5:54 PM Thursday12 - March 2026
ಬ್ರೇಕಿಂಗ್ ನ್ಯೂಸ್
ರಾಯಚೂರು | ಒಳ ಮೀಸಲಾತಿ ಹೋರಾಟ: ಪೆಟ್ರೋಲ್ ಸುರಿದುಕೊಂಡು ಯುವಕ ಆತ್ಮಹತ್ಯೆಗೆ ಯತ್ನ ಮಲೆಮಹದೇಶ್ವರ ಬೆಟ್ಟದ ರಸ್ತೆಯಲ್ಲಿ ಮತ್ತೆ ಚಿರತೆ ಪ್ರತ್ಯಕ್ಷ: ಭಕ್ತರಲ್ಲಿ ಹೆಚ್ಚಿದ ಆತಂಕ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್‌: ಮೌಲ್ಯ 10 ಪಟ್ಟು ಹೆಚ್ಚು,… ಪೆಟಾ ಮೇಲ್ಮನವಿ ವಜಾ: ರಾಜ್ಯದೆಲ್ಲೆಡೆ ಕಂಬಳ ಆಯೋಜನೆಗೆ ಸುಪ್ರೀಂ ಕೋರ್ಟ್ ಗ್ರೀನ್ ಸಿಗ್ನಲ್ ನಿಗಮಗಳಿಗೆ ಅನುದಾನ ಕಡಿತ, ಆಸ್ಪತ್ರೆಗಳಲ್ಲಿ ಔಷಧಿ ಇಲ್ಲ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಟೀಕೆ ಚಿಕ್ಕಮಗಳೂರು: ಹಸುವನ್ನು ತುಳಿದು ಕೊಂದ ಕಾಡಾನೆ; ಮಾಣಿಮಕ್ಕಿ ಗ್ರಾಮಸ್ಥರಲ್ಲಿ ಆತಂಕ ತೀರ್ಥಹಳ್ಳಿ: ಕುವೆಂಪು ಜೈವಿಕ ಅರಣ್ಯದಲ್ಲಿ ಹತ್ತಿಕೊಂಡ ಬೆಂಕಿ; ಅರಣ್ಯಾಧಿಕಾರಿಗಳ ದೌಡು ಝೂ ಅಭಿ ಇನ್ನಿಲ್ಲ: ಕಾಲು ನೋವಿನಿಂದ ಬಳಲುತ್ತಿದ್ದ ಮತ್ತಿಗೋಡು ಶಿಬಿರದ ಸಾಕಾನೆ ವಿವಿಧ ಬೇಡಿಕೆ ಆಗ್ರಹಿಸಿ ವಿದ್ಯುತ್ ಗುತ್ತಿಗೆದಾರರ ಸಂಘದಿಂದ ಮಾ.11ರಂದು ಪ್ರತಿಭಟನೆ ಮೋದಿ ದೇಶದ ಮಾರ್ಯಾದೆ ಹಾಳು‌‌ ಮಾಡುತ್ತಿದ್ದಾರೆ: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕಟು‌…

ಇತ್ತೀಚಿನ ಸುದ್ದಿ

ಕ್ಲಾಕ್ ಟವರ್ ಕೊನೆಗೂ ಉಪಯೋಗಕ್ಕೆ ಬಂತು !!: ಹುಟ್ಟುಡುಗೆಯಲ್ಲಿ ಸ್ನಾನಕ್ಕಿಳಿದ ಮಾನಸಿಕ ಅಸ್ವಸ್ಥ ವ್ಯಕ್ತಿ !

22/09/2021, 20:38

ಅನುಷ್ ಪಂಡಿತ್ ಮಂಗಳೂರು
Info.reporterkarnataka@gmail.com

ಮಂಗಳೂರು ಸ್ಮಾರ್ಟ್ ಸಿಟಿ ಕಂಪನಿಯ ಮಹತ್ವಾಕಾಂಕ್ಷೆಯ ಯೋಜನೆಗಳಲ್ಲೊಂದು ಎಂದು ಪರಿಗಣಿಸಲಾದ ಹೆಚ್ಚು ಕಡಿಮೆ 1 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಿದ ಕ್ಲಾಕ್ ಟವರ್ ಕೊನೆಗೂ ಉಪಯೋಗಕ್ಕೆ ಬಂತು ಎಂದು ಕಡಲನಗರಿಯ ನಾಗರಿಕರು ಆಡಿಕೊಳ್ಳಲಾರಂಭಿಸಿದ್ದಾರೆ. ಇದಕ್ಕೆ ಕಾರಣ ಕೂಡ ಉಂಟು. ಹಾಗಾದರೆ ಇದೇನು 

ಅಂತಹ ಮಹಾ ಕಾರಣ ಎಂಬ ಕುತೂಹಲ ನಿಮಗಿದೆಯೇ? ಮುಂದಕ್ಕೆ ಓದಿ…

ಹಳೆಯ ಕ್ಲಾಕ್ ಟವರ್ ತೆರವುಗೊಳಿಸಿ ದಶಕಗಳೇ ಉರುಳಿದ ಬಳಿಕ ಅದೇ ಜಾಗದಲ್ಲಿ ಮತ್ತೆ ಕ್ಲಾಕ್ ಟವರ್ ನಿರ್ಮಿಸುವ ಬಗ್ಗೆ ಮಂಗಳೂರಿನ ನಾಗರಿಕರ ತಂಡವೊಂದು ವಿರೋಧ ವ್ಯಕ್ತಪಡಿಸಿತ್ತು. ಪಾಲಿಕೆಯಲ್ಲಿ ಅಂದು ಪ್ರತಿಪಕ್ಷದ ಸಾಲಿನಲ್ಲಿದ್ದ ಬಿಜೆಪಿ ಕೂಡ ವಿರೋಧ ವ್ಯಕ್ತಪಡಿಸಿತ್ತು. ಆದರೆ ಹಠಕ್ಕೆ ಬಿದ್ದಂತೆ ಸ್ಮಾರ್ಟ್ ಸಿಟಿ ಯೋಜನೆಯಡಿ ಪ್ರಥಮ ಕಾಮಗಾರಿಯಾಗಿ ಕ್ಲಾಕ್ ಟವರ್ ಕೈಗೆತ್ತಿಕೊಳ್ಳಲಾಯಿತು. ಇದೀಗ ಕ್ಲಾಕ್ ಟವರ್ ಪೂರ್ಣ ಪ್ರಮಾಣದಲ್ಲಿ ಸಿದ್ಧವಾಗಿದೆ. ಜನರಿಗೆ ಟೈಮ್ ನೋಡಲು ಈ ಗಡಿಯಾರ ಗೋಪುರ ಬೇಕಿಲ್ಲದಿದ್ದರೂ ಬೇರೆ ರೀತಿಯಲ್ಲಿ ಅದು ಇಂದು ಉಪಯೋಗಕ್ಕೆ ಬಂದಿದೆ. ಅದೇನೆಂದರೆ, ಮಾನಸಿಕ ಅಸ್ವಸ್ಥ ವ್ಯಕ್ತಿಯೊಬ್ಬರು ಕ್ಲಾಕ್ ಟವರ್ ನ ಕಾರಂಜಿ ನೀರಿನಲ್ಲಿ ಹುಟ್ಟುಡುಗೆಯಲ್ಲಿ ಸ್ನಾನಕ್ಕಿಳಿದಿದ್ದಾರೆ. ಪಬ್ಲಿಕ್ ನಳ್ಳಿಗಳು ಇಲ್ಲದ ಈ ಕಾಲದಲ್ಲಿ ಸಿಕ್ಕಿದ್ದು ಅವಕಾಶ ಎಂಬಂತೆ ಮಾನಸಿಕ ಅಸ್ವಸ್ಥ ವ್ಯಕ್ತಿ ಇಲ್ಲಿ ಜಳಕ ಮಾಡಿದ್ದಾರೆ. ನಗರದಲ್ಲಿ ಸುತ್ತುವ ಜನರು ಈ ದೃಶ್ಯವನ್ನು ಕಂಡು ತೆಪ್ಪಗೆ ಮುಂದು ಸರಿದಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು