9:15 AM Thursday30 - April 2026
ಬ್ರೇಕಿಂಗ್ ನ್ಯೂಸ್
ಉದ್ಯೋಗ ಖಾತ್ರಿ ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ವ್ಯಕ್ತಿ ಸಾವು: ಬಿಸಿಲಿನ ತಾಪಮಾನಕ್ಕೆ… ರಾಜ್ಯದಲ್ಲಿ ಹೊಸ ಕನಿಷ್ಠ ವೇತನ ಜಾರಿಗೆ ತರಲು ಯತ್ನ: ಸಂಡೂರಿನಲ್ಲಿ ಕಾರ್ಮಿಕ ಸಚಿವ… ಬಿಜೆಪಿ ಪಕ್ಷದಿಂದಲೇ ಮಹಿಳೆಯರಿಗೆ ಶೇ. 30ರಷ್ಟು ಮೀಸಲಾತಿ ಪ್ರಕಟಿಸಲಿ: ಸಚಿವ ಸಂತೋಷ್ ಲಾಡ್… Mangaluru | ಕುಕ್ಕರ್‌ ಬಾಂಬ್‌ ಸ್ಫೋಟದ ಅಪರಾಧಿಗೆ ಜೀವಾವಧಿ ಶಿಕ್ಷೆ ವಿಧಿಸಬೇಕಿತ್ತು: ಸಂತ್ರಸ್ತ… ಗಾದಿ ಪೈಪೋಟಿ | ದೆಹಲಿಗೆ ಹೋಗಲು 50 ಶಾಸಕರ ಟಿಕೆಟ್‌ ಬುಕ್ಕಿಂಗ್‌: ಕೇಂದ್ರ… Koppala | ಕುಷ್ಟಗಿಯಲ್ಲಿ ಗುಡುಗು ಸಹಿತ ಮಳೆ: ಸಿಡಿಲು ಬಡಿದು ವ್ಯಕ್ತಿ ಬಲಿ ಕೊಡಗು-ಮೈಸೂರು ರಾಜ್ಯ ಹೆದ್ದಾರಿ ಬಳಿ ಹುಲಿ ದಾಳಿಗೆ ಹಸು ಬಲಿ: ರೊಚ್ಚಿಗೆದ್ದ ಗ್ರಾಮಸ್ಥರಿಂದ… New Delhi | 228 ಪ್ರಯಾಣಿಕರಿದ್ದ ವಿಮಾನದಲ್ಲಿ ಬೆಂಕಿ: ಸ್ವಲ್ಪದರಲ್ಲೇ ತಪ್ಪಿತು ಮತ್ತೊಂದು… ಶಿಕ್ಷಕರೇ ಇಲ್ಲದ ಶಾಲೆಗಳಿಗೆ ಶೇ. 94 ಬಂದಿದ್ದು ಹೇಗೆ? ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ದೊಡ್ಡ… ತಂದೆ ಬೈದ ಕ್ಷುಲ್ಲಕ ಕಾರಣಕ್ಕೆ ಯುವತಿ ಆತ್ಮಹತ್ಯೆಗೆ ಶರಣು

ಇತ್ತೀಚಿನ ಸುದ್ದಿ

ಕ್ಲಾಕ್ ಟವರ್ ಕೊನೆಗೂ ಉಪಯೋಗಕ್ಕೆ ಬಂತು !!: ಹುಟ್ಟುಡುಗೆಯಲ್ಲಿ ಸ್ನಾನಕ್ಕಿಳಿದ ಮಾನಸಿಕ ಅಸ್ವಸ್ಥ ವ್ಯಕ್ತಿ !

22/09/2021, 20:38

ಅನುಷ್ ಪಂಡಿತ್ ಮಂಗಳೂರು
Info.reporterkarnataka@gmail.com

ಮಂಗಳೂರು ಸ್ಮಾರ್ಟ್ ಸಿಟಿ ಕಂಪನಿಯ ಮಹತ್ವಾಕಾಂಕ್ಷೆಯ ಯೋಜನೆಗಳಲ್ಲೊಂದು ಎಂದು ಪರಿಗಣಿಸಲಾದ ಹೆಚ್ಚು ಕಡಿಮೆ 1 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಿದ ಕ್ಲಾಕ್ ಟವರ್ ಕೊನೆಗೂ ಉಪಯೋಗಕ್ಕೆ ಬಂತು ಎಂದು ಕಡಲನಗರಿಯ ನಾಗರಿಕರು ಆಡಿಕೊಳ್ಳಲಾರಂಭಿಸಿದ್ದಾರೆ. ಇದಕ್ಕೆ ಕಾರಣ ಕೂಡ ಉಂಟು. ಹಾಗಾದರೆ ಇದೇನು 

ಅಂತಹ ಮಹಾ ಕಾರಣ ಎಂಬ ಕುತೂಹಲ ನಿಮಗಿದೆಯೇ? ಮುಂದಕ್ಕೆ ಓದಿ…

ಹಳೆಯ ಕ್ಲಾಕ್ ಟವರ್ ತೆರವುಗೊಳಿಸಿ ದಶಕಗಳೇ ಉರುಳಿದ ಬಳಿಕ ಅದೇ ಜಾಗದಲ್ಲಿ ಮತ್ತೆ ಕ್ಲಾಕ್ ಟವರ್ ನಿರ್ಮಿಸುವ ಬಗ್ಗೆ ಮಂಗಳೂರಿನ ನಾಗರಿಕರ ತಂಡವೊಂದು ವಿರೋಧ ವ್ಯಕ್ತಪಡಿಸಿತ್ತು. ಪಾಲಿಕೆಯಲ್ಲಿ ಅಂದು ಪ್ರತಿಪಕ್ಷದ ಸಾಲಿನಲ್ಲಿದ್ದ ಬಿಜೆಪಿ ಕೂಡ ವಿರೋಧ ವ್ಯಕ್ತಪಡಿಸಿತ್ತು. ಆದರೆ ಹಠಕ್ಕೆ ಬಿದ್ದಂತೆ ಸ್ಮಾರ್ಟ್ ಸಿಟಿ ಯೋಜನೆಯಡಿ ಪ್ರಥಮ ಕಾಮಗಾರಿಯಾಗಿ ಕ್ಲಾಕ್ ಟವರ್ ಕೈಗೆತ್ತಿಕೊಳ್ಳಲಾಯಿತು. ಇದೀಗ ಕ್ಲಾಕ್ ಟವರ್ ಪೂರ್ಣ ಪ್ರಮಾಣದಲ್ಲಿ ಸಿದ್ಧವಾಗಿದೆ. ಜನರಿಗೆ ಟೈಮ್ ನೋಡಲು ಈ ಗಡಿಯಾರ ಗೋಪುರ ಬೇಕಿಲ್ಲದಿದ್ದರೂ ಬೇರೆ ರೀತಿಯಲ್ಲಿ ಅದು ಇಂದು ಉಪಯೋಗಕ್ಕೆ ಬಂದಿದೆ. ಅದೇನೆಂದರೆ, ಮಾನಸಿಕ ಅಸ್ವಸ್ಥ ವ್ಯಕ್ತಿಯೊಬ್ಬರು ಕ್ಲಾಕ್ ಟವರ್ ನ ಕಾರಂಜಿ ನೀರಿನಲ್ಲಿ ಹುಟ್ಟುಡುಗೆಯಲ್ಲಿ ಸ್ನಾನಕ್ಕಿಳಿದಿದ್ದಾರೆ. ಪಬ್ಲಿಕ್ ನಳ್ಳಿಗಳು ಇಲ್ಲದ ಈ ಕಾಲದಲ್ಲಿ ಸಿಕ್ಕಿದ್ದು ಅವಕಾಶ ಎಂಬಂತೆ ಮಾನಸಿಕ ಅಸ್ವಸ್ಥ ವ್ಯಕ್ತಿ ಇಲ್ಲಿ ಜಳಕ ಮಾಡಿದ್ದಾರೆ. ನಗರದಲ್ಲಿ ಸುತ್ತುವ ಜನರು ಈ ದೃಶ್ಯವನ್ನು ಕಂಡು ತೆಪ್ಪಗೆ ಮುಂದು ಸರಿದಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು