೋಗಕ್ಕೆ ಬಂತು !!: ಹುಟ್ಟುಡುಗೆಯಲ್ಲಿ ಸ್ನಾನಕ್ಕಿಳಿದ ಮಾನಸಿಕ ಅಸ್ವಸ್ಥ ವ್ಯಕ್ತಿ !

22/09/2021, 20:38

ಅನುಷ್ ಪಂಡಿತ್ ಮಂಗಳೂರು
Info.reporterkarnataka@gmail.com

ಮಂಗಳೂರು ಸ್ಮಾರ್ಟ್ ಸಿಟಿ ಕಂಪನಿಯ ಮಹತ್ವಾಕಾಂಕ್ಷೆಯ ಯೋಜನೆಗಳಲ್ಲೊಂದು ಎಂದು ಪರಿಗಣಿಸಲಾದ ಹೆಚ್ಚು ಕಡಿಮೆ 1 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಿದ ಕ್ಲಾಕ್ ಟವರ್ ಕೊನೆಗೂ ಉಪಯೋಗಕ್ಕೆ ಬಂತು ಎಂದು ಕಡಲನಗರಿಯ ನಾಗರಿಕರು ಆಡಿಕೊಳ್ಳಲಾರಂಭಿಸಿದ್ದಾರೆ. ಇದಕ್ಕೆ ಕಾರಣ ಕೂಡ ಉಂಟು. ಹಾಗಾದರೆ ಇದೇನು 

ಅಂತಹ ಮಹಾ ಕಾರಣ ಎಂಬ ಕುತೂಹಲ ನಿಮಗಿದೆಯೇ? ಮುಂದಕ್ಕೆ ಓದಿ…

ಹಳೆಯ ಕ್ಲಾಕ್ ಟವರ್ ತೆರವುಗೊಳಿಸಿ ದಶಕಗಳೇ ಉರುಳಿದ ಬಳಿಕ ಅದೇ ಜಾಗದಲ್ಲಿ ಮತ್ತೆ ಕ್ಲಾಕ್ ಟವರ್ ನಿರ್ಮಿಸುವ ಬಗ್ಗೆ ಮಂಗಳೂರಿನ ನಾಗರಿಕರ ತಂಡವೊಂದು ವಿರೋಧ ವ್ಯಕ್ತಪಡಿಸಿತ್ತು. ಪಾಲಿಕೆಯಲ್ಲಿ ಅಂದು ಪ್ರತಿಪಕ್ಷದ ಸಾಲಿನಲ್ಲಿದ್ದ ಬಿಜೆಪಿ ಕೂಡ ವಿರೋಧ ವ್ಯಕ್ತಪಡಿಸಿತ್ತು. ಆದರೆ ಹಠಕ್ಕೆ ಬಿದ್ದಂತೆ ಸ್ಮಾರ್ಟ್ ಸಿಟಿ ಯೋಜನೆಯಡಿ ಪ್ರಥಮ ಕಾಮಗಾರಿಯಾಗಿ ಕ್ಲಾಕ್ ಟವರ್ ಕೈಗೆತ್ತಿಕೊಳ್ಳಲಾಯಿತು. ಇದೀಗ ಕ್ಲಾಕ್ ಟವರ್ ಪೂರ್ಣ ಪ್ರಮಾಣದಲ್ಲಿ ಸಿದ್ಧವಾಗಿದೆ. ಜನರಿಗೆ ಟೈಮ್ ನೋಡಲು ಈ ಗಡಿಯಾರ ಗೋಪುರ ಬೇಕಿಲ್ಲದಿದ್ದರೂ ಬೇರೆ ರೀತಿಯಲ್ಲಿ ಅದು ಇಂದು ಉಪಯೋಗಕ್ಕೆ ಬಂದಿದೆ. ಅದೇನೆಂದರೆ, ಮಾನಸಿಕ ಅಸ್ವಸ್ಥ ವ್ಯಕ್ತಿಯೊಬ್ಬರು ಕ್ಲಾಕ್ ಟವರ್ ನ ಕಾರಂಜಿ ನೀರಿನಲ್ಲಿ ಹುಟ್ಟುಡುಗೆಯಲ್ಲಿ ಸ್ನಾನಕ್ಕಿಳಿದಿದ್ದಾರೆ. ಪಬ್ಲಿಕ್ ನಳ್ಳಿಗಳು ಇಲ್ಲದ ಈ ಕಾಲದಲ್ಲಿ ಸಿಕ್ಕಿದ್ದು ಅವಕಾಶ ಎಂಬಂತೆ ಮಾನಸಿಕ ಅಸ್ವಸ್ಥ ವ್ಯಕ್ತಿ ಇಲ್ಲಿ ಜಳಕ ಮಾಡಿದ್ದಾರೆ. ನಗರದಲ್ಲಿ ಸುತ್ತುವ ಜನರು ಈ ದೃಶ್ಯವನ್ನು ಕಂಡು ತೆಪ್ಪಗೆ ಮುಂದು ಸರಿದಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು