11:40 PM Sunday25 - January 2026
ಬ್ರೇಕಿಂಗ್ ನ್ಯೂಸ್
ರಾಜ್ಯದಲ್ಲಿದ್ದಾರೆ ಒಟ್ಟು 10,365 ಟ್ರಾನ್ಸ್ ಜೆಂಡರ್: ಸಮೀಕ್ಷೆಯಲ್ಲಿ ಲಿಂಗತ್ವ ಅಲ್ಪಸಂಖ್ಯಾತರ ಸ್ಥಿತಿಗತಿ ಬಗ್ಗೆ… ಹುಬ್ಬಳ್ಳಿ | ಕೊಳೆಗೇರಿ ನಿವಾಸಿಗಳ ಮುಖ್ಯವಾಹಿನಿಗೆ ತರಲು ಬೃಹತ್ ಪ್ರಮಾಣದಲ್ಲಿ ಮನೆ ವಿತರಣೆ:… ಪ್ರೀತಿಯಲ್ಲಿ ಒಂದಾದ ಭಾರತ- ಚೀನಾ!: ಚೈನಾದ ಬೆಡಗಿಯ ಕೈ ಹಿಡಿದ ಕಾಫಿನಾಡ ಯುವಕ ಗೋಣಿಕೊಪ್ಪ- ತಿತಿಮತಿ ಮುಖ್ಯ ರಸ್ತೆಯಲ್ಲಿ‌ ರಾತ್ರಿ ವ್ಯಾಘ್ರನ ದರ್ಶನ; ಭಯಭೀತರಾದ ಗ್ರಾಮಸ್ಥರು ಸದನದ ಪಾವಿತ್ರ್ಯತೆ ಹಾಳು ಮಾಡುವ ಕೆಲಸ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಟೀಕೆ ನರೇಗಾ ಉಳಿಸಲು ಕಾಂಗ್ರೆಸ್ ಉಪವಾಸ ಸತ್ಯಾಗ್ರಹ ಕೋಲಾರದಲ್ಲಿ ಸರಕಾರದಿಂದಲೇ ವೈದ್ಯಕೀಯ ಕಾಲೇಜು: ಜಿಲ್ಲಾ ಉಸ್ತುವಾರಿ ಸಚಿವ ಬೈರತಿ ಸುರೇಶ್ ಘೋಷಣೆ ಶಿಕ್ಷಣ ಮತ್ತು ಕೈಗಾರಿಕೆ ಒಗ್ಗೂಡಿದರೆ ಮಾತ್ರ ನಾವೀನ್ಯತೆ ಹೆಚ್ಚಿನ ಅವಕಾಶ ಸಿಗಲಿದೆ: ಇಸ್ರೋ… ಹುಣಸೂರಿನ ಜುವೆಲ್ಲರಿ ದರೋಡೆ ಪ್ರಕರಣ: ಇಬ್ಬರು ಆರೋಪಿಗಳ ಬಿಹಾರದಲ್ಲಿ ಬಂಧನ ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆ ಅನುಷ್ಠಾನದಲ್ಲಿ ರಾಜ್ಯಕ್ಕೆ ದ್ವಿತೀಯ ಸ್ಥಾನ: ಕೃಷಿ…

ಇತ್ತೀಚಿನ ಸುದ್ದಿ

ಕ್ಲಾಕ್ ಟವರ್ ಕೊನೆಗೂ ಉಪಯೋಗಕ್ಕೆ ಬಂತು !!: ಹುಟ್ಟುಡುಗೆಯಲ್ಲಿ ಸ್ನಾನಕ್ಕಿಳಿದ ಮಾನಸಿಕ ಅಸ್ವಸ್ಥ ವ್ಯಕ್ತಿ !

22/09/2021, 20:38

ಅನುಷ್ ಪಂಡಿತ್ ಮಂಗಳೂರು
Info.reporterkarnataka@gmail.com

ಮಂಗಳೂರು ಸ್ಮಾರ್ಟ್ ಸಿಟಿ ಕಂಪನಿಯ ಮಹತ್ವಾಕಾಂಕ್ಷೆಯ ಯೋಜನೆಗಳಲ್ಲೊಂದು ಎಂದು ಪರಿಗಣಿಸಲಾದ ಹೆಚ್ಚು ಕಡಿಮೆ 1 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಿದ ಕ್ಲಾಕ್ ಟವರ್ ಕೊನೆಗೂ ಉಪಯೋಗಕ್ಕೆ ಬಂತು ಎಂದು ಕಡಲನಗರಿಯ ನಾಗರಿಕರು ಆಡಿಕೊಳ್ಳಲಾರಂಭಿಸಿದ್ದಾರೆ. ಇದಕ್ಕೆ ಕಾರಣ ಕೂಡ ಉಂಟು. ಹಾಗಾದರೆ ಇದೇನು 

ಅಂತಹ ಮಹಾ ಕಾರಣ ಎಂಬ ಕುತೂಹಲ ನಿಮಗಿದೆಯೇ? ಮುಂದಕ್ಕೆ ಓದಿ…

ಹಳೆಯ ಕ್ಲಾಕ್ ಟವರ್ ತೆರವುಗೊಳಿಸಿ ದಶಕಗಳೇ ಉರುಳಿದ ಬಳಿಕ ಅದೇ ಜಾಗದಲ್ಲಿ ಮತ್ತೆ ಕ್ಲಾಕ್ ಟವರ್ ನಿರ್ಮಿಸುವ ಬಗ್ಗೆ ಮಂಗಳೂರಿನ ನಾಗರಿಕರ ತಂಡವೊಂದು ವಿರೋಧ ವ್ಯಕ್ತಪಡಿಸಿತ್ತು. ಪಾಲಿಕೆಯಲ್ಲಿ ಅಂದು ಪ್ರತಿಪಕ್ಷದ ಸಾಲಿನಲ್ಲಿದ್ದ ಬಿಜೆಪಿ ಕೂಡ ವಿರೋಧ ವ್ಯಕ್ತಪಡಿಸಿತ್ತು. ಆದರೆ ಹಠಕ್ಕೆ ಬಿದ್ದಂತೆ ಸ್ಮಾರ್ಟ್ ಸಿಟಿ ಯೋಜನೆಯಡಿ ಪ್ರಥಮ ಕಾಮಗಾರಿಯಾಗಿ ಕ್ಲಾಕ್ ಟವರ್ ಕೈಗೆತ್ತಿಕೊಳ್ಳಲಾಯಿತು. ಇದೀಗ ಕ್ಲಾಕ್ ಟವರ್ ಪೂರ್ಣ ಪ್ರಮಾಣದಲ್ಲಿ ಸಿದ್ಧವಾಗಿದೆ. ಜನರಿಗೆ ಟೈಮ್ ನೋಡಲು ಈ ಗಡಿಯಾರ ಗೋಪುರ ಬೇಕಿಲ್ಲದಿದ್ದರೂ ಬೇರೆ ರೀತಿಯಲ್ಲಿ ಅದು ಇಂದು ಉಪಯೋಗಕ್ಕೆ ಬಂದಿದೆ. ಅದೇನೆಂದರೆ, ಮಾನಸಿಕ ಅಸ್ವಸ್ಥ ವ್ಯಕ್ತಿಯೊಬ್ಬರು ಕ್ಲಾಕ್ ಟವರ್ ನ ಕಾರಂಜಿ ನೀರಿನಲ್ಲಿ ಹುಟ್ಟುಡುಗೆಯಲ್ಲಿ ಸ್ನಾನಕ್ಕಿಳಿದಿದ್ದಾರೆ. ಪಬ್ಲಿಕ್ ನಳ್ಳಿಗಳು ಇಲ್ಲದ ಈ ಕಾಲದಲ್ಲಿ ಸಿಕ್ಕಿದ್ದು ಅವಕಾಶ ಎಂಬಂತೆ ಮಾನಸಿಕ ಅಸ್ವಸ್ಥ ವ್ಯಕ್ತಿ ಇಲ್ಲಿ ಜಳಕ ಮಾಡಿದ್ದಾರೆ. ನಗರದಲ್ಲಿ ಸುತ್ತುವ ಜನರು ಈ ದೃಶ್ಯವನ್ನು ಕಂಡು ತೆಪ್ಪಗೆ ಮುಂದು ಸರಿದಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು