10:29 AM Friday28 - November 2025
ಬ್ರೇಕಿಂಗ್ ನ್ಯೂಸ್
ಪ್ರಧಾನಿ ಮೋದಿ ಇಂದು ಉಡುಪಿಗೆ: ಶ್ರೀಕೃಷ್ಣ ಮಠದ ಲಕ್ಷ ಕಂಠ ಗೀತಾ ಪಾರಾಯಣದಲ್ಲಿ… ಉಡುಪಿಗೆ ಪ್ರಧಾನಿ ಭೇಟಿ: ಎಸ್‌ಪಿಜಿ ಜತೆಗೆ ಖಾಕಿ ಸರ್ಪಗಾವಲು: ನಿಗದಿತ ಸಮಯಕ್ಕೆ ಮುಂಚಿತವಾಗಿಯೇ… ಶಾಲೆಯಂಗಳದಲ್ಲಿ ತಾರಾಲಯ: ಗ್ರಾಮೀಣ ಮಕ್ಕಳಲ್ಲಿ ಖಗೋಳ ವಿಜ್ಞಾನ ಕೌತುಕ ಬಿತ್ತುವ ಗುರಿ; ಮುಖ್ಯಮಂತ್ರಿ… Bhadravathi | ಪತಿಯ ಕಿರುಕುಳ: ಡೆತ್ ನೋಟ್ ಬರೆದು ನಾಲೆಗೆ ಹಾರಿ ನವ… ವಿದ್ಯುತ್ ಲಿಂಕ್ ಲೈನ್‌ ಸ್ಥಾಪಿಸಿ, ಸಮರ್ಪಕ ವಿದ್ಯುತ್ ಪೂರೈಕೆಗೆ ಆದ್ಯತೆ: ಸಚಿವ ಕೆ.ಜೆ.ಜಾರ್ಜ್ ಹೂವುಗಳ ಹರಾಜು ಪ್ರಕ್ರಿಯೆ ಮಾದರಿಯಲ್ಲಿ ಔಷಧೀಯ ಗಿಡಮೂಲಿಕೆಗಳ ಹರಾಜು ಅವಶ್ಯಕ: ಮುಖ್ಯ ಕಾರ್ಯದರ್ಶಿ… ಟೈಯರ್ ಸ್ಫೋಟ: ನಿಯಂತ್ರಣ ಕಳೆದುಕೊಂಡು ಪಿಕ್ ಅಪ್ ಪಲ್ಟಿ; ಚಾಲಕನಿಗೆ ತೀವ್ರ ಗಾಯ ಛಲವಾದಿ ಹಾಗೂ ಆರ್. ಅಶೋಕ್ ಗೆ ರಾಜಕೀಯ ವಿವೇಕ ಇಲ್ಲ: ಸಚಿವ ಎನ್.… ಸಂತಾನ ಹರಣ ಚಿಕಿತ್ಸೆ ಬಳಿಕವೂ ಗರ್ಭಿಣಿಯಾದ ಪತ್ನಿ: ಪತಿಯಿಂದ ವೈದ್ಯರಿಗೆ ಬೆದರಿಕೆ ಆರೋಪ:… ರಾಜ್ಯದ ಕ್ರಿಕೆಟ್ ಪಟುಗಳಿಗೆ ತಲಾ 10 ಲಕ್ಷ ನಗದು ಬಹುಮಾನ ಜತೆಗೆ ಸರ್ಕಾರಿ…

ಇತ್ತೀಚಿನ ಸುದ್ದಿ

ಕಲರ್ಸ್ ಕನ್ನಡ ಚಾನೆಲ್ ನಲ್ಲಿ ಮತ್ತೆರೆಡು ಹೊಸ ಧಾರಾವಾಹಿಗಳು: ‘ವಧು’ ಮತ್ತು ‘ಯಜಮಾನ’ ಆರಂಭ

29/01/2025, 16:21

ಮಂಗಳೂರು(reporterkarnataka.com): ಕನ್ನಡ ವೀಕ್ಷಕರ ಮನಸಿಗೆ ಲಗ್ಗೆಯಿಡುವ ಕತೆಗಳನ್ನು ಹೇಳುತ್ತಾ ಬಂದಿರುವ ಕಲರ್ಸ್ ಕನ್ನಡ ಚಾನೆಲ್, ಇದೀಗ ಮತ್ತೆರೆಡು ಹೊಸ ಧಾರಾವಾಹಿಗಳನ್ನು ನಿಮ್ಮ ಮುಂದೆ ತರಲು ಸಜ್ಜಾಗಿದೆ. ‘ವಧು’ ಮತ್ತು ‘ಯಜಮಾನ’ ದೈನಿಕ ಧಾರಾವಾಹಿಗಳು ಜ,27ರಂದು ಜೋಡಿ ಕತೆಗಳಾದ ಡಿವೋರ್ಸ್ ಲಾಯರ್ ಮದುವೆ ಕತೆ ‘ವಧು’ ರಾತ್ರಿ 9.30ಕ್ಕೆ ಪ್ರಸಾರವಾಗಲಿದೆ. ಕಾಂಟ್ರಾಕ್ಟ್ ಮದುವೆಯ ಕತೆ ‘ಯಜಮಾನ’ ರಾತ್ರಿ 10 ಗಂಟೆಗೆ ಪ್ರಸಾರವಾಗಲಿದೆ. ಸಂಬಂಧಗಳನ್ನು ಪ್ರೀತಿಸುವ, ಅಷ್ಟೇ ಗೌರವಿಸುವ ‘ವಧು’ ಒಬ್ಬ ಅವಿವಾಹಿತೆ, ವೃತ್ತಿಯಲ್ಲಿ ಡಿವೋರ್ಸ್ ಲಾಯರ್. ಮನುಷ್ಯ ಸಂಬಂಧಗಳ ಬಗ್ಗೆ ಅವಳಿಗಿರುವ ಗೌರವವೇ ಅವಳನ್ನು ತನ್ನ ವೃತ್ತಿಯಲ್ಲಿ ಹಿಂದುಳಿಯುವಂತೆ ಮಾಡಿದೆ ಅಂದರೂ ತಪ್ಪಾಗದು!. ಗಂಡ ಹೆಂಡತಿ ನಡುವೆ ಬಿರುಕು ಮೂಡಿ ವಿಚ್ಛೇದನ ಕೋರಿ ಬಂದ ಜೋಡಿಗಳ ನಡುವೆ ಸಾಮರಸ್ಯ ಮೂಡಿಸಿ ಅವರನ್ನು ಒಂದು ಮಾಡುವುದರಲ್ಲೇ ಅವಳಿಗೆ ಆಸಕ್ತಿ. ಹೀಗಿರುವಾಗ ಒಂದು ಮಹತ್ವದ ಕೇಸು ಎಲ್ಲವನ್ನೂ ತಲೆಕೆಳಗೆ ಮಾಡುತ್ತದೆ. ಮೋಸ್ಟ್ ಸಕ್ಸಸ್ ಫುಲ್ ಬ್ಯುಸಿನೆಸ್ ಮ್ಯಾನ್ ಸಾರ್ಥಕ್ ದಾಂಪತ್ಯದಲ್ಲಿ ಬಿರುಕುಂಟಾಗಿ, ಪತ್ನಿ ಪ್ರಿಯಾಂಕಾ ಡಿವೋರ್ಸ್ ಕೇಸ್ ಫೈಲ್ ಮಾಡಿದಾಗ ವಧು ಹತ್ತಿರ ಸಹಾಯ ಕೋರಿ ಬರುತ್ತಾನೆ. ಈ ವೇಳೆ ಕತೆ ಕುತೂಹಲಕರ ತಿರುವು ಪಡೆಯುತ್ತದೆ. ಎರಡೂ ಕತೆಗಳು ಆಧುನಿಕ ಬದುಕಿನ ಸಂಬಂಧಗಳ ಹೊಸ ಸಂಕೀರ್ಣತೆಯನ್ನು ಎಳೆಎಳೆಯಾಗಿ ಬಿಡಿಸಿಡುವ ಹೊಸ ಬಗೆಯ ಕತೆಗಳು. ಭಾವನೆಗಳ ಸಂಘರ್ಷವನ್ನು ಅದರ ಮಿತಿಗಳಾಚೆಗೆ ಜಗ್ಗಿ ಪರೀಕ್ಷಿಗೊಳಪಡಿಸುವ ಈ ಎರಡು ಕತೆಗಳು.

ಇತ್ತೀಚಿನ ಸುದ್ದಿ

ಜಾಹೀರಾತು