1:35 PM Saturday8 - August 2026
ಬ್ರೇಕಿಂಗ್ ನ್ಯೂಸ್
ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:… *10 ಲಕ್ಷ ರೂ. ಲಂಚಕ್ಕೆ ಬೇಡಿಕೆ; ಲೋಕಾಯುಕ್ತ ಬಲೆಗೆ ಬಿದ್ದ ಹುಣಸೂರು ಉಪವಿಭಾಗಾಧಿಕಾರಿ… ವಿಧಾನ ಪರಿಷತ್‌ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ ರಾಜೀನಾಮೆ ಸಂಪುಟ ವಿಸ್ತರಣೆ | ಕೊನೆ ಕ್ಷಣದಲ್ಲಿ 3 ಬಾರಿ ಪಟ್ಟಿ ಬದಲು: ಗಾಯತ್ರಿ…

ಇತ್ತೀಚಿನ ಸುದ್ದಿ

ಕ್ಲಾಕ್ ಟವರ್ ಕೊನೆಗೂ ಉಪಯೋಗಕ್ಕೆ ಬಂತು !!: ಹುಟ್ಟುಡುಗೆಯಲ್ಲಿ ಸ್ನಾನಕ್ಕಿಳಿದ ಮಾನಸಿಕ ಅಸ್ವಸ್ಥ ವ್ಯಕ್ತಿ !

22/09/2021, 20:38

ಅನುಷ್ ಪಂಡಿತ್ ಮಂಗಳೂರು
Info.reporterkarnataka@gmail.com

ಮಂಗಳೂರು ಸ್ಮಾರ್ಟ್ ಸಿಟಿ ಕಂಪನಿಯ ಮಹತ್ವಾಕಾಂಕ್ಷೆಯ ಯೋಜನೆಗಳಲ್ಲೊಂದು ಎಂದು ಪರಿಗಣಿಸಲಾದ ಹೆಚ್ಚು ಕಡಿಮೆ 1 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಿದ ಕ್ಲಾಕ್ ಟವರ್ ಕೊನೆಗೂ ಉಪಯೋಗಕ್ಕೆ ಬಂತು ಎಂದು ಕಡಲನಗರಿಯ ನಾಗರಿಕರು ಆಡಿಕೊಳ್ಳಲಾರಂಭಿಸಿದ್ದಾರೆ. ಇದಕ್ಕೆ ಕಾರಣ ಕೂಡ ಉಂಟು. ಹಾಗಾದರೆ ಇದೇನು 

ಅಂತಹ ಮಹಾ ಕಾರಣ ಎಂಬ ಕುತೂಹಲ ನಿಮಗಿದೆಯೇ? ಮುಂದಕ್ಕೆ ಓದಿ…

ಹಳೆಯ ಕ್ಲಾಕ್ ಟವರ್ ತೆರವುಗೊಳಿಸಿ ದಶಕಗಳೇ ಉರುಳಿದ ಬಳಿಕ ಅದೇ ಜಾಗದಲ್ಲಿ ಮತ್ತೆ ಕ್ಲಾಕ್ ಟವರ್ ನಿರ್ಮಿಸುವ ಬಗ್ಗೆ ಮಂಗಳೂರಿನ ನಾಗರಿಕರ ತಂಡವೊಂದು ವಿರೋಧ ವ್ಯಕ್ತಪಡಿಸಿತ್ತು. ಪಾಲಿಕೆಯಲ್ಲಿ ಅಂದು ಪ್ರತಿಪಕ್ಷದ ಸಾಲಿನಲ್ಲಿದ್ದ ಬಿಜೆಪಿ ಕೂಡ ವಿರೋಧ ವ್ಯಕ್ತಪಡಿಸಿತ್ತು. ಆದರೆ ಹಠಕ್ಕೆ ಬಿದ್ದಂತೆ ಸ್ಮಾರ್ಟ್ ಸಿಟಿ ಯೋಜನೆಯಡಿ ಪ್ರಥಮ ಕಾಮಗಾರಿಯಾಗಿ ಕ್ಲಾಕ್ ಟವರ್ ಕೈಗೆತ್ತಿಕೊಳ್ಳಲಾಯಿತು. ಇದೀಗ ಕ್ಲಾಕ್ ಟವರ್ ಪೂರ್ಣ ಪ್ರಮಾಣದಲ್ಲಿ ಸಿದ್ಧವಾಗಿದೆ. ಜನರಿಗೆ ಟೈಮ್ ನೋಡಲು ಈ ಗಡಿಯಾರ ಗೋಪುರ ಬೇಕಿಲ್ಲದಿದ್ದರೂ ಬೇರೆ ರೀತಿಯಲ್ಲಿ ಅದು ಇಂದು ಉಪಯೋಗಕ್ಕೆ ಬಂದಿದೆ. ಅದೇನೆಂದರೆ, ಮಾನಸಿಕ ಅಸ್ವಸ್ಥ ವ್ಯಕ್ತಿಯೊಬ್ಬರು ಕ್ಲಾಕ್ ಟವರ್ ನ ಕಾರಂಜಿ ನೀರಿನಲ್ಲಿ ಹುಟ್ಟುಡುಗೆಯಲ್ಲಿ ಸ್ನಾನಕ್ಕಿಳಿದಿದ್ದಾರೆ. ಪಬ್ಲಿಕ್ ನಳ್ಳಿಗಳು ಇಲ್ಲದ ಈ ಕಾಲದಲ್ಲಿ ಸಿಕ್ಕಿದ್ದು ಅವಕಾಶ ಎಂಬಂತೆ ಮಾನಸಿಕ ಅಸ್ವಸ್ಥ ವ್ಯಕ್ತಿ ಇಲ್ಲಿ ಜಳಕ ಮಾಡಿದ್ದಾರೆ. ನಗರದಲ್ಲಿ ಸುತ್ತುವ ಜನರು ಈ ದೃಶ್ಯವನ್ನು ಕಂಡು ತೆಪ್ಪಗೆ ಮುಂದು ಸರಿದಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು